ಕೋಟಿ ಕೋಟಿ ಗ್ರಂಥಾಲಯ ಕರ ಪಾವತಿ ಯಾವಾಗ? ಕ್ರಮಕ್ಕೆ ಆಗ್ರಹ ಬಳಿಕ ಸಿಕ್ತು ಉತ್ತರ
ಬೆಂಗಳೂರು, ಜನವರಿ 22: ಬೆಂಗಳೂರು ವ್ಯಾಪ್ತಿಯಲ್ಲಿ ಗ್ರಂಥಾಲಯ ಕರ (ಸೆಸ್) ರೂಪದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಸಂಗ್ರಹಿಸಿರುವ ಕೋಟ್ಯಂತರ ರೂಪಾಯಿ ಹಣವನ್ನು ಸಂಬಂಧಿಸಿದ ಇಲಾಖೆಗೆ ನೀಡಿಲ್ಲ. ಹೀಗಾಗಿ ಪಾಲಿಕೆ ಆಯುಕ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿದೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಬೆಂಗಳೂರಿನ ನಾಗರಿಕ ಸಂಸ್ಥೆಯಿಂದ ಒಟ್ಟು 397 ಕೋಟಿ ರೂಪಾಯಿ ಬಿಡುಗಡೆ ಆಗಬೇಕು. ಇಲಾಖೆಗೆ ಬಾಕಿ ಹಣ ಪಾವತಿಸದ ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕಾಂಗ ಸಮಿತಿ ಆಗ್ರಹಿಸಿದೆ.

ಸಚಿವರಿಂದ ಕರ ಬಿಡುಗಡೆ ಭರವಸೆ
ಇದರ ಬೆನ್ನಲ್ಲೆ ಗ್ರಂಥಾಲಯಕ್ಕೆ ನೀಡಬೇಕಾದ ಬಾಕಿ ಹಣವನ್ನು ಪಾವತಿಸಲು ಖಚಿತಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಭರವಸೆ ಪತ್ರವು ನೀಡಿದ್ದರು. ಬಾಕಿ ಹಣ ಪಾವತಿಗೆ ಸಂಬಂಧಸಿದಂತೆ ಈ ಪತ್ರದಲ್ಲಿ, ಬಿಬಿಎಂಪಿಯು 14 ಮುಖ್ಯ ಆಯುಕ್ತರ ಹೆಸರುಗಳನ್ನು ತಿಳಿಸಿದೆ.
ಬಿಬಿಎಂಪಿ ಈ ಹಿಂದೆ ಉನ್ನತ ಹುದ್ದೆ ಹೊಂದಿದ ಡಾ ಎಸ್ ಸುಬ್ರಹ್ಮಣ್ಯ ಅವರಿಂದ ನಂತರದ ಗೌರವ್ ಗುಪ್ತಾ ಅವರು ಆಯುಕ್ತರಾಗಿದ್ದ ಅವಧಿಯ ವರೆಗೆ ಬಿಬಿಎಂಪಿಯಿಂದ ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಗ್ರಂಥಾಲಯ ಕರ ಹಣ ಬಿಡುಗಡೆ ಮಾಡಿಲ್ಲ.

ಬ್ಯಾಂಕ್ ಖಾತೆ ತೆರೆದು ಬಾಕಿ ಹಣ ಪಾವತಿ
ಮುಂದಿನ ನಾಲ್ಕು ಆರ್ಥಿಕ ವರ್ಷಗಳಲ್ಲಿ 397.37 ಕೋಟಿ ರೂಪಾಯಿ ತೆರಿಗೆ ಹಣವನ್ನು ಹಂತ ಹಂತವಾಗಿ ಗ್ರಂಥಾಲಯ ಇಲಾಖೆಗೆ ಬಿಡುಗಡೆ ಮಾಡಲಾಗುವುದು ಎಂದು ನಾಗರಿಕ ಸಂಸ್ಥೆ ಭರವಸೆ ನೀಡಿದೆ. ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಬ್ಯಾಂಕ್ ಖಾತೆ ತೆರೆಯಲಾಗಿದ್ದು, ನಾಲ್ಕು ಭಾಗಗಳಲ್ಲಿ ಪಾವತಿ ಮಾಡಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಸದ್ಯ ನಗರ ವ್ಯಾಪ್ತಿಯಲ್ಲಿನ ಗುತ್ತಿಗೆದಾರರಿಗೆ ಬಿಲ್ ಪಾವತಿ, ಸಾಲಗಳನ್ನು ತೆರವುಗೊಳಿಸುವುದು ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ಹಾಗೂ ಇನ್ನಿತರ ಕಾರಣಗಳಿಂದ ಗ್ರಂಥಾಲಯದ ತೆರಿಗೆ ಹಣವನ್ನು ಇಲಾಖೆಗೆ ನೀಡುವಲ್ಲಿ ವಿಳಂಬವಾಗಿದೆ ಎಂದು ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಒಟ್ಟು ಆಸ್ತಿ ತೆರಿಗೆಯಲ್ಲಿ ಶೇಕಡಾ 6ರಷ್ಟು ಗ್ರಂಥಾಲಯ ಇಲಾಖೆಗೆ ಗ್ರಂಥಾಲಯ ಕರ ಆಗಿ ಮೀಸಲಿಡಲಾಗುತ್ತಿದೆ. ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿ ಸರ್ಕಾರದ ನೀಡುವ ಹಣ ವರ್ಷಗಳಿಂದಲೂ ಬಾಕಿ ಉಳಿದಿದೆ. ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಇದೀಗ ನಾಲ್ಕು ವರ್ಷಗಳಲ್ಲಿ ಬಾಕಿ ಹಣ ನೀಡುವುದಾಗಿ ಭರವಸೆ ನೀಡಿದೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications