ಬೆಂಗಳೂರಿನ ಅನಧಿಕೃತ ಪಬ್ಸ್, ಬಾರ್ಗಳ ಮೇಲೆ BBMP ಸಮರ, ಈ ದಿಢೀರ್ ನಿರ್ಧಾರ ಏಕೆ?, ಇಲ್ಲಿದೆ ಮಾಹಿತಿ
ಬೆಂಗಳೂರು, ಅಕ್ಟೋಬರ್, 21: ಕೋರಮಂಗಲದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಬಿದ್ದು ವ್ಯಕ್ತಿಯೋರ್ವ ಬಿಲ್ಡಿಂಗ್ನಿಂದ ಹಾರಿ ಬಿದ್ದ ಘಟನೆ ಇನ್ನೂ ಕಣ್ಣಿಗೆ ಕಟ್ಟಿದ ಹಾಗೇ ಇದೆ. ಈ ಘಟನೆ ನಡೆದ ಬಳಿಕ ನಗರದಲ್ಲಿ ಸಾಕಷ್ಟು ಅನಧಿಕೃತ ಬಾರ್ ಮತ್ತು ಪಬ್ಸ್ ಇರುವುದು ಬೆಳಕಿಗೆ ಬಂದಿದೆ. ಅಂತಹ ಅನಧಿಕೃತ ಪಬ್ಸ್, ಬಾರ್ಗಳ ಮೇಲೆ ಬಿಬಿಎಂಪಿ ಸಮರ ಸಾರಿದೆ.
ಕೆಲವು ಕಟ್ಟಡಗಳ ರೂಪ್ಟಾಪ್ಗಳ ಮೇಲೆ ನಿರ್ಮಾಣ ಮಾಡಿರುವ ಬಾರ್ಗಳಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ. ಈ ರೀತಿಯ ರೂಪ್ ಟಾಪ್ ನಿರ್ಮಾಣ ಮಾಡುವಾಗ ಅನುಮತಿ ತೆಗೆದುಕೊಳ್ಳುವ ಅನಿವಾರ್ಯತೆಯಿದೆ. ಆದರೆ ನಗರದ ಅದೆಷ್ಟೋ ಕಡೆ ಅನುಮತಿ ಪಡೆಯದೇ ನಾಯಿ ಕೊಡೆಯಂತೆ ಅಕ್ರಮ ರೂಪ್ಟಾಪ್ ಬಾರ್ಗಳ ನಿರ್ಮಾಣ ಆಗಿದೆ. ಈ ಹಿನ್ನೆಲೆ ರೂಪ್ ಟಾಪ್ ಬಾರ್ ಮೇಲೆ ಬಿಬಿಎಂಪಿ ದಾಳಿ ನಡೆಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ಪರಿಶೀಲನೆ ನಡೆಸಿ ನೋಟಿಸ್ ನೀಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿದ್ದು, ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿರುತ್ತದೆ.
ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ ನಿನ್ನೆ (ಅಕ್ಟೋಬರ್ 20) 232 ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 12 ಉದ್ದಿಮೆಗಳನ್ನು ಮುಚ್ಚಲಾಗಿರುತ್ತದೆ. ಸದರಿ ವಿವರ ಕೆಳಕಂಡಂತಿರುತ್ತದೆ.
| ಕ್ರಮ ಸಂಖ್ಯೆ, | ವಲಯ | ಪರವಾನಿಗೆ ನೀಡಿರುವ ಸಂಖ್ಯೆ | ತಪಾಸಣೆ ನಡೆಸಿರುವ ಸಂಖ್ಯೆ | ನೋಟಿಸ್ ನೀಡಿರುವ ಸಂಖ್ಯೆ | ಮುಚ್ಚಿರುವ ಸಂಖ್ಯೆಯ ವಿವರ |
| 1 | ದಕ್ಷಿಣ | 248 | 30 | 10 | 0 |
| 2 | ಪಶ್ಚಿಮ | 167 | 78 | 20 | 0 |
| 3 | ಪೂರ್ವ | 222 | 25 | 18 | 07 |
| 4 | ರಾಜರಾಜೇಶ್ವರಿನಗರ | 75 | 08 | 06 | 0 |
| 5 | ದಾಸರಹಳ್ಳಿ | 34 | 29 | 08 | 0 |
| 6 | ಯಲಹಂಕ | 110 | 18 | 0 | 0 |
| 7 | ಮಹದೇವಪುರ | 161 | 36 | 16 | 03 |
| 8 | ಬೊಮ್ಮನಹಳ್ಳಿ | 101 | 08 | 08 | 02 |
| ಒಟ್ಟು | 1118 | 232 | 86 | 12 | |
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications