Virat Kohli: ಆರ್ಸಿಬಿ ತಂಡದ ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ಬಾರ್ ಅಂಡ್ ರೆಸ್ಟೊರೆಂಟ್ಗೆ ಬಿಬಿಎಂಪಿ ನೋಟಿಸ್
Virat Kohli: ಆರ್ಸಿಬಿ ತಂಡದ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನಲ್ಲಿ ಇರುವ ಒನ್ 8 ಕಮ್ಯೂನ್ ಬಾರ್ & ಪಬ್ಗೆ ಬಿಬಿಎಂಪಿ ನೋಟಿಸ್ ನೀಡಿದೆ. ಹಾಗಾದರೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇರುವ ಬೆಂಗಳೂರಿನ ಬಾರ್ ಮತ್ತು ಪಬ್ಗೆ ಬಿಬಿಎಂಪಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಫೈರ್ ಸೇಫ್ಟಿ ಎನ್ಒಸಿ ಪಡೆಯದ ಹಿನ್ನೆಲೆ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ ಅಂಡ್ ರೆಸ್ಟೋರೆಂಟ್ಗೆ ನೋಟಿಸ್ ನೀಡಲಾಗಿದ್ದು, ಬಾರ್ನಲ್ಲಿ ಅಗ್ನಿ ಸುರಕ್ಷತೆ ಅಳವಡಿಕೆ ಮಾಡಿಲ್ಲ ಹಾಗೂ ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆಯದೇ ಕಾನೂನು ಉಲ್ಲಂಘಿಸಿದ ಹಿನ್ನೆಲೆ ನೋಟಿಸ್ ನೀಡಲಾಗಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವವರು ಪಾಲಿಕೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಶಾಂತಿನಗರ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಕೂಡ ವಿರಾಟ್ ಕೊಹ್ಲಿ ಅವರಿಗೆ ನೀಟಿಸ್ ಜಾರಿ ಮಾಡಲಾಗಿತ್ತು. ಆಗ ಉತ್ತರಿಸದೇ ನಿರ್ಲಕ್ಷ್ಯ ತೋರಿಸಿದ್ವದರು. ಇದೀಗ 7 ದಿನದೊಳಗೆ ಸಮಜಾಯಿಸಿ ನೀಡದಿದ್ರೆ, ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಇರುವಂತಹ ಹಲವಾರು ರೆಸ್ಟೋರೆಂಟ್ ಬಾರ್ ಹಾಗೂ ಪಬ್ಗಳು ಅಗ್ನಿ ಶಾಮಕ ದಳದ ಯಾವುದೇ ಸುರಕ್ಷಿತೆಗಳು ಇಲ್ಲ. ಈ ಹಿಂದೆ ಬೆಂಗಳೂರಿನಲ್ಲಿ ಅಗ್ನಿ ಅವಘಡಗಳು ನಡೆದಾಗ ಹಲವಾರು ಜನ ಸಾವು ನೋವು ಅನುಭವಿಸಿದ್ದಾರೆ.
ಕಾರ್ಲ್ಟನ್ ಭವನದಲ್ಲಿ ಶಾರ್ಟ್ ಸರ್ಕ್ಯೂಟ್ ಆದಾಗ ಅಗ್ನಿ ಅವಘಡದಿಂದ ಜೀವ ಉಳಿಸಿಕೊಳ್ಳಲು ಮಹಡಿಯಿಂದ ಜನ ಜಿಗಿದಿದ್ದರು. ಇಂತಹ ಅವಘಡಗಳು ಮರುಕಳಿಸಬಾರದು ಎಂದು ಬಿಬಿಎಂಪಿ ಹಾಗೂ ಅಗ್ನಿ ಶಾಮಕದಳ ಅಗ್ನಿ ಸುರಕ್ಷತೆ ಕಡ್ಡಾಯಗೊಳಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಹೇಳುತ್ತಾರೆ.
ಸುಮಾರು ಕಟ್ಟಡಗಳಲ್ಲಿ ಅಗ್ನಿ ಶಾಮಕ ಸುರಕ್ಷತೆ ಕ್ರಮಗಳು ಇಲ್ಲದಿರುವುದರಿಂದ ಅಂತಹ ಕಟ್ಟಡಗಳಿಗೆ ಲೈಸೆನ್ಸ್ ಕೊಡಬಾರದು. ಅಗ್ನಿ ಸುರಕ್ಷತೆ ಇರದ ಕಟ್ಟಡಗಳಲ್ಲಿ ಕಾರ್ಯಚಟುವಟಿಕೆ ಮಾಡದಂತೆ ನಿಯಮ ತರಲಾಗಿದೆ. ಆದರೆ, ನಿಯಮಗಳನ್ನು ಮೀರಿ ಪಬ್ಗಳನ್ನು ನಡೆಸಲಾಗುತ್ತಿದೆ ಎಂದರು.
ಇದೇ ರೀತಿಯಾಗಿ ಎಂಜಿ ರಸ್ತೆಯ ರತ್ನ ಕಂಪ್ಲೇಕ್ಸ್ನಲ್ಲಿರುವ ಹೈ ರೈಸ್ ಬಿಲ್ಡಿಂಗ್ನಲ್ಲಿರುವ ರೆಸ್ಟೋರೆಂಟ್ನಲ್ಲಿ ಅಗ್ನಿಶಾಮಕ ದಳದ ಸುರಕ್ಷಿತ ಕ್ರಮ ತಗೆದುಕೊಂಡಿಲ್ಲ. ಈ ವಿಚಾರವಾಗಿ ನಾವು ಹೋರಾಟ ನಡೆಸಿದ್ದೇವೆ.
ಬಿಬಿಎಂಪಿ ಗಮನಕ್ಕೆ ತಂದಿದ್ದೇವೆ. ಇದೀಗ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಸುರಕ್ಷತೆ ಕಾಪಾಡುವಲ್ಲಿ ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳ ಎಷ್ಟಮಟ್ಟಿಗೆ ಮುಂದಾಗುತ್ತಾರೆ ಕಾದು ನೋಡಬೇಕಿದೆಯೆಂದು ಹೇಳಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications