ಬಿಬಿಎಂಪಿ: ಜೈವಿಕ ಅನಿಲ ಘಟಕದ ಪ್ರಾಯೋಗಿಕ ಕಾರ್ಯಾರಂಭಕ್ಕೆ ಚಾಲನೆ
ಬೆಂಗಳೂರು, ಆಗಸ್ಟ್ 29: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾನಗರದ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದೆ. ಈ ಘಟಕೆ ಅಧಿಕೃತ ಕಾರ್ಯಾಚರಣೆಗೂ ಮೊದಲು ಮಂಗಳವಾರ ಪ್ರಾಯೋಗಿಕವಾಗಿ ಆರಂಭಕ್ಕೆ ಚಾಲನೆ ನೀಡಲಾಯಿತು.
ಬಿಬಿಎಂಪಿ ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ಅವರು ಜೈವಿಕ ಅನಿಲ ಘಟಕ ಪರಿಶೀಲಿಸಿದ ಬಳಿಕ ಪ್ರಾಯೋಗಿಕ ಆರಂಭಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಸಂಸ್ಕರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಇರುವ ಜೈವಿಕ ಅನಿಲ ಘಟಕಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸಿ ಅದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಾಭಿರಾಮನಗರದಲ್ಲಿ ಸ್ಥಗಿತವಾಗಿದ್ದ ಜೈವಿಕ ಅನಿಲ ಘಟಕವನ್ನು ಉನ್ನತೀಕರಿಸಲಾಗಿದೆ. ಪ್ರತಿನಿತ್ಯ 5 ಟನ್ ಹಸಿ ತ್ಯಾಜ್ಯವನ್ನು ಸ್ಕಂಸ್ಕರಣೆ ಮಾಡಲಿದೆ. ಅದರಿಂದ 300 ಕ್ಯೂಬಿಕ್ ಮೀಟರ್ ಜೈವಿಕ ಅನಿಲ ಉತ್ಪಾದಿಸಬಹುದಾಗಿದೆ. ಈ ಸಂಬಂಧ ಕೂಡಲೆ ಪ್ರಾಯೋಗಿಕವಾಗಿ ಪ್ರಾರಂಭಿಸಿ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ವಿದ್ಯುತ್ ಆಗಿ ಪರಿವರ್ತಿಸಿ ಹತ್ತಿರದ ಉದ್ಯಾನವನ ಹಾಗೂ ಬೀದಿ ದೀಪಗಳಿಗೆ ಬಳಸಿಕೊಳ್ಳಬೇಕು ಎಂದು ಹೇಳಿದರು.
ಜೈವಿಕ ಅನಿಲ ಘಟಕದಿಂದ ಬರುವ ತ್ಯಾಜ್ಯದ ಸ್ಲರಿಯನ್ನು ಉದ್ಯಾನವನಗಳಿಗೆ ಬಳಸಿಕೊಳ್ಳಬಹುದಾಗಿದ್ದು, ದಕ್ಷಿಣ ವಲಯ ವ್ಯಾಪ್ತಿಯಲ್ಲಿರುವ ಉದ್ಯಾನಗಳಿಗೆ ಅದನ್ನು ಬಳಸಿಕೊಳ್ಳಲು ಸೂಚನೆ ನೀಡಿದರು.

ಯಡಿಯೂರಿನಲ್ಲಿ ಜೈವಿಕ ಅನಿಲ ಘಟಕ
ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ ಬರುವ ಜೈವಿಕ ಅನಿಲ ಘಟಕವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಕಾರ್ಯವೈಖರಿಯನ್ನು ಪರಿಶೀಲನೆ ನಡೆಸಲಾಯಿತು. ಸದರಿ ಘಟಕವು ಪ್ರತಿನಿತ್ಯ 5 ಟನ್ ಹಸಿ ತ್ಯಾಜ್ಯವನ್ನು ಸಂಸ್ಕರಣೆ ಮಾಡಲಿದೆ. ಅದರಿಂದ 300 ಕ್ಯೂಬಿಕ್ ಮೀಟರ್ ಜೈವಿಕ ಅನಿಲ ಉತ್ಪತ್ತಿಯಾಗುತ್ತಿದೆ. ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ವಿದ್ಯುತ್ ಆಗಿ ಪರಿವರ್ತಿಸಿ ಉದ್ಯಾನ ಹಾಗೂ ಬೀದಿ ಬದಿ ವಿದ್ಯುತ್ ದೀಪಗಳ ಬಳಕೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಪ್ರಕಟಣೆ ಮೂಲಕ ಮಾಹಿತಿ ನೀಡಿದರು.
ಜೈವಿಕ ಅನಿಲ ಘಟಕ ಪರಿಶೀಲನೆಯ ವೇಳೆ ಮುಖ್ಯ ಅಭಿಯಂತರರಾದ ರಾಜೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಂತೋಶ್, ಶಶಿಕಲಾ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru Waste: ಬೆಂಗಳೂರಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಹೊಸ ಸುಧಾರಣೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications