ಬಿಬಿಎಂಪಿ ಅಧಿಕಾರಿಗಳಿಂದ ದಾಳಿ: ಲಾರಿಯಲ್ಲಿದ್ದ 19.5 ಟನ್ಗೂ ಅಧಿಕ ಪ್ಲಾಸಿಕ್ ವಶ, ದಂಡ ಹೇರಿಕೆ
ಬೆಂಗಳೂರು, ಡಿಸೆಂಬರ್ 15: ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರವಾರ ಪದ್ಮನಾಭ ನಗರದಲ್ಲಿ ಒಂದು ಹಾಗೂ ಚಿಕ್ಕಪೇಟೆ ವ್ಯಾಪ್ತಿಯಲ್ಲಿ 2 ಲಾರಿ ಸೇರಿ ಒಟ್ಟು 3ಟ್ರಕ್ಗಳಲ್ಲಿ ಸುಮಾರು 19.5 ಟನ್ ಏಕಬಳಕೆಯ ಪ್ಲಾಸ್ಟಿಕ್ ಕವರ್ಗಳನ್ನು ಜಪ್ತಿ ಮಾಡಲಾಗಿದ್ದು, 70,000 ರೂ.ದಂಡ ವಿಧಿಸಲಾಗಿದೆ.
ಬೆಂಗಳೂರಿನ ಪದ್ಮನಾಭನಗರ ವ್ಯಾಪ್ತಿಯಲ್ಲಿ ಗುರುವಾರ ಬೆಳಗಿನಜಾವ ಸುಮಾರು 2 ಗಂಟೆಗೆ ವೇಳೆಗೆ ಲಾರಿ (ಸಂಖ್ಯೆ KA16 AA0035) ಅನುಮಾನಾಸ್ಪದವಾಗಿ ಸಂಚರಿಸುತ್ತಿತ್ತು. ಈ ಬಗ್ಗೆ ಸಲ್ಲಿಕೆಯಾದ ದೂರಿನ ಆಧಾರದಲ್ಲಿ ದಾಳಿ ನಡೆಸಿದ ಬಿಬಿಎಂಪಿ ಅಧಿಕಾರಿಗಳು ಲಾರಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ.
ಈ ತಂಡದಲ್ಲಿ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಅಧಿಕ್ಷಕ ಎಂಜಿನಿಯರ್ ವಿಶ್ವನಾಥ್, ಮಾರ್ಷಲ್ ಮೇಲ್ವಿಚಾರಕ ಅಧಿಕಾರಿ ಮತ್ತು ತಂಡದ ಜೊತೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರು ದಕ್ಷಿಣ ವಲಯದ ಅಧಿಕಾರಿ ವಸಂತ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ವೇಳೆ ಲಾರಿ ಗುಜಾರಾತಿನ ಎಂಎಸ್.ಲಾಜಿಸ್ಟಿಕ್ ನಿಂದ ಬೆಂಗಳೂರಿಗೆ ಬಂದಿದೆ. ವಾಹನದಲ್ಲಿ ಸರಿ ಸುಮಾರು 12 ಟನ್ಗಳಷ್ಟು ನಿಷೇಧಿತ ಏಕ ಬಳಕೆ (ಒಂದೇ ಬಾರಿ ಬಳಸಬಹುದಾದ)ಯ ಪ್ಲಾಸ್ಟಿಕ್ ಕವರ್ ಇರುವುದು ಗೊತ್ತಾಗಿದೆ. ನೀಷೆಧಿತ ಪ್ಲಾಸ್ಟಿಕ್ಅನ್ನು ವಶಪಡಿಸಿಕೊಂಡು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾನ್ಯತೆ ಪಡೆದಿರುವ ಸರ್ವೆ ನಂ.176/2, ಬ್ಯಾಲಕೆರೆ ವಿಲೇಜ್, ಹೆಸರಘಟ್ಟ ಹೋಬಳಿ, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಸ್.ರಿಸೈಕಲ್ ಎಂಬ ಸಂಸ್ಥೆಯಲ್ಲಿ ನಾಶಪಡಿಸಲಾಗಿದೆ.
ಚಿಕ್ಕಪೇಟೆ: 7.5 ಟನ್ ನಿಷೇಧಿತ ಪ್ಲಾಸಿಕ್ ವಶ
ಬಿಬಿಎಂಪಿ ವ್ಯಾಪ್ತಿಯ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವಾರ್ಡ್ 9 ಸಂಖ್ಯೆ 145ರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಿಸಲಾಗುತ್ತಿತ್ತು. ಮೆ.ಎಂ.ಎಸ್ ಲಾಜಿಸ್ಟಿಕ್ಸ್ ಕಂಪನಿಯ ಎರಡು ಲಾರಿ (ಸಂಖ್ಯೆ KA53 D 7358 ಮತ್ತು NL01 AE3095) ಗಳನ್ನು ವಶಕ್ಕೆ ಪಡೆಯಲಾಗಿದೆ.

ಬಿಬಿಎಂಪಿ ದಕ್ಷಿಣ ವಲಯದ ಸಹಾಯಕ ಕಾರ್ಯಪಾಲಕ ಅಭಿಯಂತರ ರಂಗಸ್ವಾಮಿ. ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಪ ಪರಿಸರ ಅಧಿಕಾರಿಗ ಗುರುದೇವ್ ಪ್ರಕಾಶ್.ಜಿ.ಎಂ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಅವರು ಎರಡು ಲಾರಿಗಳಲ್ಲಿನ ಸುಮಾರು 7.5 ಟನ್ ನಷ್ಟು ನಿಷೇಧಿತ ಪಾಸ್ಟ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮೆ.ಎಂ.ಎಸ್ ಲಾಜಿಕ್ಟಿಕ್ಸ್ ಸಂಸ್ಥೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿರುವ ಸಂಬಂಧ 70,000ರೂ. ದಂಡ ವಿಧಿಸಲಾಗಿದೆ.
ಸದರಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಮಾನ್ಯತೆ ಪಡೆದಿರುವ ಸರ್ವೆ ನಂ.176/2, ಬ್ಯಾಲಕೆರೆ ವಿಲೇಜ್, ಹೆಸರಘಟ್ಟ ಹೋಬಳಿಯ ಎಸ್.ರಿಸೈಕಲ್ ಸಂಸ್ಥೆಯಲ್ಲಿ ನಾಶಪಡಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications