ಬಿಬಿಎಂಪಿಯಿಂದ ಅನ್ಯ ಭಾಷೆಯ ನಾಮಪಲಕ ತೆರವು
ಬೆಂಗಳೂರು, ಜು.30: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅನ್ಯಭಾಷಾ ನಾಮಫಲಕಗಳನ್ನು ತೆರವುಗೊಳಿಸುವಂತೆ ಮೇಯರ್ ಸಂಪತ್ರಾಜ್ ನಿರ್ದೇಶಿಸಿದ್ದು ಸೋಮವಾರದಿಂದ ತೆರವು ಕಾರ್ಯ ಆರಂಭಗೊಂಡಿದೆ.
ನಗರದಲ್ಲಿ ಅನ್ಯ ಭಾಷೆಯ ಫಲಕಗಳು ರಾರಾಜಿಸುತ್ತಿವೆ ಅದಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ ಎಂದು ವಿವಿಧ ಕನ್ನಡಪರ ಸಂಘಟನೆಗಳು ಮೇಯರ್ ಭೇಟಿ ಮಾಡಿ ಈ ಕನ್ನಡ ವಿರೋಧಿ ಚಟುವಟಿಕೆಗಳನ್ನು ತಡೆಗಟ್ಟಲು ಪಾಲಿಕೆಯು ತೆರವು ಕಾರ್ಯಚರಣೆಯನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.
ಹಾಗಾಗಿ ಸೋಮವಾರದಿಂದ ಅನ್ಯಭಾಷೆಗಳ ನಾಮಫಲಕ ತೆರವು ಕಾರ್ಯ ಆರಂಭಗೊಂಡಿದೆ. ಬೇರೆ ಭಾಷೆಯ ನಾಮ ಫಲಕಗಳು ಕಂಡುಬಂದಲ್ಲಿ ತಕ್ಷಣವೇ ತೆರವು ಗೊಳಿಸಿ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸುವುದಾಗಿ ಮೇಯರ್ ಸೂಚನೆ ನೀಡಿದ್ದಾರೆ.

ಪಾಲಿಕೆಯ ಆರೋಗ್ಯ ವಿಭಾಗದಿಂದ ನೀಡುವ ವಾಣಿಜ್ಯ ಪರವಾನಗಿ ಸಂದರ್ಭದಲ್ಲಿ ಅಂಗಡಿ ಮುಗ್ಗಟ್ಟುಗಳು, ಹೋಟೆಲ್ಗಳು, ಕಂಪನಿಗಳು ಹಾಗೂ ಇತರೆ ಪರವಾನಗಿ ಪಡೆದಿರುವ ವ್ಯಾಪಾರಿಗಳು ತಮ್ಮ ಅಂಗಡಿ-ಶಾಖೆಯ ಮುಂದೆ ಅಳವಡಿಸಿರುವ ನಾಮಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಹಾಕಿರಬೇಕು.
ಶೇ.60ರಷ್ಟು ಕನ್ನಡ ಭಾಷೆಯಲ್ಲಿ ಇರುವಂತೆ ಅಂದರೆ ಸ್ಪಷ್ಟವಾಗಿ ಎದ್ದು ಕಾಣಿಸುವಂತೆ ಕನ್ನಡ ಪದಗಳನ್ನು ಉಪಯೋಗಿಸಬೇಕು. ಒಂದು ವೇಳೆ ಕನ್ನಡ ಭಾಷೆಯ ನಾಮಫಲಕ ಕಾಣಿಸದಿದ್ದರೆ ಪರವಾನಗಿಯನ್ನು ಕೂಡಲೇ ರದ್ದುಗೊಳಿಸಲಾಗುತ್ತದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications