ವೋಟರ್ ಐಡಿ ಕಾರ್ಡ್ಗೆ ಆಧಾರ್ ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಆಗಸ್ಟ್ 22: ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರ ಅಂತಿಮ ಕರಡು ಪಟ್ಟಿಯನ್ನು ಹೊರಡಿಸಲು ಬಿಬಿ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ವೋಟರ್ ಐಡಿ ಕಾರ್ಡ್ಅನ್ನು ಆಧಾರ್ ಜೊತೆ ಲಿಂಕ್ ಮಾಡುವಂತೆ ಬಿಬಿಎಂಪಿ ಆದೇಶವನ್ನು ರಾಜ್ಯ ಚುನಾವಣಾ ಆಯೋಗ ಟ್ವೀಟ್ ಮಾಡಿದೆ.
ಬಿಬಿಎಂಪಿ ವ್ಯಾಪ್ತಿಯ್ಲಿ ವಾಸಿಸಿವ ಅದೆಷ್ಟೋ ಜನರು ವಲಸಿಗರಾಗಿದ್ದಾರೆ. ಬೇರೆ ಬೇರೆ ರಾಜ್ಯದಿಂದ, ರಾಜ್ಯದ ಇತರೆ ಜಿಲ್ಲೆಗಳಿಂದ ವಲಸೆ ಬಂದಿರುತ್ತಾರೆ. ತಮ್ಮ ಮೂಲ ಸ್ಥಳದಲ್ಲೊಂದು ಮತದಾನ ಗುರುತಿನ ಚೀಟಿ ಮತ್ತು ಬೆಂಗಳೂರಿನಲ್ಲೂ ಮತ್ತೊಂದು ಗುರುತಿನ ಚೀಟಿಯನ್ನು ಇಟ್ಟುಕೊಂಡಿರುತ್ತಾರೆ. ಎರಡು ಕಡೆ ಗುರುತಿನ ಚೀಟಿಯನ್ನು ಪಡೆಯುವಂತಿಲ್ಲ. ಮತದಾನ ಗುರುತಿನಿ ಚೀಟಿಯನ್ನು ಆಧಾರ್ ಜೊತೆಗೆ ಲಿಂಕ್ ಮಾಡಿದರೇ ಆ ಮತದಾನ ಗುರುತಿನ ಸತ್ಯಾಂಶ ಬಯಲಾಗಲಿದೆ. ಈ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಜನ ಸಾಮಾನ್ಯರು ಸ್ವಯಂ ಪ್ರೇರಿತರಾಗಿ ಆಧಾರ್ ಗೆ ಮತದಾನ ಗುರುತಿನ ಚೀಟಿ ಲಿಂಕ್ ಮಾಡಲು ಬಿಬಿಎಂಪಿ ಕೋರಿಕೊಂಡಿದೆ.

ಮತದಾರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಹೇಗೆ?
ಎಲ್ಲಾ ಮತದಾರರು ತಮ್ಮ ಕುಟುಂಬದ ಎಲ್ಲಾ ಮತದಾರರ ಗುರುತಿನ ಚೀಟಿಗೆ App ಮುಖಾಂತರ ಮನೆಯಲ್ಲಿ ಕುಳಿತುಕೊಂಡು ಮತದಾರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ನಂಬರ್ಗೆ ಲಿಂಕ್ ಮಾಡಬಹುದು.
1. play storeಗೆ ಹೋಗಿ voter help line appನ್ನು Install ಮಾಡಿಕೊಳ್ಳಬೇಕು.
2. appನ್ನು Install ಮಾಡುವಾಗ permission ಎಲ್ಲವೂ allow ಎಂದು ಮಾಡಬೇಕು.
3. appನ್ನು Install ಮಾಡಿಕೊಂಡು app ಕೆಳಗಡೆ ಎಡಬದಿಯಲ್ಲಿರುವ Explore option ಮೇಲೆ ಕ್ಲಿಕ್ ಮಾಡಬೇಕು.
4.Electroral Authentication Form 16B select ಮಾಡಿಕೊಳ್ಳಬೇಕು.
5. ಮೊಬೈಲ್ ನಂಬರ್ ಅನ್ನು ಹಾಕಬೇಕು.
6. ನಿಮ್ಮ ಮೊಬೈಲ್ ಗೆ ಒಂದು ಒಟಿಪಿ ಬರುತ್ತದೆ. ಆ ನಂಬರ್ ಎಂಟ್ರಿಮಾಡಬೇಕು, ವೆರಿಫೈ ಅಂತ ಮಾಡಬೇಕು.
7. ನಿಮ್ಮ ಎಪಿಕ್ ನಂಬರ್ ಹಾಕಬೇಕು( ಚುನಾವಣಾ ಗುರುತಿನ ಚೀಟಿ ನಂಬರ್) ಮತ್ತು ಸ್ಟೇಟ್ ಸೆಲೆಕ್ಟ್ ಮಾಡಬೇಕು.

8. ನಿಮ್ಮ ಆಧಾರ್ ನಂಬರ್ ನಮೂದಿಸಬೇಕು.
9. ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು.
10. EMail Id ನಮೂ ಇರದಿದ್ದರೇ ಹಾಗಯೇ ಖಾಲಿ ಬಿಡಿ.
11. ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ.
12. Proceed option ಒತ್ತಿ.
13. Confirm button ಒತ್ತಿ.
14. Successfully ಅಂತ ಒಂದು ref Number ಬರುತ್ತದೆ.
ಈ ಹಂತಗಳನ್ನು ಫಾಲೋ ಮಾಡುವ ಮೂಲಕ ಮತದಾರ ಗುರುತಿನ ಚೀಟಿಗೆ ಆಧಾರ್ ಅನ್ನು ಸ್ವಯಂ ಪ್ರೇರಣೆಯಿಂದ ಲಿಂಕ್ ಮಾಡಲು ಬಿಬಿಎಂಪಿ ಕೋರಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ಬೆಂಗಳೂರು ಮತದಾರರ ಪಟ್ಟಿ: ನಗರದಲ್ಲಿ 11 ಲಕ್ಷ ಮತದಾರರು ಕಾಣೆಯಾದ್ರಾ, ಏನಿದು ಜಿಬಿಎ ಎಲೆಕ್ಷನ್ ಲೋಪ: ಕೃಷ್ಣಭಟ್ ಬರಹ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications