Ejipura Flyover: ರಾಮಲಿಂಗಾ ರೆಡ್ಡಿ ನಿರ್ದೇಶನ ಮೇರೆಗೆ ಬಿಬಿಎಂಪಿ ಮಹತ್ವದ ಆದೇಶ
ಬೆಂಗಳೂರು, ಮಾರ್ಚ್ 14: ಬೆಂಗಳೂರಿನ ಸರ್ಜಾಪುರ ರಸ್ತೆಗೆ ಅಡ್ಡಲಾಗಿ ಹಾದು ಹೋಗುವ ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಇದೀಗ ವೇಗ ನೀಡಲಾಗುತ್ತಿದೆ. ಭೂಮಿ ನೀಡಲು ಆಸ್ತಿ ಮಾಲೀಕರು ಒಪ್ಪಿದ್ದಾರೆ. ಇದರ ಬೆನ್ನಲ್ಲೆ ಯೋಜನೆ ತ್ವರಿತ ಪೂರ್ಣಗೊಳಿಸಲು ಅನುಕೂಲವಾಗುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವರ ನಿರ್ದೇಶನ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಭಿಯಂತರ ನೇಮಿಸಿ ಆದೇಶಿಸಿದೆ.
ಈಗಾಗಲೇ ಆಮೆ ಗತಿಯಲ್ಲಿ ಸಾಗಿ ಬಂದ ಕೋರಮಂಗಲದ ಈಜಿಪುರ ಮೇಲ್ಸೇತುವೆ ಕಾಮಗಾರಿ ಕೆಲಸ ಇನ್ನೂ ತಡವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಸಚಿವರು ಪರಿಶೀಲಿಸಿದ್ದರು. ಬಿಬಿಎಂಪಿ ಅಧಿಕಾರಿಗಳು ಸ್ಥಳದಲ್ಲಿದ್ದರು. ಆಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಲು ಪ್ರತ್ಯೇಕ ಅಭಿಯಂತರರ ತಂಡ ರಚಿಸಲು ಸೂಚಿಸಿದ್ದರು.

ಸಚಿವರ ಸೂಚನೆ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಭಿಯಂತರರ ತಂಡ ರಚನೆ ಕುರಿತು ಆದೇಶಿಸಿದ್ದಾರೆ. ಬಿಬಿಎಂಪಿ ಯ ಮುಖ್ಯ ಆಯುಕ್ತರು, ಇನ್ನು ಮುಂದೆ ಕೇಂದ್ರ ಕಛೇರಿಯ ಗುಣನಿಯಂತ್ರಣ / ಗುಣಭರವಸೆ ವಿಭಾಗದಿಂದ "ಈಜಿಪುರ ಮೇಲೇತುವೆ ಯೋಜನೆ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋರಮಂಗಲದ "ಈಜಿಪುರ ಮೇಲ್ವೇತುವ ಯೋಜನೆ' ಕಾಮಗಾರಿ ಪ್ರಸ್ತುತ ಯೋಜನೆ-ಕೇಂದ್ರ ವಿಭಾಗದಿಂದ ನಿರ್ವಹಿಸಲಾಗುತ್ತಿರುತ್ತದೆ. ಈಜಿಪುರ ಮೇಲ್ಸೇತುವೆ ಕಾಮಗಾರಿ ಯೋಜನೆಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಶೀಘ್ರವಾಗಿ ಪೂರ್ಣಗೊಳಿಸಲು ಸರ್ಕಾರ ಸಜ್ಜಾಗಿದೆ. ಅದಕ್ಕಾಗಿ ತಂಡ ರಚಿಸಲಾಗಿದೆ.

'ಈಜಿಪುರ ಮೇಲೇತುವೆ ಯೋಜನೆ" ಕಾಮಗಾರಿ ಪೂರ್ಣಗೊಳ್ಳುವ ವರೆಗೆ ಈ ಅಭಿಯಂತರರ ತಂಡದಲ್ಲಿ ಡಾ. ರಾಘವೇಂದ್ರ ಪ್ರಸಾದ್ ಬಿ. ಜಿ ಮುಖ್ಯ ಅಭಿಯಂತರರು (ಗುಣನಿಯಂತ್ರಣ / ಗುಣಭರವಸೆ) ರವರ ಅಧೀನದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಣೆಗೆ ನೇಮಕವಾಗಿದ್ದಾರೆ. ಇವರೊಂದಿಗೆ ಎನ್. ಚಂದ್ರಶೇಖರ್ ಕಾರ್ಯಪಾಲಕ ಅಭಿಯಂತರರು- ಕಾರ್ಯಪಾಲಕ ಅಭಿಯಂತರರು (ಯೋಜನೆ-ಕೇಂದ್ರ/1), ಸಂದೇಶ್ ಶೆಟ್ಟಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- ಮುಖ್ಯ ಅಭಿಯಂತರರು (ಟಿ.ವಿ.ಸಿ.ಸಿ) ಕಛೇರಿ, ರಂಜಿತ್ ಜೆ. ಎಲ್ ಸಹಾಯಕ ಅಭಿಯಂತರರು- ಕಾರ್ಯಪಾಲಕ ಅಭಿಯಂತರರು (ಯೋಜನೆ-ಕೇಂದ/9) ಇವರುಗಳು ಮುಖ್ಯ ಅಭಿಯಂತರರು (ಗುಣನಿಯಂತ್ರಣ / ಗುಣಭರವಸೆ) ಅವರಿಗೆ ಸಹಕಾರ ನೀಡಲಿದ್ದಾರೆ. ಮೇಲ್ವೇತುವೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಶ್ರಮಿಸಲಿದ್ದಾರೆ.
ಭೂ ಸ್ವಾಧೀನ ಸಮಸ್ಯೆಗೆ ಮುಕ್ತಿ, ವರ್ಷಾಂತ್ಯಕ್ಕೆ ಯೋಜನೆ ಪೂರ್ಣ
ಗುತ್ತಿಗೆದಾರರ ಕಂಪನಿ ಬದಲಾವಣೆ, ಭೂಮಿ ಸ್ವಾಧೀನ ಸಮಸ್ಯೆಯಿಂದ ಈಜಿಪುರ ಮೇಲ್ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿದೆ.
ಇದರಿಂದ ಈ ಭಾಗದ ಸವಾನ ಸವಾರರಿಗೆ ತೊಂದರೆ ಉಂಟಾಗಿತ್ತು. ಟ್ರಾಫಿಕ್ ಸಿಗ್ನ್ನಲ್ಲಿ ಹೆಚ್ಚು ಸಮಯ ನಿಲ್ಲುವಂತಾಗಿದೆ. ಸದ್ಯ ಸರ್ಕಾರದ ಮಹತ್ವದ ಹೆಜ್ಜೆಯಿಂದಾಗಿ 30 ಹೆಚ್ಚು ಆಸ್ತಿ ಮಾಲೀಕರು ಭೂಮಿ ನೀಡಲು ಒಪ್ಪಿದ್ದಾರೆ. ಹೀಗಾಗಿ ಕಾಮಗಾರಿ ಪುನಾರಂಭಗೊಂಡು, ಇದೇ ವರ್ಷಾಂತ್ಯಕ್ಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications