Bengaluru Tunnel Road: 20 ಕಿಮೀ ಸುರಂಗ ರಸ್ತೆ ಕಾರಿಡಾರ್ ವರದಿ ಸಿದ್ಧ: ಟೆಂಡರ್ಗೆ ಸೂಚನೆ
ಬೆಂಗಳೂರು, ಜೂನ್ 06: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದೆ. ಇದರ ತಡೆಗೆ ಕೇವಲ ಒಂದೆರಡು ಕಿಲೋ ಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣದಿಂದ ಪ್ರಯೋಜನವಿಲ್ಲ ಎಂದು ಬಿಬಿಎಂಪಿ ಅಭಿಪ್ರಾಯಪಟ್ಟಿದೆ. ಉದ್ದೇಶಿತ ಬೃಹತ್ ಸುರಂಗ ಕಾರಿಡಾರ್ ನಿರ್ಮಾಣಕ್ಕೆ ವರದಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದೆ.
ಈ ಕುರಿತು ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬೆಂಗಳೂರಿನ ಟ್ರಾಫಿಕ್ ಇಳಿಕೆಗೆ ಕೇವಲ 2-3 ಕೀಲೋ ಮೀಟರ್ ಸುರಂಗ್ ಮಾರ್ಗ ನಿರ್ಮಿಸಿಸದರೆ ಸಾಲದು. ಹೀಗಾಗಿ ಉದ್ದೇಶಿತ ಸುರಂಗ ರಸ್ತೆ ಯೋಜನೆಯ ಭಾಗವಾಗಿ 18-20 ಕಿಲೋ ಮೀಟರ್ ಉದ್ದದ ಸುರಂಗ ರಸ್ತೆ ಕಾರಿಡಾರ್ನ ವರದಿ ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಪೂರ್ವದಿಂದ ಪಶ್ಚಿಮಕ್ಕೆ ಹಾಗೂ ಉತ್ತರದಿಂದ ದಕ್ಷಿಣಕ್ಕೆ ಒಟ್ಟು ಎರಡು ಸುರಂಗ ಮಾರ್ಗ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಖಾಸಗಿ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿತ್ತು. ಆ ಕಂಪನಿ ವರದಿ ನೀಡಿದೆ. ಶೀಘ್ರವೇ ಸಲ್ಲಿಸಲಾಗುವುದು ಎಂದರು.
ಆರಂಭಿಕ ಪ್ರಕ್ರಿಯೆ ಬಳಿಕ ಕಾಮಗಾರಿ ಆರಂಭ
ಇನ್ನೂ ಯೋಜನೆಗೆ ಬೇಕಾದ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಆದಷ್ಟು ಶೀಘ್ರವೇ ಸರ್ಕಾರದಿಂದ ಟೆಂಡರ್ ಆಹ್ವಾನಿಸಲಾಗುವುದು. ಹೀಗೆ ಒಂದೊಂದಾಗಿ ಆರಂಭಿಕ ಪ್ರಕ್ರಿಯೆ ಪೂರ್ಣಗೊಳಿಸಿ ಉದ್ದೇಶಿತ ಯೋಜನೆಯ ಕಾಮಗಾರಿಗೆ ಕೈ ಹಾಕಲಾಗುವುದು ಎಂದು ಅವರು ವಿವರಿಸಿದರು.
ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ 18-20 ಕಿಲೋ ಮೀಟರ್ ಉದ್ದದ ಸುರಂಗ ರಸ್ತೆ ಮಾರ್ಗ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲು ಸಿದ್ಧತೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ವಿಮಾಣ ನಿಲ್ದಾಣದತ್ತ ಸಂಚಾರ ಸರಾಗ
ಬೆಂಗಳೂರಿನಿಂದ ಹೆಬ್ಬಾಳ, ದೇವನಹಳ್ಳಿ ಹಾಗೂ ವಿಮಾನ ನಿಲ್ದಾಣ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಕಡೆಗೆ ತೆರಳುವವರಿಗೆ ಸಂಚಾರ ದಟ್ಟಣೆ ಇಲ್ಲದೇ ಸರಾಗವಾಗಿ ತೆರಳುವಂತೆ ಮಾಡಲು ನಗರದ ದಕ್ಷಿಣ ಭಾಗದಲ್ಲಿ ಸುರಂಗ ರಸ್ತೆ ಯೋಜನೆ ರೂಪಿಸಲಾಗಿದೆ.
ದಕ್ಷಿಣ ಭಾಗದಲ್ಲಿ ಸುರಂಗ ರಸ್ತೆಗೆ ಹೆಬ್ಬಾಳದ ಎಸ್ಟಿಮ್ ಮಾಲ್, ಜಯನಗರದ ಅಶೋಕ್ ಪಿಲ್ಲರ್, ಸಿಲ್ಕ್ ಬೋರ್ಡ್ ಜಂಕ್ಷನ್, ಗಾಲ್ಫ್ ಕೋರ್ಸ್ ರಸ್ತೆ, ಅರಮನೆ ರಸ್ತೆಯಿಂದ ಪ್ರವೇಶ ಪಡೆಯುಬಹುದು ಎಂದು ತುಷಾರ್ ಗಿರಿನಾತ್ ಹೇಳಿದರು.
ಇನ್ನೂ ಈ ದಕ್ಷಿಣ-ಉತ್ತರ ಸುರಂಗ ಮಾರ್ಗದ ರಸ್ತೆಯು ಚಾಲುಕ್ಯ ವೃತ್ತ, ಕಬ್ಬನ್ ಉದ್ಯಾನ, ಕೆಎಚ್ ರಸ್ತೆ, ಜಯನಗರ, ರೇಷ್ಮೆ ಮಂಡಳಿ ಜಂಕ್ಷನ್, ಹೆಬ್ಬಾಳದ ಎಸ್ಟಿಮ್ ಮಾಲ್ ಮಾರ್ಗವಾಗಿ ಸಾಗಲಿದೆ.
ಈ ಮೂಲಕ ಬ್ರ್ಯಾಂಡ್ ಬೆಂಗಳೂರು ಯೋಜನೆಯ ಭಾಗವಾದ ಈ ಸುರಂಗ ಮಾರ್ಗ ಚಿಂತನೆಗೆ ವೇಗ ದೊರಕಿದೆ. ಡಿಕೆ ಶಿವಕುಮಾರ್ ಅವರು ಈ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರು. ಬ್ರ್ಯಾಂಡ್ ಬೆಂಗಳೂರು ಉಪಕ್ರಮಕ್ಕೆ ಬಂದ ಸಲಹೆಗಳ ಪೈಕಿ ಸಂಚಾರ ದಟ್ಟಣೆ ಕಡಿಮೆ ಮಾಡಬೇಕು ಎಂಬುದು ಪ್ರಮುಖ ಸಲಹೆಯಾಗಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications