ಬಿಬಿಎಂಪಿ ಚುನಾವಣೆ ಸ್ಪಷ್ಟನೆ ಕೋರಿದ್ದ ಅರ್ಜಿ ವಾಪಸ್
ಬೆಂಗಳೂರು, ಜುಲೈ 24 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಕಾಲಮಿತಿ ಕುರಿತು ಸ್ಪಷ್ಟನೆ ನೀಡಬೇಕೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಾಪಸ್ ಪಡೆಯಲಾಗಿದೆ. ಆದ್ದರಿಂದ ನಿಗದಿಯಂತೆ ಆ.22ರಂದು ಬಿಬಿಎಂಪಿ ಚುನಾವಣೆ ನಡೆಯಲು ಹಾದಿ ಸುಗಮವಾಗಿದೆ.
ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಿ.ಸತ್ಯಮೂರ್ತಿ ಅವರು ದೆಹಲಿಯಲ್ಲಿರುವ ರಾಜ್ಯ ಕಾನೂನು ಘಟಕದ ಅಧೀನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅರ್ಜಿಯನ್ನು ವಾಪಸ್ ಪಡೆಯುವಂತೆ ಸೂಚನೆ ನೀಡಿದ್ದಾರೆ. ಪಾಲಿಕೆ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಇತ್ತೀಚೆಗೆ ಸ್ಪಷ್ಟಪಡಿಸಿತ್ತು. [ಬಿಬಿಎಂಪಿ ಚುನಾವಣೆಗೆ ತಡೆಯಾಜ್ಞೆ ಇಲ್ಲ]

ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅರ್ಜಿಯನ್ನು ವಾಪಸ್ ಪಡೆಯುವ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು. ಸರ್ಕಾರ ಅರ್ಜಿಯನ್ನು ವಾಪಸ್ ಪಡೆದಿರುವುದರಿಂದ ನಿಗದಿಯಂತೆ ಆ.22ರಂದು ಚುನಾವಣೆ ನಡೆಯಲಿದೆ. [ಬಿಬಿಎಂಪಿ ಚುನಾವಣೆ ವೇಳಾಪಟ್ಟಿ]
ಜುಲೈ 27ರಂದು ವಿಚಾರಣೆ ಇತ್ತು : ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಜುಲೈ 20ರಂದು ನಡೆಸಿತ್ತು ಮತ್ತು ಚುನಾವಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. 'ಬಿಬಿಎಂಪಿ ಚುನಾವಣೆ ಎದುರಿಸಲು ನಿಮಗೆ ಏನು ತೊಂದರೆ?' ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿತ್ತು.
'ಬಿಬಿಎಂಪಿ ಆಡಳಿತ ಆಡಳಿತಾಧಿಕಾರಿ ಕೈಯಲ್ಲಿದೆ. ಬೇಗನೆ ಚುನಾವಣೆಯನ್ನು ನಡೆಸಿ ಜನಪ್ರತಿನಿಧಿಗಳ ಕೈಗೆ ಆಡಳಿತ ಕೊಡಿ ಎಂದು ಸೂಚನೆ ನೀಡಿದ್ದ ಕೋರ್ಟ್, ಅರ್ಜಿಯ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿತ್ತು. ಈಗ ಸರ್ಕಾರವೇ ಅರ್ಜಿಯನ್ನು ವಾಪಸ್ ಪಡೆದಿದೆ.
ಏನಿದು ಅರ್ಜಿ : ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ನೀಡಿದ್ದ 8 ವಾರಗಳ ಕಾಲಾವಕಾಶದ ಬಗ್ಗೆ ಸ್ಪಷ್ಟನೆ ಕೋರಿ ಸರ್ಕಾರ ಈ ಅರ್ಜಿಯನ್ನು ಸಲ್ಲಿಸಿತ್ತು. ಆದರೆ, ಇತ್ತ ಚುನಾವಣಾ ಆಯೋಗ ಪಾಲಿಕೆ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications