ಕೊರೊನಾ ಲಸಿಕೆ ಪಡೆಯುವ 1.15 ಲಕ್ಷ ಜನರ ಪಟ್ಟಿ ಸಿದ್ಧಪಡಿಸಿದ ಬಿಬಿಎಂಪಿ
ಬೆಂಗಳೂರು, ಡಿಸೆಂಬರ್.01: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಮೊದಲು ಬಿಡುಗಡೆಯಾಗುವ ಲಸಿಕೆಯನ್ನು ಯಾರಿಗೆ ನೀಡಬೇಕು ಎನ್ನುವುದರ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಅಂತಿಮ ಪಟ್ಟಿಯೊಂದನ್ನು ಸಿದ್ಧಪಡಿಸಿದೆ.
ಪ್ರಾಥಮಿಕ ಹಂತದಲ್ಲಿ ಮೊದಲಿಗೆ 1.15 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್-19 ಲಸಿಕೆಯನ್ನು ನೀಡುವುದಕ್ಕೆ ಪಟ್ಟಿ ಸಿದ್ಧಪಡಿಸಲಾಗಿದೆ. ಬಿಬಿಎಂಪಿ ಸಿದ್ಧಪಡಿಸಿರುವ ಪಟ್ಟಿಯಲ್ಲಿ ವೈದ್ಯಕೀಯ ಸಿಬ್ಬಂದಿ, ವೈದ್ಯರು, ಆಸ್ಪತ್ರೆ ಆಡಳಿತಾತ್ಮಕ ಸಿಬ್ಬಂದಿ ಹಾಗೂ 29,000 ಖಾಸಗಿ ವೈದ್ಯಕೀಯ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ.
ಕೊವಿಡ್-19 ಲಸಿಕೆ ಸಂಗ್ರಹಿಸಿ ಇಡುವುದಕ್ಕೆ ಬಿಬಿಎಂಪಿಯು ಮೂರು ರೀತಿಯ ವ್ಯವಸ್ಥೆಯನ್ನು ಗುರುತಿಸಿದೆ. ಇತ್ತೀಚಿಗೆ ಹೆಬ್ಬಾಳದಲ್ಲಿರುವ ಪ್ರಾಣಿ ಸಾಕಾಣಿಕೆ ಮತ್ತು ಪಶುವೈದ್ಯಕೀಯ ಸಂಸ್ಥೆಯಾಗಿದ್ದು, ಈ ಸಂಸ್ಥೆಯು ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಸಲಿದೆ.

ಕೊವಿಡ್-19 ಲಸಿಕೆ ಬಗ್ಗೆ ಬಿಬಿಎಂಪಿ ಸ್ಪಷ್ಟನೆ:
"ಬೆಂಗಳೂರಿನಲ್ಲಿ ಎರಡನೇ ಹಂತದಲ್ಲಿ ಯಾರಿಗೆ ಕೊರೊನಾವೈರಸ್ ಲಸಿಕೆ ನೀಡಬೇಕು ಎನ್ನುವುದರ ಕುರಿತು ಪಟ್ಟಿಯನ್ನು ಸಹ ಸಿದ್ಧಪಡಿಸುವುದಕ್ಕೆ ಮುಂದಾಗಿದ್ದೇವೆ. ಬಡ ಕಾರ್ಮಿಕರು, ಎರಡನೇ ಹಂತದ ವೈದ್ಯಕೀಯ ಕಾರ್ಯಕರ್ತರು ಹಾಗೂ ವೃದ್ಧರಿಗೆ ಕೊವಿಡ್-19 ಲಸಿಕೆಯನ್ನು ಎರಡನೇ ಹಂತದಲ್ಲಿ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಲಸಿಕೆಯನ್ನು ಶೇಖರಿಸಿ ಇಡುವುದಕ್ಕೆ ವಿಶಾಲವಾದ ಸ್ಥಳದ ಅವಶ್ಯಕತೆ ಇರುತ್ತದೆ. ಹೆಚ್ಚುವರಿ ಘಟಕಗಳನ್ನು ಸ್ಥಾಪಿಸಬೇಕಾಗಿರುತ್ತದೆ. ಏಕೆಂದರೆ ಕರ್ನಾಟಕದ ಮಟ್ಟಿಗೆ ಬೆಂಗಳೂರು ಕೊರೊನಾವೈರಸ್ ಲಸಿಕೆಗಳ ಸಂಗ್ರಹಣಕ್ಕೆ ಪ್ರಮುಖ ಕೇಂದ್ರವಾಗಿರಲಿದೆ" ಎಂದು ಬಿಬಿಎಂಪಿ ತಿಳಿಸಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications