ಪ್ರತಿವರ್ಷ ಶೇ.5 ತ್ಯಾಜ್ಯ ಸೆಸ್ ಹೆಚ್ಚಳಕ್ಕೆ ಬಿಬಿಎಂಪಿ ಸಿದ್ಧತೆ
ಬೆಂಗಳೂರು, ಆಗಸ್ಟ್ 6: ಘನತ್ಯಾಜ್ಯ ನಿರ್ವಹಣಾ ಕರಡು ನೀತಿ ಸಿದ್ಧಪಡಿಸಲಾಗಿದ್ದು, ತ್ಯಾಜ್ಯ ಉಪಕರವನ್ನು ಪ್ರತಿ ವರ್ಷ ಶೇ.5ರಷ್ಟು ಹೆಚ್ಚಳ ಮಾಡಲು ಬಿಬಿಎಂಪಿ ಸಿದ್ಧವಾಗಿದೆ.
ನಿತ್ಯ 4 ಸಾವಿರ ಟನ್ಗೂ ಹೆಚ್ಚಿನ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಅದರ ನಿರ್ವಹಣೆಗಾಗಿ 7 ಪ್ರತ್ಯೇಕ ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ. ಮಿಶ್ರತ್ಯಾಜ್ಯ ವಿಲೇವಾರಿಗಾಗಿ ಕ್ವಾರಿ ನಿಗದಿ ಮಾಡಲಾಗಿದೆ. ಹಾಗೆಯೇ, ಕಸ ಸಮಸ್ಯೆ ನಿರ್ವಹಣೆಗಾಗಿ ವಾರ್ಷಿಕ 1 ಸಾವಿರ ಕೋಟಿ ರೂ. ವ್ಯಯಿಸಲಾಗುತ್ತಿದೆ.
ನೀತಿಯಲ್ಲಿ ಮೊದಲನೆಯದಾಗಿ ಸಾರ್ವಜನಿಕರ ಜಾಗೃತಿ ಬಗ್ಗೆ ತಿಳಿಸಲಾಗಿದೆ. ಹಸಿ, ಒಣ, ಮೆಡಿಕಲ್ ಸೇರಿ ಎಲ್ಲ ಬಗೆಯ ತ್ಯಾಜ್ಯವನ್ನು ಸಂಸ್ಕರಿಸುವ ಮತ್ತು ಬಿಬಿಎಂಪಿಗೆ ನೀಡುವ ವಿಧಾನವನ್ನು ತಿಳಿಸಲಾಗಿದೆ.

ಅಂತೆಯೇ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ವಾರ್ಷಿಕ 1 ಸಾವಿರ ಕೋಟಿ ರೂ. ವ್ಯಯಿಸುತ್ತಿದೆ. ಸಾರ್ವಜನಿಕರಿಂದ ಕೇವಲ 40ರಿಂದ 42 ಕೋಟಿ ರೂ. ಉಪಕರ ಸಂಗ್ರಹವಾಗುತ್ತಿದೆ. ಹೀಗಾಗಿ ಪ್ರತಿ ವರ್ಷ ಆಸ್ತಿ ಮಾಲೀಕರ ತೆರಿಗೆ ಮೊತ್ತದ ಶೇ. 5 ಉಪಕರ ಹೆಚ್ಚಿಸುವ ಕುರಿತು ಪ್ರಸ್ತಾಪಿಸಲಾಗಿದೆ. ಅದಕ್ಕೆ ಬಿಬಿಎಂಪಿ ಕೌನ್ಸಿಲ್ನಲ್ಲೂ ಅನುಮೋದನೆ ಪಡೆಯುವ ಅವಶ್ಯಕತೆಯಿಲ್ಲ ಎಂದು ತಿಳಿಸಲಾಗಿದೆ.
ಕರಡು ನೀತಿಯಲ್ಲಿ ಪ್ರಮುಖವಾಗಿ 1 ಸಾವಿರ ಚ. ಅಡಿವರೆಗಿನ ವಿಸ್ತೀರ್ಣದ ವಸತಿ ಕಟ್ಟಡಕ್ಕೆ ಪ್ರತಿ ತಿಂಗಳು 30 ರೂ. ಮತ್ತು ಗರಿಷ್ಠ 5 ಸಾವಿರ ಚ. ಅಡಿವರೆಗಿನ ವಸತಿ ಕಟ್ಟಡಗಳಿಗೆ ಆಯಾ ಕಟ್ಟಡಗಳ ವಿಸ್ತೀರ್ಣಕ್ಕನುಗುಣವಾಗಿ 200 ರೂ.ವರೆಗೆ ಮಾಸಿಕ ಉಪ ಕರ ನಿಗದಿ ಮಾಡಲಾಗಿದೆ.
ಅದೇ ರೀತಿ ಕೈಗಾರಿಕಾ ಕಟ್ಟಡಗಳಿಗೆ 1 ಸಾವಿರ ಚ.ಅಡಿವರೆಗೆ 100 ರೂ. ಮತ್ತು ಅದಕ್ಕಿಂತ ಮೇಲ್ಪಟ್ಟ ಕಟ್ಟಡಗಳಿಗೆ ಗರಿಷ್ಠ 300 ರೂ.ವರೆಗೆ ಮಾಸಿಕ ಉಪ ಕರ ವಸೂಲಿ ಮಾಡಲಾಗುತ್ತದೆ.
ಹೋಟೆಲ್, ಕಲ್ಯಾಣಮಂಟಪ, ಶಾಪಿಂಗ್ ಮಾಲ್ ಸೇರಿ ಬೃಹತ್ ತ್ಯಾಜ್ಯ ಉತ್ಪಾದಕ ಸಂಸ್ಥೆಗಳಲ್ಲಿ 10 ಸಾವಿರ ಚ. ಅಡಿವರೆಗೆ 300 ರೂ. ಮತ್ತು 50 ಸಾವಿರ ಚ.ಅಡಿವರೆಗಿನ ಕಟ್ಟಡಗಳಿಗೆ 600 ರೂ.ವರೆಗೆ ಉಪಕರ ನಿಗದಿಪಡಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು, ಉಗುಳುವುದು, ಮಲ- ಮೂತ್ರ ವಿಸರ್ಜನೆ ಮೊದಲ ಬಾರಿ 500 ರೂ., ನಂತರ 1 ಸಾವಿರ ರೂ. ತ್ಯಾಜ್ಯ ವಿಂಗಡಿಸದೆ
ತ್ಯಾಜ್ಯ ವಿಂಗಡಿಸದೆ ವಿಲೇವಾರಿಗೆ ನೀಡುವ ಸಣ್ಣ ವಾಣಿಜ್ಯ ಮಳಿಗೆಗಳಿಗೆ: ಮೊದಲ ಬಾರಿ 1 ಸಾವಿರ ರೂ., ನಂತರ 2,500 ರೂ.; ಬೃಹತ್ ವಾಣಿಜ್ಯ ಮಳಿಗೆಗಳಿಗೆ: ಮೊದಲ ಬಾರಿ 2 ಸಾವಿರ ರೂ., ನಂತರ 5 ಸಾವಿರ ರೂ.
ಬೀದಿ ಬದಿ ವ್ಯಾಪಾರಿಗಳಿಗೂ ಮಾಸಿಕ ಗರಿಷ್ಠ 50 ರೂ.ವರೆಗೆ ಕರ ವಿಧಿಸುವ ಪ್ರಸ್ತಾಪ ಮಾಡಲಾಗಿದೆ. ಮೊದಲ ಸಲ 5 ಸಾವಿರ ರೂ., ನಂತರ 10 ಸಾವಿರ ರೂ. ತ್ಯಾಜ್ಯ ಸುಡುವುದು, ಎಲ್ಲೆಂದರಲ್ಲಿ ಎಸೆಯುವ ಸಾರ್ವಜನಿಕರಿಗೆ 5 ಸಾವಿರ ರೂ.; ವಾಣಿಜ್ಯ ಉದ್ದಿಮೆದಾರರಿಗೆ 25 ಸಾವಿರ ರೂ. ಮಾಂಸ ಮಾರಾಟ ಮಳಿಗೆ, ಕಸಾಯಿಖಾನೆಗಳಲ್ಲಿ ತ್ಯಾಜ್ಯ ವಿಂಗಡಿಸದಿದ್ದರೆ ಮೊದಲ ಬಾರಿ 1 ಸಾವಿರ ರೂ., ನಂತರ 2 ಸಾವಿರ ರೂ.
ನಿವೇಶನಗಳಿಗೆ ಪ್ರತಿ ಚದರ ಅಡಿಗೆ ಮಾಸಿಕ 20 ಪೈಸೆಯಂತೆ ಉಪಕರ ವಸೂಲಿ ಮಾಡಲು ನಿರ್ಧರಿಸಲಾಗಿದೆ. ಜತೆಗೆ ಬಿಬಿಎಂಪಿ ವ್ಯಾಪ್ತಿಯ ಹೋಟೆಲ್, ಸಮುದಾಯ ಭವನ ಸೇರಿದಂತೆ ಸಾರ್ವಜನಿಕ ಮತ್ತು ಖಾಸಗಿ ಕಟ್ಟಡ, ಖಾಲಿ ನಿವೇಶನಗಳಲ್ಲಿ ಕನಿಷ್ಠ 1 ವಾರ ಅಥವಾ ಅದಕ್ಕೂ ಹೆಚ್ಚು ದಿನ ನಡೆಯುವ ವಸ್ತುಪ್ರದರ್ಶನ, ಮನರಂಜನಾ ಕಾರ್ಯಕ್ರಮ, ವಿವಾಹ ಸಮಾರಂಭಗಳಲ್ಲಿ ಉತ್ಪತ್ತಿ ಯಾಗುವ ತ್ಯಾಜ್ಯಕ್ಕೂ ಉಪಕರ ನೀಡಬೇಕಿದೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications