ರಾಜಕಾಲುವೆ ಒತ್ತುವರಿ ತೆರವು ಎಂಬ ನಿಗೂಢ ರಹಸ್ಯ!
ಬೆಂಗಳೂರು, ಆಗಸ್ಟ್, 29: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ರಾಜಕಾಲುವೆ ಒತ್ತುವರಿ ತೆರವು ಎಲ್ಲಿಗೆ ಬಂತು? ದೊಡ್ಡವರ ಹೆಸರು ಕೇಳಿ ಬಂದಿದ್ದೆ ತಡ ಬಿಬಿಎಂಪಿ ಕಾರ್ಯಾಚರಣೆಗೆ ಯಾಕೆ ಹಿಂದೇಟು ಹಾಕುತ್ತಿದೆ? ದೊಡ್ಡವರಿಗೆ ಒಂದು ನ್ಯಾಯ, ಸಾಮಾನ್ಯರಿಗೆ ಒಂದು ನ್ಯಾಯವೇ? ಸದ್ಯ ಇದು ಸಾರ್ವಜನಿಕರು ಕೇಳುತ್ತಿರುವ ಪ್ರಶ್ನೆ.
ಈ ಪ್ರಶ್ನೆಗೆ ಬಿಬಿಎಂಪಿ ಅಧಿಕಾರಿಗಳ ಬಳಿ ಮಾತ್ರ ಸಮರ್ಪಕ ಉತ್ತರ ಇಲ್ಲ. ಬಿಬಿಎಂಪಿ ಕೇಳಿದರೆ ಕಂದಾಯ ಇಲಾಖೆ ಕಡೆ ಬೆರಳು ತೋರಿಸುತ್ತದೆ. ಕಂದಾಯ ಇಲಾಖೆಯವರನ್ನು ಪ್ರಶ್ನೆ ಮಾಡಿದರೆ ಜಯನಗರ ಬಿಡಿಎ ಕಾಂಪ್ಲೆಕ್ಸ್ ನ 9 ನೇ ಮಹಡಿಯಲ್ಲಿರುವ ಕಚೇರಿಗೆ ತೆರಳಿ ಎಂಬ ಉತ್ತರ ಬರುತ್ತದೆ[ಒತ್ತುವರಿ ತೆರವಿಗೆ ತೊಂದರೆ ಇಲ್ಲ ಎಂದ ದರ್ಶನ್]
ಬಿಡಿಎ ಕಾಂಪ್ಲೆಕ್ಸ್ ನ 9 ನೇ ಮಹಡಿಯಲ್ಲಿರುವ ಬೃಹತ್ ನೀರುಗಾಲುವೆ ಕಚೇರಿಗೆ ತೆರಳಿದರೆ ಅಧಿಕಾರಿಗಳು ನಿಮ್ಮ ಕೈಗೆ ಸಿಗಲ್ಲ. ಮೀಟಿಂಗ್ ಎಂಬ ಕಾರಣದಲ್ಲಿ ಪೋನ್ ಸಹ ಎತ್ತಲ್ಲ. ಒಟ್ಟಿನಲ್ಲಿ ಸದ್ಯ ರಾಜಕಾಲುವೆ ಒತ್ತುವರಿ ಯಾವ ಹಂತದಲ್ಲಿದೆ? ಏನು ನಡೆಯುತ್ತಿದೆ ಎಂಬುದೆಲ್ಲ ಸ್ದದ್ಯದ ಮಟ್ಟಿಗೆ ನಿಗೂಢ ರಹಸ್ಯ!
ರಾಜರಾಜೇಶ್ವರಿ ನಗರದ ಐಡಿಯಲ್ ಹೋಂನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಗೆ ಸಂಬಂಧಿಸಿದ 5 ಅಡಿ ಜಾಗ, ಶಾಮನೂರು ಶಿವಶಂಕರಪ್ಪ ಅವರಿಗೆ ಸೇರಿದ ಎಸ್ ಎಸ್ ಆಸ್ಪತ್ರೆಯ ಸ್ವಲ್ಪ ಜಾಗ, ಒರಾಯನ್ ಮಾಲ್, ಮಾನ್ಯತಾ ಟೆಕ್ ಪಾರ್ಕ್ ಹೆಸರುಗಳು ರಾಜಕಾಲುವೆಗೆ ಲಿಂಕ್ ಆಗಿದ್ದೆ ಒತ್ತುವರಿ ತೆರವು ಕಾರ್ಯಾಚರಣೆ ವೇಗ ಕಳೆದುಕೊಂಡಿದೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]

ಜಂಟಿ ಸರ್ವೆ ಹೆಸರು
ಬಲಿಷ್ಠರ ಆಸ್ತಿಯ ಹೆಸರು ಕೇಳಿಬಂದಿದ್ದೇ ಜಂಟಿ ಸರ್ವೆ ಎಂಬ ನೆಪ ಉದ್ಭವವಾಗಿದೆ. ನಮಗಿಲ್ಲದ ಜಂಟಿ ಸರ್ವೆ ದೊಡ್ಡವರ ಆಸ್ತಿಗೆ ಏಕೆ ಎಂದು ತೆರವು ಕಾರ್ಯಾಚರಣೆ ವೇಳೆ ಜಾಗ ಕಳೆದುಕೊಂಡ ಮಹದೇವಪುರ ವ್ಯಾಪ್ತಿಯ ರವಿಚಂದ್ರ ರೆಡ್ಡಿ ಪ್ರಶ್ನೆ ಮಾಡುತ್ತಾರೆ.

ನಮಗೆ ಏನು ಗೊತ್ತಿಲ್ಲ
ನಮಗೆ ಏನೂ ಗೊತ್ತಿಲ್ಲ. ಅಂತಿಮ ನಕಾಶೆ ನೀಡಿದ ನಂತರ ಕೆಲಸ ಮುಂದುವರಿಸುತ್ತೇವೆ, ನಿಮಗೆ ಏನೇ ಮಾಹಿತಿ ಬೇಕಿದ್ದರೂ ಬಿಬಿಎಂಪಿಯ ಮುಖ್ಯ ಇಂಜಿನಿಯರ್ ಕೇಳಿ ಎಂಬ ಉತ್ತರವನ್ನು ಬೃಹತ್ ನೀರುಗಾಲುವೆ ಇಲಾಖೆ ಅಧಿಕಾರಿಗಳು ನೀಡುತ್ತಾರೆ

ಯಾವ ಹಂತದಲ್ಲಿದೆ?
ಬಲಿಷ್ಠರಿಗೆ ಸೇರಿದ ಆಸ್ತಿ ಇದ್ದರೂ ತೆರವು ಮಾಡುವುದು ಖಂಡಿತ ಎಂದು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಆದರೆ ಸದ್ಯ ತೆರವು ಕಾರ್ಯಾಚರಣೆ ಯಾವ ಹಂತದಲ್ಲಿದೆ ಎಂಬುದು ಮಾತ್ರ ಯಕ್ಷ ಪ್ರಶ್ನೆ.

ತೆರವು ಖಚಿತ
ಆಸ್ತಿ ಯಾರದ್ದೇ ಆದರೂ ಅಕ್ರಮ ಎಂದಾದರೆ ತೆರವು ಖಚಿತ. ಬಲಿಷ್ಠರ ಆಸ್ತಿ ಎಂಬ ಕಾರಣಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಸಕಲ ದಾಖಲೆಗಳನ್ನು ಸ್ಪಷ್ಟವಾಗಿ ಹಿಡಿದುಕೊಂಡು ಬಿಬಿಎಂಪಿ ಕಾರ್ಯಾಚರಣೆ ಮಾಡುವುದು ನಿಶ್ಚಿತ ಎಂದು ಹೆಸರು ಹೇಳಲು ಬಯಸದ ಬಿಬಿಎಂಪಿ ಅಧಿಕಾರಿ ಮಾಹಿತಿ ನೀಡುತ್ತಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications