Get Updates
Get notified of breaking news, exclusive insights, and must-see stories!

Ejipura Flyover : ಈಜಿಪುರ ಮೇಲ್ಸೇತುವೆ ಕಾಮಗಾರಿ ಮತ್ತೆ ಆರಂಭಿಸಲು ಸಜ್ಜಾದ ಬಿಬಿಎಂಪಿ

ದಿನದಿಂದ ದಿನಕ್ಕೆ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು, ಇದನ್ನು ಕಡಿಮೆ ಮಾಡಲು ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಹಲವು ಕಡೆಗಳಲ್ಲಿ ಮೇಲ್ಸೇತುವೆ ನಿರ್ಮಾಣ ಕೂಡ ಈ ಯೋಜನೆಯ ಭಾಗವಾಗಿದೆ. ಈಗ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈಜಿಪುರ ಮೇಲ್ಸೇತುವೆ ಕಾಮಗಾರಿ ಮತ್ತೆ ಜೀವ ಪಡೆದುಕೊಂಡಿದೆ.

2017ರಲ್ಲಿ ಬಿಬಿಎಂಪಿ ಈಜಿಪುರ ಮೇಲ್ಸೇತುವೆ ಕಾಮಗಾರಿಗೆ ಟೆಂಡರ್ ನೀಡಿತ್ತು. ಅದಾದ ನಂತರ ರಾಜ್ಯದಲ್ಲಿ ಸರ್ಕಾರಗಳು ಬದಲಾದವು, ಕಾಮಗಾರಿ ನೆನೆಗುದಿಗೆ ಬಿದ್ದ ನಂತರ ಸರ್ಕಾರ ಕಳೆದ ವರ್ಷ ಟೆಂಡರ್ ಅನ್ನು ರದ್ದು ಮಾಡಿತ್ತು. ಆದರೆ, ಈಗ ಮತ್ತೊಂದು ಕಂಪನಿ ಮೂಲಕ ಕಾಮಗಾರಿ ಪುನರಾರಂಭಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ.

bbmp-ready-to-resume-ejipura-flyover-project

ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಪ್ರಕಾರ, ಹೊಸ ಗುತ್ತಿಗೆದಾರರಿಗೆ ವಾರದೊಳಗೆ ಕಾಮಗಾರಿ ಆದೇಶ ನೀಡಲಾಗುವುದು ಎಂದು ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದು, 15 ದಿನಗಳೊಳಗೆ ಕಾಮಗಾರಿ ಆರಂಭವಾಗಲಿದೆ ಎಂದು ಯೋಜನೆಗಳ (ಬಿಬಿಎಂಪಿ) ಮುಖ್ಯ ಎಂಜಿನಿಯರ್ ಎಂ ಲೋಕೇಶ್ ಮಾಹಿತಿ ನೀಡಿರುವುದಾಗಿ ಹೇಳಿದೆ.

176 ಕೋಟಿ ರೂಪಾಯಿ ವೆಚ್ಚ

2017ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2.5 ಕಿಮೀ ಮೇಲ್ಸೇತುವೆಯನ್ನು ನಿರ್ಮಿಸಲು ಸಿಂಪ್ಲೆಕ್ಸ್ ಇನ್‌ಫ್ರಾಸ್ಟ್ರಕ್ಚರ್‌ಗೆ ಬಿಬಿಎಂಪಿ ಟೆಂಡರ್ ನೀಡಿತ್ತು. ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಸಂಸ್ಥೆಯು ಒಪ್ಪಂದದ ನಿಯಮಗಳು ಮತ್ತು ಷರತ್ತುಗಳ ಪ್ರಕಾರ ಯೋಜನೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. 50 ಪ್ರತಿಶತ ಕೆಲಸ ಆದ ನಂತರ ಸ್ಥಗಿತಗೊಂಡಿದೆ. ಯೋಜನೆಯನ್ನು ಪುನರುಜ್ಜೀವನಗೊಳಿಸಲು ಮಾಡಿದ ಪ್ರಯತ್ನಗಳು ವ್ಯರ್ಥವಾದವು; ಮಾರ್ಚ್ 2022 ರಲ್ಲಿ, ಸರ್ಕಾರವು ಟೆಂಡರ್ ಅನ್ನು ರದ್ದು ಮಾಡಿತು.

"ಹೊಸ ಗುತ್ತಿಗೆದಾರರು ಭಾರತೀಯ ವಿಜ್ಞಾನ ಸಂಸ್ಥೆ ಮೂಲಕ ರಚನೆಗಳಿಗೆ ಸಂಬಂಧಿತ ಪರೀಕ್ಷೆಗಳನ್ನು ನಡೆಸುತ್ತಾರೆ. ಹಿಂದಿನ ಜೋಡಣೆಯಲ್ಲಿ ಯಾವುದೇ ಮಾರ್ಪಾಡು ಇಲ್ಲ" ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಕಿ ಉಳಿದಿರುವ ಕಾಮಗಾರಿಯನ್ನು ಮುಗಿಸಲು 176 ಕೋಟಿ ರೂಪಾಯಿ ಖರ್ಚಾಗಲಿದೆ, ಈಗಾಗಲೇ ಅರ್ಧ ಆಗಿರುವ ಕೆಲಸಕ್ಕೆ ಬಿಬಿಎಂಪಿ 75 ಕೋಟಿ ರೂಪಾಯಿ ಖರ್ಚು ಮಾಡಿದೆ, ಕೆಲಸದ ವಿಳಂಬದಿಂದ 93 ಕೋಟಿ ರೂಪಾಯಿ ಹೆಚ್ಚುವರಿ ಖರ್ಚಾಗಲಿದೆ. ಹೈದರಾಬಾದ್ ಮೂಲದ ಸಂಸ್ಥೆ ಬಿಎಸ್‌ಸಿಪಿಎಲ್ ಬಾಕಿ ಉಳಿದಿರುವ ಕಾಮಗಾರಿಯನ್ನು ನಿರ್ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರಾಫಿಕ್ ಸಮಸ್ಯೆ ನಿವಾರಣೆ

ಮೇಲ್ಸೇತುವೆ ಕಾಮಗಾರಿ ಸುದೀರ್ಘ ವಿಳಂಬಕ್ಕೆ ನಾಗರಿಕರ ವಿಭಾಗಗಳು ಅಸಮಾಧಾನಗೊಂಡಿದ್ದವು, ಸರ್ಕಾರವು ಯೋಜನೆಯನ್ನು ಸ್ಥಗಿತಗೊಳಿಸಬೇಕು ಮತ್ತು ಲಘು ರೈಲು ಅಥವಾ ಬಸ್ ಕ್ಷಿಪ್ರ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸಲು ವಿಸ್ತರಣೆಯನ್ನು ಬಳಸಬೇಕೆಂದು ಒತ್ತಾಯಿಸಿದರು, ಇದರಿಂದ ಹೆಚ್ಚು ಸಹಾಯವಾಗಲಿದೆ ಎಂದು ಒತ್ತಾಯಿಸಿದೆ.

ಯೋಜನೆಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸಾಮಾನ್ಯವಾಗಿವೆ. ನೆಟಿಜನ್‌ಗಳು ಅದು ಯಾವಾಗ ಪೂರ್ಣಗೊಳ್ಳುತ್ತದೆ ಎಂದು ನಿರೀಕ್ಷಿಸಬಹುದು ಎಂದು ಅಧಿಕಾರಿಗಳನ್ನು ಕೇಳಿದ್ದಾರೆ, ಪಿಲ್ಲರ್‌ಗಳು ಶಿಥಿಲವಾಗಿದೆ ಎನ್ನುವ ಅನುಮಾನ ಕೂಡ ವ್ಯಕ್ತವಾಗಿದೆ. ರಸ್ತೆ ಮಧ್ಯದ ಗುಂಡಿ ಕಸಹಾಕುವ ಸ್ಥಳ ಆಗುವ ಬಗ್ಗೆ ಕೂಡ ಜನ ಆತಂಕಗೊಂಡಿದ್ದಾರೆ.

ಹೊಸ ಸರ್ಕಾರವು ದಟ್ಟಣೆಯನ್ನು ಕಡಿಮೆ ಮಾಡಲು 109 ಕಿಮೀ ಸುರಂಗ ಜಾಲವನ್ನು ನಿರ್ಮಿಸಲು ಪ್ರಸ್ತಾಪಿಸಿದ ನಂತರ, ಅಧಿಕಾರಿಗಳು ಸಣ್ಣ ಈಜಿಪುರ ಮೇಲ್ಸೇತುವೆಯನ್ನು ಪೂರ್ಣಗೊಳಿಸಲು ವರ್ಷಗಟ್ಟಲೆ ಸಮಯವನ್ನು ತೆಗೆದುಕೊಳ್ಳುತ್ತಿರುವುದಕ್ಕೆ ಜನ ವ್ಯಂಗ್ಯವಾಡುತ್ತಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, "ಈಗಿರುವ ರಚನೆಯನ್ನು ಬಳಸಿಕೊಂಡು ಸಮೂಹ ಸಾರಿಗೆ ವ್ಯವಸ್ಥೆ ನಿರ್ಮಿಸುವುದು ಕಾರ್ಯಸಾಧ್ಯ ಆಯ್ಕೆಯಲ್ಲ, ಹಿಂದಿನ ಯೋಜನೆಯಂತೆ ಈ ಭಾಗದಲ್ಲಿ ಮೇಲ್ಸೇತುವೆ ನಿರ್ಮಿಸಲಾಗುವುದು. ಯೋಜನೆಯು ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ" ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+