ಬೆಂಗಳೂರು: ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಮತದಾರರ ಅಂಕಿ-ಸಂಖ್ಯೆ ತಿಳಿಯಿರಿ
ಬೆಂಗಳೂರು, ಜನವರಿ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತದಾರರ ಪಟ್ಟಿ ಪರಿಷ್ಕರಣೆ ಮಾಡಿತ್ತು. ಈ ಹಿಂದೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದ ಬಿಬಿಎಂಪಿ ಸೋಮವಾರ ಅಂತಿಮ ಪಟ್ಟಿ ಪ್ರಕಟಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಡೆದ ಸುದ್ದಿಗೋಷ್ಠಿಯಲ್ಲಿ ಪರಿಷ್ಕೃತ ಫೈನಲ್ ಪಟ್ಟಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ.
ಪುರುಷ-ಮಹಿಳಾ ಮತದಾರರ ಸಂಖ್ಯೆ
ಈ ಅಂತಿಮ ಮತದಾರರ ಪಟ್ಟಿಯಲ್ಲಿ 50,78,525 ಪುರುಷ ಮತದಾರರರು, 47,63,268 ಮಹಿಳಾ ಮತದಾರರು ಹಾಗೂ 1,784 ಇತರೆ ಮತದಾರರು ಸೇರಿ ಒಟ್ಟು 98,43,577 ಮತದಾರರಿದ್ದಾರೆ ಎಂದು ತಿಳಿಸಿದರು.

ನಗರದಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರದ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲಾ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿದೆ.
ಮಾಹಿತಿ ಪರಿಶೀಲನೆಗೆ ಇಲ್ಲಿ ಭೇಟಿ ನೀಡಿ
ಮತದಾರರು ತಮ್ಮ ಮತದಾರರ ತಮ್ಮ ಮಾಹಿತಿಯಾದ ಹೆಸರು, ತಂದೆಯ ಹೆಸರು, ಸಂಬಂಧ, ಲಿಂಗ, ಜನ್ಮ ದಿನಾಂಕ ವಿಳಾಸ ಮತ್ತು ಪೋಟೋಗಳನ್ನು ಪರಿಶೀಲಿಸಿಕೊಳ್ಳಬೇಕು. ಆ ಬಗ್ಗೆ ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿ ರವರ www.ceokarnataka.kar.nic.in ಮತ್ತು ಬಿಬಿಎಂಪಿ www.bbmp.gov.in ವೆಬ್ಸೈಟ್ ನಲ್ಲಿ ಸಹ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗುವುದು ಎಂದು ಹೇಳಿದರು.
ತಪ್ಪುಗಳಿದ್ದಲ್ಲಿ ಅಜಿ ಸಲ್ಲಿಕೆಗೆ ಅವಕಾಶ
ಸಾರ್ವಜನಿಕರು/ಮತದಾರರು ಮತದಾರರ ಪಟ್ಟಿ ಕಾರ್ಯ ಚಟುವಟಿಕೆಗಳ ಲಾಭವನ್ನು ಪಡೆದುಕೊಂಡು ಯಾವುದೇ ಕಛೇರಿಗೆ ಹೋಗದೆ ಅವರಿರುವ ಸ್ಥಳದಿಂದಲೆ Web Portal-Voters.eci.gov.in, Voter Helpline Mobile App ಹಾಗೂ 1950 Voter Helpline ಮುಖಾಂತರ ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬಂಧಪಟ್ಟ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು
ಸುದ್ದಿಗೋಷ್ಠಿಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ದಯಾನಂದ, ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications