Holiday: ರಂಜಾನ್ ರಜೆಯಲ್ಲಿದ್ದವರಿಗೆ ಶಾಕ್, ಸರ್ಕಾರಿ ರಜೆ ಇದ್ರೂ ಕೆಲಸ ಮಾಡಲು ಸೂಚನೆ
ರಂಜಾನ್ ಪ್ರಯುಕ್ತ ಸೋಮವಾರದಂದು (ಮಾರ್ಚ್ 31) ಸರ್ಕಾರಿ ರಜೆ ಘೋಷಣೆಯಾಗಿದೆ. ಯುಗಾಗಿ ಹಾಗೂ ಈದ್ ಪ್ರಯುಕ್ತ ಸರಣಿ ರಜೆ ಇರುವ ಕಾರಣ ಬಹುತೇಕರು ಮನೆಯಲ್ಲಿ ಹಬ್ಬ ಆಚರಿಸಿ, ಹೊರಗೆ ಸುತ್ತಾಡಿಕೊಂಡು ಬರೋಣ ಅಂತಾ ಪ್ಲ್ಯಾನ್ ಕೂಡ ಮಾಡಿಕೊಂಡಿರುತ್ತಾರೆ. ಸರ್ಕಾರಿ ನೌಕರರು ಕೂಡ ರಜೆಗಾಗಿ ಕಾಯುತ್ತಿರುತ್ತಾರೆ. ರಜೆ ಅಂತಾ ನೆಮ್ಮದಿಯಾಗಿ ಇರೋಣ ಎಂದುಕೊಂಡಿದ್ದ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದೊಡ್ಡ ಶಾಕ್ ನೀಡಿದೆ.
ಹೌದು, ಮಾರ್ಚ್ 30 ಹಾಗೂ 31ರಂದು ಸರ್ಕಾರಿ ರಜೆ ಇದ್ದರೂ ಆ ಎರಡು ದಿನ ಬಿಬಿಎಂಪಿ ಅಧಿಕಾರಿಗಳಿಗೆ ರಜೆ ಭಾಗ್ಯವಿಲ್ಲ. ರಜೆ ಇದ್ದರೇನು? ಎಲ್ಲರೂ ತಪ್ಪದೇ ಬಂದು ಕೆಲಸಕ್ಕೆ ಹಾಜರಾಗಿ ಎಂದು ಖಡಕ್ ಸೂಚನೆ ನೀಡಲಾಗಿದೆ. ಏಕೆಂದರೆ 2024-25ನೇ ಸಾಲಿನ ಆರ್ಥಿಕ ವರ್ಷ ಮುಗಿಯುತ್ತಿರುವ ಕಾರಣ ಮಾರ್ಚ್ 30 ಹಾಗೂ 31ರಂದು ಸರ್ಕಾರಿ ರಜೆ ಇದ್ದರೂ ಸಹ ಬಿಬಿಎಂಪಿ ಕಂದಾಯ ವಿಭಾಗದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಟ್ಟಡಗಳಿಂದ ಪಾವತಿ ಮಾಡಬೇಕಾದ ಆಸ್ತಿ ತೆರಿಗೆ ಹಾಗೂ ಸೇವಾ ಶುಲ್ಕವನ್ನು ಮಾರ್ಚ್ 31ರೊಳಗೆ ಪಾವತಿಸುವುದರಿಂದ ಅದರ ಬಡ್ಡಿ ಮೊತ್ತವನ್ನು ಮನ್ನಾ ಮಾಡುವ ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ಸದ್ಯ ಜಾರಿಯಲ್ಲಿದೆ. ಅಲ್ಲದೆ ಬಾಕಿ ಇರುವ ಆಸ್ತಿ ತೆರಿಗೆ ಹಾಗೂ ಸೇವಾಶುಲ್ಕವನ್ನು ಕೂಡ ವಸೂಲಾತಿ ಮಾಡಬೇಕಾಗಿದೆ. ಮತ್ತೊಂದೆಡೆ ಸರ್ಕಾರದ ಅಧಿಸೂಚನೆಯಂತೆ ಏಪ್ರಿಲ್ 1ರಿಂದ ಬಾಕಿ ಆಸ್ತಿ ತೆರಿಗೆ ಮೇಲೆ ದಂಡ ಕೂಡ ವಿಧಿಸಲಾಗುತ್ತಿದೆ. ಈ ಹಿನ್ನೆಲೆ ತೆರಿಗೆದಾರರು ಬಾಕಿ ಆಸ್ತಿ ತೆರಿಗೆ ಪಾವತಿಸಲು ಪಾಲಿಕೆಯ ಕಚೇರಿಗಳಿಗೆ ಭೇಟಿ ನೀಡಲಿರುವ ಕಾರಣ ಈ ಎರಡೂ ದಿನ ಯಾವುದೇ ರಜೆ ಇಲ್ಲದೆ ಕೆಲಸಕ್ಕೆ ಬಂದು ಹಾಜರಾಗುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಈ ಕಾರಣಕ್ಕೆ ಸಿಬ್ಬಂದಿಗೆ ರಜೆ ನಿರಾಕರಿಸಲಾಗಿದೆ. ಹಾಗಾಗಿ ಸೋಮವಾರದಂದು ರಂಜಾನ್ ರಜೆ ಬದಿಗಿಟ್ಟು, ಪಾಲಿಕೆಯ ಕಂದಾಯ ವಿಭಾಗದ ಎಲ್ಲ ಸಿಬ್ಬಂದಿ ತಮ್ಮ ಉಪವಿಭಾಗ ಮತ್ತು ವಾರ್ಡ್ನ ಕಚೇರಿಗಳಲ್ಲಿ ಕೆಲಸ ಮಾಡಲೇಬೇಕಾಗಿದೆ. ಸಿಬ್ಬಂದಿಯು ಬಾಕಿ ಆಸ್ತಿ ತೆರಿಗೆ ವಸೂಲಾತಿಗೆ ಎಲ್ಲ ರೀತಿಯ ಕ್ರಮ ವಹಿಸುವಂತೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಅಧಿಕಾರಿ ಮುನೀಶ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಬಜೆಟ್ ಮಂಡಿಸಿದ ಬಿಬಿಎಂಪಿ: ಬೆಂಗಳೂರಿನ ಭವಿಷ್ಯಕ್ಕಾಗಿ ಮಾರ್ಚ್ 29ರಂದು ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಅವರ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಉಪಸ್ಥಿತಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಅವರು ಬಜೆಟ್ ಮಂಡಿಸಿದರು. 2025-26ನೇ ವರ್ಷದಲ್ಲಿ ಪಾಲಿಕೆಯ ಆದಾಯವು ಪ್ರಾರಂಭಿಕ ಶಿಲ್ಕು ಸೇರಿ ಒಟ್ಟು ಸ್ವೀಕೃತಿ 19,930.64 ಕೋಟಿ ರೂಪಾಯಿಗಳಷ್ಟಿದ್ದು, ಒಟ್ಟು ಖರ್ಚು 19,927.08 ಕೋಟಿ ರೂಪಾಯಿ ಎನ್ನಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications