ಇಂದಿರಾ ಕ್ಯಾಂಟೀನ್ ಮಾರ್ಗ, ಮೆನು ತಿಳಿಸಲಿದೆ ಬಿಬಿಎಂಪಿಯ ಹೊಸ ಆ್ಯಪ್
ಬೆಂಗಳೂರು, ಜುಲೈ 27: ರಾಜ್ಯಸರಕಾರ ಜನಸಾಮಾನ್ಯರಿಗೆ ಮಿತ ದರದಲ್ಲಿ ಊಟ ಮತ್ತು ಉಪಹಾರ ನೀಡಲು ಆರಂಭಿಸಲಿರುವ ಇಂದಿರಾ ಕ್ಯಾಂಟೀನ್ ಗಳನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಬಿಬಿಎಂಪಿ ಮುಂದಾಗಿದೆ.
ಬೆಂಗಳೂರಿನ 198 ವಾರ್ಡ್ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಲಿದ್ದು ಗ್ರಾಹಕರಿಗೆ ಸಮೀಪದ 5ಇಂದಿರಾ ಕ್ಯಾಂಟೀನ್ಗಳಿಗೆ ಹೋಗುವ ಮಾರ್ಗ ಹಾಗೂ ದಿನದ ಮೆನುವನ್ನು ತಿಳಿಸಲು ಆ್ಯಪ್ ತಯಾರಿಗೆ ಮುಂದಾಗಿದೆ.

ಈಗಾಗಲೇ ಬಿಬಿಎಂಪಿಯ ಐ.ಟಿ ತಂಡ ಆ್ಯಪ್ ಸಿದ್ಧಪಡಿಸುತ್ತಿದೆ. ಆ್ಯಪ್ ನ ಅಂತಿಮ ಕೆಲಸಗಳಷ್ಟೇ ಬಾಕಿ ಇದ್ದು ಆಗಸ್ಟ್ 15ರಂದು ಮೊದಲ ಹಂತದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಬಿಡುಗಡೆಯಾಗಲಿದೆ.
ಸ್ಮಾರ್ಟ್ ಫೋನ್ ಹೊಂದಿರುವ ಗ್ರಾಹಕರು ಆ್ಯಪ್ ಡೌನ್ಲೋಡ್ ಮಾಡಿ ಜಿಪಿಎಸ್ ಮುಖಾಂತರ ಹತ್ತಿರದ ಐದು ಇಂದಿರಾ ಕ್ಯಾಂಟೀನ್ಗಳ ಮಾಹಿತಿಯನ್ನು ಪಡೆಯಬಹುದು. ಜತೆಗೆ ಆ ದಿನದ ಮೆನುವನ್ನೂ ಇದರಲ್ಲೇ ಪಡೆಯಬಹುದಾಗಿದೆ.
ಇನ್ನು ಕ್ಯಾಂಟೀನ್ ಗಳಿಗೆ ರೇಟಿಂಗ್ ನೀಡಲೂ ಆ್ಯಪ್ ನಲ್ಲಿ ಅವಕಾಶವಿದೆ. ಜತೆಗೆ ಅಧಿಕಾರಿಗಳಿಗೆ ಕ್ಯಾಂಟೀನ್ಗೆ ಸರಬರಾಜು ಆದ ಆಹಾರ ಪದಾರ್ಥ, ಖರ್ಚಾದ ಉಪಾಹಾರ, ಊಟ, ಮಿಕ್ಕಿರುವ ಆಹಾರ ಪ್ರಮಾಣದ ಬಗ್ಗೆ ಈ ಆ್ಯಪ್ ನಿಂದಲೇ ಮಾಹಿತಿ ಪಡೆದುಕೊಳ್ಳುವ ಅವಕಾಶವನ್ನೂ ನೀಡಲಾಗಿದೆ.
ಎರಡು ಸಂಸ್ಥೆಗಳಿಗೆ ಗುತ್ತಿಗೆ
ಕ್ಯಾಂಟೀನ್ಗಳಲ್ಲಿ ಆಹಾರ ಪೂರೈಸಲು ಎರಡು ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗಿದೆ. ಚೆಫ್ ಟಾಕ್ ಪ್ರೈವೇಟ್ ಲಿಮಿಟೆಡ್ ಮತ್ತು ರಿವಾರ್ಡ್ಸ್ ಸಂಸ್ಥೆ ಆಹಾರಗಳನ್ನು ಪೂರೈಸಲಿದೆ.
ಎರಡೂ ಸಂಸ್ಥೆಗಳು ಈಗಾಗಲೇ ಬೇರೆ ಬೇರೆ ಉದ್ದೇಶಗಳಿಗೆ ಊಟ ಮತ್ತು ಉಪಾಹಾರ ಪೂರೈಕೆಯಲ್ಲಿ ನಿರತವಾಗಿದ್ದು ಈ ಕ್ಷೇತ್ರಗಳಲ್ಲಿ ಅನುಭವಿ ಸಂಸ್ಥೆಗಲಾಗಿವೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications