ಬಯೋಮೆಟ್ರಿಕ್ ಹಾಜರಿ: ಬಿಬಿಎಂಪಿಗೆ 250 ಕೋಟಿ ಉಳಿತಾಯ
ಬೆಂಗಳೂರು, ಮಾರ್ಚ್ 24: ಪೌರಕಾರ್ಮಿಕರ ಹಾಜರಾತಿಯನ್ನು ಟ್ರ್ಯಾಕ್ ಮಾಡಲು ಅನುಕೂಲವಾಗುವಂತೆ ಅಳವಡಿಸಿಸಿರುವ ಆಧಾರ್ ಕಾರ್ಡ್ ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆಯಿಂದ ಬಿಬಿಎಂಪಿಗೆ 250 ಕೋಟಿ ರೂ ಉಳಿತಾಯವಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಪೌರಕಾರ್ಮಿಕರ ಹಾಜರಾತಿ ವಿಚಾರದಲ್ಲಿ ವಂಚನೆ ಮಾಡಿ ಹಣ ಲಪಟಾಯಿಸುವ ಗುತ್ತಿಗೆದಾರರ ಅಕ್ರಮಗಳಿಗೆ ಕಡಿವಾಣ ಹಾಕಲು ಸಜ್ಜಾಗಿರುವ ಬಿಬಿಎಂಪಿಯು ನಗರದಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಪೌರ ಕಾರ್ಮಿಕರ ಹಾಜರಾತಿಯನ್ನು ಟ್ರ್ಯಾಕ್ ಮಾಡಲು ಬಯೋಮೆಟ್ರಿಕ್ ಯಂತ್ರವನ್ನು ಅಳವಡಿಸಲಾಗಿದೆ.
ಈ ಮೊದಲು ನೇರ ಹಣ ಪಾವತಿ ಸಂದರ್ಭದಲ್ಲಿ ತ್ಯಾಜ್ಯ ನಿರ್ವಹಣಾ ಬಿಲ್ ಅಡಿಯಲ್ಲಿ 1 ಸಾವಿರ ಕೋಟಿ ವೆಚ್ಚವಾಗುತ್ತಿತ್ತು. ಆದರೆ ಬಯೋ ಮೆಟ್ರಿಕ್ ಹಾಜರಾತಿಯನ್ನು ಆರಂಭಿಸಿರುವ ಕಾರಣ 250ಕೋಟಿ ರೂ ಉಳಿತಾಯವಾಗಿದೆ.

ತ್ಯಾಜ್ಯ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಿದರೆ ಇನ್ನೂ 150 ಕೋಟಿ ರೂ ಗಳನ್ನು ಉಳಿಸಬಹುದು ಎಂದು ಬಿಬಿಎಂಪಿ ಆಲೋಚಿಸಿದೆ.ಈಗಾಗಲೇ ಜಿಪಿಎಸ್ ಹಾಗೂ ರೇಡಿಯೋ ಫ್ರಿಕ್ವೆನ್ಸಿ ಕಾರ್ಡ್ ನೀಡಲು ಸಿದ್ಧತೆ ನಡೆಸಲಾಗಿದೆ.
ಈ ಮೊದಲು ಬಿಬಿಎಂಪಿಯಲ್ಲಿ ಗುತ್ತಿಗೆದಾರರು ಕಸ ವಿಲೇವಾರಿಯಲ್ಲಿ ಹಲವು ರೀತಿಯ ಹಗರಣಗಳು ನಡೆಯುತ್ತಿತ್ತು. ಇದರಲ್ಲಿ ಪೌರಕಾರ್ಮಿಕರ ಹಾಜರಾತಿಯೂ ಸಹ ದೊಡ್ಡ ಹಗರಣ. ಬಿಬಿಎಂಪಿಯಲ್ಲಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರರ ಎರಡರಿಂದ ಮೂರು ಪ್ಯಾಕೇಜ್ಗಳ (ಪ್ಯಾಕೇಜ್ಗೆ 2-3 ವಾರ್ಡ್ ) ಗುತ್ತಿಗೆ ಪಡೆದಿದ್ದಾರೆ. ಅವರು ಸ್ಥಳೀಯ ವಾರ್ಡ್ ಇಂಜಿನಿಯರ್ ಗೆ ಬೆಳಗ್ಗೆ ಕೆಲಸಕ್ಕೆ ಹಾಜರಾಗುತ್ತಿರುವ ಪೌರ ಕಾರ್ಮಿಕರು ಹಾಗೂ ಸಲಕರಣೆಗಳ ಪೆರೇಡ್ ನಡೆಸಬೇಕು.
ಈ ವೇಳೆ ಗುತ್ತಿಗೆದಾರ ಒಂದು ವಾರ್ಡ್ ನಲ್ಲಿ ಪ್ರದರ್ಶಿಸುವ ಪೌರಕಾರ್ಮಿಕರು ಹಾಗೂ ಸಲಕರಣೆಗಳನ್ನೇ ಮತ್ತೂಂದು ವಾರ್ಡ್ ನಲ್ಲೂ ಪ್ರದರ್ಶಿಸುತ್ತಿದ್ದರು ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಜಾರಿಗೆ ತಂದಿತ್ತು.5,500 ಆಟೋಗಳು ನಗರದಲ್ಲಿರುವ ತ್ಯಾಜ್ಯವನ್ನು ಸಂಗ್ರಹಿಸುತ್ತವೆ.. ಒಂದೊಮ್ಮೆ ಆರ್ಎಫ್ಐಡಿ ಕಾರ್ಡ್ ಹಾಗೂ ಜಿಪಿಎಸ್ ಅಳವಡಿಸಿದರೆ ಆಟೋಗಳ ಸಂಖ್ಯೆ 3500ಕ್ಕೆ ಕಡಿಮೆಯಾಗುತ್ತದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications