ಬೆಂಗಳೂರಿನ ಎಲ್ಲಾ ಬೀದಿಗೂ ಎಲ್ಇಡಿ ಬೆಳಕು!
ಬೆಂಗಳೂರು,ಫೆಬ್ರವರಿ 21 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಬೀದಿ ದೀಪಗಳಿಗೆ ಶೀಘ್ರ ಎಲ್ಇಡಿ ಬಲ್ಬ್ ಅಳವಡಿಸಲಿದ್ದು, ಇದರಿಂದ ಬಿಬಿಎಂಪಿಗೆ ಪ್ರತಿ ತಿಂಗಳು 8.4ಕೋಟಿ ರೂ ವಿದ್ಯುತ್ ವೆಚ್ಚ ಉಳಿತಾಯವಾಗಲಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ನಗರದಲ್ಲಿ 4,85,000 ಸಾಂಪ್ರದಾಯಿಕ ಬೀದಿ ದೀಪಗಳನ್ನು ತೆಗೆದು ಅವುಗಳ ಸ್ಥಾನಕ್ಕೆ ಎಲ್ಇಡಿ ಬಲ್ಪ್ ಅಳವಡಿಸಲು ಕರೆದಿರುವ ಟೆಂಡರ್ ಪ್ರಶ್ನಿಸಿ ಬಿಬಿಎಂಪಿ ವಿದ್ಯುತ್ ಗುತ್ತಿಗೆದಾರರ ಸಂಘ ಸಲ್ಲಿಸಿದ್ದ ಅರ್ಜಿಗೆ ಲಿಖಿತ ಆಕ್ಷೇಪಣೆ ಸಲ್ಲಿಸಿದ ಬಿಬಿಎಂಪಿ ಈ ಮಾಹಿತಿ ನೀಡಿದೆ.
ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಬೀದಿ ದೀಪಗಳ ಸ್ಥಾನದಲ್ಲಿ ಎಲ್ಇಡಿ ಬಲ್ಬ್ ಅಳವಡಿಸಲು ಜಾಗತಿಕ ಟೆಂಡರ್ ಕರೆಯಲಾಗಿದೆ. ತಜ್ಞರ ಸಮಿತಿ ಶಿಫಾರಸು ಮೇರೆಗೆ ಈ ಕ್ರಮಕ್ಕೆ ನಿರ್ಧರಿಸಲಾಗಿದೆ. ಹಾಲಿ ಸಾಂಪ್ರದಾಯಿಕ ಬೀದಿ ದೀಪಗಳು ಬೆಳಗಲು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಬಳಸಲಾಗುತ್ತಿದೆ.

ಇಲ್ಇಡಿ ಬಲ್ಬ್ ಅಳವಡಿಸಿದರೆ ವಿದ್ಯುತ್ ಬಳಕೆ ಪ್ರಮಾಣ ಹಾಗೂ ನಿರ್ವಹಣೆಯ ವೆಚ್ಚ ಶೇ60 ರಿಂದ 70 ರಷ್ಟು ಕಡಿಮೆಯಾಗಲಿದೆ ಎಂದು ಆಕ್ಷೇಪಣಾ ಪತ್ರದಲ್ಲಿ ತಿಳಿಸಿದೆ.
ಅಲ್ಲದೆ ನೂತನ ಯೋಜನೆ ಅಡಿ 65, 90 ಹಾಗೂ 150 ವ್ಯಾಟ್ ಗಳ ಬಲ್ಬ್ ಬಳಸಲಾಗುವುದು. ಯೋಜನೆ ಒಪ್ಪಂದ 10 ವರ್ಷ ಅವಧಿಯದ್ದಾಗಿರುತ್ತದೆ. ಪ್ರಾಯಶಃ ದೇಶದಲ್ಲೇ ಇದು ಅತಿದೊಡ್ಡ ಯೋಜನೆಯಾಗಿದೆ ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications