ಬೆಂಗಳೂರಿನ ಎಲ್ಲಾ ಬೀದಿಗೂ ಎಲ್ಇಡಿ ಬೆಳಕು!
ಬೆಂಗಳೂರು,ಫೆಬ್ರವರಿ 21 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಬೀದಿ ದೀಪಗಳಿಗೆ ಶೀಘ್ರ ಎಲ್ಇಡಿ ಬಲ್ಬ್ ಅಳವಡಿಸಲಿದ್ದು, ಇದರಿಂದ ಬಿಬಿಎಂಪಿಗೆ ಪ್ರತಿ ತಿಂಗಳು 8.4ಕೋಟಿ ರೂ ವಿದ್ಯುತ್ ವೆಚ್ಚ ಉಳಿತಾಯವಾಗಲಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ನಗರದಲ್ಲಿ 4,85,000 ಸಾಂಪ್ರದಾಯಿಕ ಬೀದಿ ದೀಪಗಳನ್ನು ತೆಗೆದು ಅವುಗಳ ಸ್ಥಾನಕ್ಕೆ ಎಲ್ಇಡಿ ಬಲ್ಪ್ ಅಳವಡಿಸಲು ಕರೆದಿರುವ ಟೆಂಡರ್ ಪ್ರಶ್ನಿಸಿ ಬಿಬಿಎಂಪಿ ವಿದ್ಯುತ್ ಗುತ್ತಿಗೆದಾರರ ಸಂಘ ಸಲ್ಲಿಸಿದ್ದ ಅರ್ಜಿಗೆ ಲಿಖಿತ ಆಕ್ಷೇಪಣೆ ಸಲ್ಲಿಸಿದ ಬಿಬಿಎಂಪಿ ಈ ಮಾಹಿತಿ ನೀಡಿದೆ.
ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಬೀದಿ ದೀಪಗಳ ಸ್ಥಾನದಲ್ಲಿ ಎಲ್ಇಡಿ ಬಲ್ಬ್ ಅಳವಡಿಸಲು ಜಾಗತಿಕ ಟೆಂಡರ್ ಕರೆಯಲಾಗಿದೆ. ತಜ್ಞರ ಸಮಿತಿ ಶಿಫಾರಸು ಮೇರೆಗೆ ಈ ಕ್ರಮಕ್ಕೆ ನಿರ್ಧರಿಸಲಾಗಿದೆ. ಹಾಲಿ ಸಾಂಪ್ರದಾಯಿಕ ಬೀದಿ ದೀಪಗಳು ಬೆಳಗಲು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಬಳಸಲಾಗುತ್ತಿದೆ.

ಇಲ್ಇಡಿ ಬಲ್ಬ್ ಅಳವಡಿಸಿದರೆ ವಿದ್ಯುತ್ ಬಳಕೆ ಪ್ರಮಾಣ ಹಾಗೂ ನಿರ್ವಹಣೆಯ ವೆಚ್ಚ ಶೇ60 ರಿಂದ 70 ರಷ್ಟು ಕಡಿಮೆಯಾಗಲಿದೆ ಎಂದು ಆಕ್ಷೇಪಣಾ ಪತ್ರದಲ್ಲಿ ತಿಳಿಸಿದೆ.
ಅಲ್ಲದೆ ನೂತನ ಯೋಜನೆ ಅಡಿ 65, 90 ಹಾಗೂ 150 ವ್ಯಾಟ್ ಗಳ ಬಲ್ಬ್ ಬಳಸಲಾಗುವುದು. ಯೋಜನೆ ಒಪ್ಪಂದ 10 ವರ್ಷ ಅವಧಿಯದ್ದಾಗಿರುತ್ತದೆ. ಪ್ರಾಯಶಃ ದೇಶದಲ್ಲೇ ಇದು ಅತಿದೊಡ್ಡ ಯೋಜನೆಯಾಗಿದೆ ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications