BBMP Scam: 6,600 ಪೌರಕಾರ್ಮಿಕರ ಹೆಸರಲ್ಲಿ ಕೋಟಿ ಕೋಟಿ ಲೂಟಿ: ಲೋಕಾಯುಕ್ತ ತನಿಖೆ ?!
ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ)ಯಲ್ಲಿ ಇದೀಗ ಮತ್ತೊಂದು ಬಹುಕೋಟಿ ಹಗರಣ ಸದ್ದು ಮಾಡುತ್ತಿದೆ. ಅದು ಸಹ ಪೌರಕಾರ್ಮಿಕ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಗುಳುಂ ಆಗಿರುವ ಆರೋಪ ಕೇಳಿ ಬಂದಿದ್ದು. ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ ತನಿಖೆಗೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಯಂ ಹಾಗೂ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರು ಇದ್ದಾರೆ. ಆದರೆ, ಈ ಪೌರಕಾರ್ಮಿಕರ ಇ.ಎಸ್.ಐ ಮತ್ತು ಪಿ.ಎಫ್ನಲ್ಲೂ ಹಣ ಲೂಟಿಯಾಗಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಹೆಸರಿನಲ್ಲಿ ನೂರಾರು ಕೋಟಿ ಅಕ್ರಮವಾಗಿರುವ ಆರೋಪ ಕೇಳಿ ಬಂದಿದೆ. ಇದರ ತನಿಖೆಯನ್ನು ಕರ್ನಾಟಕ ಲೋಕಾಯುಕ್ತ ಪ್ರಾರಂಭಿಸಿದೆ. ಇದಕ್ಕೆ ಸಹಕಾರ ನೀಡುವಂತೆ ಬಿಬಿಎಂಪಿಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಸಮಿತಿಯನ್ನೂ ರಚಿಸಲಾಗಿದೆ.

ಏನಿದು ಆರೋಪ ?
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಇ.ಎಸ್.ಐ ಮತ್ತು ಪಿ.ಎಫ್ ಹಣದ ಮೊತ್ತ ಬರೋಬ್ಬರಿ 384.00 ಕೋಟಿ ರೂಪಾಯಿ ಮತ್ತು 6,600 ನಕಲಿ ಪೌರಕಾರ್ಮಿಕರ ಹೆಸರಿನಲ್ಲಿ ಬರೋಬ್ಬರಿ 550.00 ಕೋಟಿ ರೂಪಾಯಿಗಳ ವೇತನ ವಂಚನೆ ಆಗಿದೆ ಎನ್ನುವ ಬೃಹತ್ ಹಗರಣದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳದ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದೂರಿಗೆ ಸಂಬಂಧಿಸಿದಂತೆ ಮೊಕದ್ದಮೆಯ ತನಿಖಾಧಿಕಾರಿಗಳಿಗೆ ಬಿ.ಬಿ.ಎಂ.ಪಿಯ ದಾಖಲೆಯ ಪರಿಶೀಲನೆಗೆ ಸಹಕರಿಸುವ ಸಂಬಂಧಿಸಿದಂತೆ ತಾಂತ್ರಿಕ ತಂಡವನ್ನು ರಚಿಸಲಾಗಿದೆ. ತಾಂತ್ರಿಕ ತಂಡದ ರಚನೆಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಈ ಪ್ರಕರಣ ವಿಷಯ ಬಹಿರಂಗವಾಗಿದೆ.
ಬಿಬಿಎಂಪಿ ರಚಿಸಿದ ತಾಂತ್ರಿಕ ತಂಡದ ವಿವರ
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯು ಆರು ಜನ ಅಧಿಕಾರಿಗಳನ್ನು ಒಳಗೊಂಡ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದೆ. ಈ ತಾಂತ್ರಿಕ ತಂಡದಲ್ಲಿ ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ - ಮುಖ್ಯ ಅಧ್ಯಕ್ಷರಾಗಿದ್ದಾರೆ. ಅಧಿಕಾರಿಗಳಾದ ಉದಯ್ ಚೌಗುಲೆ, ಅಬ್ದುರಾಜ್ ಎಂ.ಶಿವಶಂಕರ್, ಕದರಣ್ಣ ಹಾಗೂ ಕಾಶಿನಾಥ್ ಇದ್ದಾರೆ. ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಈ ತಾಂತ್ರಿಕ ತಂಡವು ಬಿಬಿಎಂಪಿಯಲ್ಲಿನ ಸಂಬಂಧಿತ ದಾಖಲೆಗಳನ್ನು ಕರ್ನಾಟಕ ಲೋಕಾಯುಕ್ತದ ತನಿಖಾಧಿಕಾರಿಯವರಿಗೆ ಶೀಘ್ರವಾಗಿ ಒದಗಿಸಲು ಹಾಗೂ ತನಿಖೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ಈ ಸಂಬಂಧ ಬಿಬಿಎಂಪಿಯ ಆರೋಗ್ಯ ಹಾಗೂ ನೈರ್ಮಲೀಕರಣದ ವಿಶೇಷ ಆಯುಕ್ತ ಸುರಾಳ್ಕರ್ ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications