ಫ್ರೆಂಚ್ ಕಲಿಯಲಿದ್ದಾರೆ ಬೆಂಗಳೂರಿನ ಪಾಲಿಕೆ ಶಾಲೆ-ಕಾಲೇಜು ವಿದ್ಯಾರ್ಥಿಗಳು
Recommended Video

ಬೆಂಗಳೂರು, ಸೆಪ್ಟೆಂಬರ್ 26: ಮುಂದಿನ ಐದು ವರ್ಷಗಳಲ್ಲಿ 156 ಬಿಬಿಎಂಪಿ ಶಾಲೆ, ಕಾಲೇಜುಗಳು ರೋಶನಿ ಯೋಜನೆ ಅಡಿಯಲ್ಲಿ ಫ್ರಾನ್ಸ್ ನ ಶಿಕ್ಷಕರಿಂದ ಫ್ರೆಂಚ್ ಕಲಿಯಲಿವೆ. ಬುಧವಾರದಂದು ಮೈಕ್ರೋಸಾಫ್ಟ್ ಹಾಗೂ ಟೆಕ್ ಅವಂಟ್-ಗಾರ್ಡೆ ಸಹಯೋಗದಲ್ಲಿ ಪಾಲಿಕೆ ಈ ಯೋಜನೆಗೆ ಚಾಲನೆ ನೀಡಿದೆ.
"ವಿಶ್ವದಲ್ಲೇ ಮೊದಲ ಬಾರಿಗೆ ಇಂಥದ್ದೊಂದು ಪ್ರಯತ್ನ ಮಾಡಲಾಗುತ್ತಿದೆ. ಪಾಲಿಕೆ ಶಾಲೆಗಳು ಹೇಗೆ ಕೆಲಸ ಮಾಡುತ್ತವೆ ಎಂಬುದು ಎಲ್ಲರಿಗೂ ಗೊತ್ತಿದೆ. ಪಾಠ ಮಾಡುವ ವಿಧಾನ ಬದಲಾಗಿಯೇ ಇಲ್ಲ. ಆದರೆ ನಾವು ಈಗ ಅದನ್ನು ಬದಲಾಯಿಸಲು ಬಯಸಿದ್ದೇವೆ. ಆ ಮೂಲಕ ಖಾಸಗಿ ಶಾಲೆಗಳ ಜತೆಗೆ ಸ್ಪರ್ಧೆ ನಡೆಸಬಹುದು" ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಈ ಯೋಜನೆ ಮೂಲಕ ಮೈಕ್ರೋಸಾಫ್ಟ್ ಆಸ್ಪೈರ್ ಸ್ಟೂಡೆಂಟ್ ಕಾರ್ಯಕ್ರಮವನ್ನು ಪಾಲಿಕೆಯ ಎಲ್ಲ ಶಾಲೆಗಳಲ್ಲಿ ಜಾರಿಗೆ ತರಲಾಗುವುದು. ಆಗ್ಯುಮೆಂಟೆಡ್ ರಿಯಾಲಿಟಿ, ವರ್ಚುಯಲ್ ರಿಯಾಲಿಟಿ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅನ್ನು ಕ್ಲೌಡ್ ಹಾಗೂ ಐಒಟಿ ತಂತ್ರಜ್ಞಾನದ ಜತೆಗೇ ಶಾಲೆಗಳಲ್ಲಿ ಅಳವಡಿಸಿಕೊಳ್ಳಲಾಗುತ್ತದೆ.

ಇದು ಐದು ವರ್ಷದ ಯೋಜನೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಸದ್ಯಕ್ಕೆ ಇರುವ ಶಾಲೆಯ ಮೂಲ ಸೌಕರ್ಯಗಳ ಸಮೀಕ್ಷೆ ಪೂರ್ಣವಾಗಿದೆ. ಇದು ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಅಡಿಯಲ್ಲಿ ಕೈಗೆತ್ತಿಕೊಂಡ ಯೋಜನೆ ಆದ್ದರಿಂದ ಪಾಲಿಕೆಯಿಂದ ಯಾವುದೇ ಹಣವನ್ನು ಹೂಡಿಕೆ ಮಾಡುತ್ತಿಲ್ಲ.
ಮೈಕ್ರೋಸಾಫ್ಟ್ ನಿಂದ ಐನೂರು- ಆರು ನೂರು ಕೋಟಿ ರುಪಾಯಿ ಹಣ ಹೂಡಿಕೆ ಮಾಡುತ್ತಾರೆ. ಸುರಕ್ಷತೆ, ಕಟ್ಟಡ ಹಾಗೂ ತಂತ್ರಜ್ಞಾನ ಮೂಲಸೌಕರ್ಯದ ಹೊಣೆ ಕೂಡ ಅವರದೇ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
ಈಗಾಗಲೇ ಇದಕ್ಕಾಗಿ ಕೆಲಸಗಳು ಶುರುವಾಗಿವೆ. ಶಿಕ್ಷಕ- ಶಿಕ್ಷಕಿಯರ ಸಂಖ್ಯೆ, ಮೂಲ ಸೌಕರ್ಯ ಮತ್ತಿತರ ಅನುಕೂಲಕ್ಕೆ ತಯಾರಿ ನಡೆದಿದೆ. ಬಿಬಿಎಂಪಿ ಶಾಲೆ ಹಾಗೂ ಕಾಲೇಜುಗಳು ಒಂದಕ್ಕೊಂದು ಹೊಂದಿಕೊಂಡಂಥ ಕಲಿಕಾ ಸಮುದಾಯವಾಗಿ ಮಾರ್ಪಡಲಿದೆ. ಈಗಾಗಲೇ ಬಿಬಿಎಂಪಿ ಶಿಕ್ಷಕರು ಮೈಕ್ರೋಸಾಫ್ಟ್ ಇನೊವೇಟಿವ್ ಎಜುಕೇಟರ್ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.
ಬೆಂಗಳೂರಿನಲ್ಲಿರುವ ವಿದ್ಯಾರ್ಥಿಗಳು ಫ್ರಾನ್ಸ್ ನಲ್ಲಿರುವ ಶಿಕ್ಷಕರಿಂದ ಫ್ರೆಂಚ್ ಕಲಿಯುವ ದಿನ ಇನ್ನೇನು ಹತ್ತಿರದಲ್ಲಿದೆ ಎಂದು ಟೆಕ್ ಅವಂಟ್ ಗಾರ್ಡೆ ಸಿಇಒ ಅಲಿ ಸೇಠ್ ತಿಳಿಸಿದ್ದಾರೆ.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications