ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಉಚಿತ ವೈ-ಫೈ ಸೌಲಭ್ಯ
ಬೆಂಗಳೂರು, ಜು.5: ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಉಚಿತ ವೈ-ಫೈ ಸೌಲಭ್ಯ ನೀಡಲು ಪಾಲಿಕೆಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಬಿಬಿಎಂಪಿ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕರೆತರಲು ಬಿಬಿಎಂಪಿ ಶಿಕ್ಷಣ ಇಲಾಖೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಮೂಲಭೂತ ಸೌಕರ್ಯಗಳು ಸಮರ್ಪಕವಾಗಿಲ್ಲದ ಕಾರಣ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರಲು ಹಿಂದೇಟು ಹಾಕುತ್ತಿದ್ದರು. ವಿದ್ಯಾರ್ಥಿಘಳನ್ನು ಶಾಲಾ, ಕಾಲೇಜುಗಳೆಡೆಗೆ ಸೆಳೆಯಲು ಸಾಕಷ್ಟು ಯೋಜನೆಗಳನ್ನು ರೂಪಿಸಿದೆ.
ಜತೆಗೆ ಬಸ್ ನಿಲ್ದಾಣಗಳಲ್ಲಿ ಪಾಸ್ ಪಡೆಯಲು ಕ್ಯೂನಲ್ಲಿ ನಿಲ್ಲಬೇಕಾಗಿತ್ತು ಅದನ್ನು ತಪ್ಪಿಸಲು ಶಾಲಾ, ಕಾಲೇಜುಗಳ ಮೂಲಕವೇ ಪಾಸ್ಗಳನ್ನು ವಿತರಿಸುವ ವ್ಯವಸ್ಥೆ ಮಾಡಿದೆ.ಆದರೆ, ಪಾಲಿಕೆ ಒಡೆತನದ ಶಾಲಾ ಕಾಲೇಜುಗಳಲ್ಲಿ ಪಾಸ್ಗಳಿಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅಂತರ್ಜಾಲ ಸವಲತ್ತು ಲಭ್ಯವಿಲ್ಲ ಹೀಗಾಗಿ, ಮಕ್ಕಳು ಪಾಸ್ಗಳನ್ನು ಪಡೆಯಲಾಗದೆ ತೊಂದರೆ ಅನುಭವಿಸುವಂತಾಗಿದೆ.

ಖಾಸಗಿ ಸೈಬರ್ ಸೆಂಟರ್ಗಳಲ್ಲಿ ಪ್ರತಿ ಅರ್ಜಿ ಸಲ್ಲಿಕೆಗೆ 50 ರೂ. ಶುಲ್ಕ ತೆರಬೇಕಾಗುತ್ತದೆ. ಈ ಸಮಸ್ಯೆಯನ್ನು ತಪ್ಪಿಸುವ ಸಲುವಾಗಿ ಪಾಲಿಕೆ ಶಿಕ್ಷಣ ಇಲಾಖೆ ಅಧಿಕಾರಿಗಳು 61 ಶಾಲಾ-ಕಾಲೇಜುಗಳಲ್ಲಿ ವೈ-ಫೈ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಿದ್ದಾರೆ. ಬಹುತೇಕ ಶಾಲೆಗಳಲ್ಲಿ ಕಂಪ್ಯೂಟರ್ಗಳಿವೆ. ಆದರೆ ಅಂತರ್ಜಾಲ ಸಂಪರ್ಕವಿಲ್ಲ. ವೈಫೈ ಸೇವೆ ಕಲ್ಪಿಸಿದರೆ ಸುಲಭವಾಗಿ ಪಾಸ್ಗಳಿಗೆ ಸರ್ಜಿ ಸಲ್ಲಿಸಬಹುದಾಗಿದೆ.
ಇನ್ನಿತರೆ ಅನುಕೂಲಗಳು ಇದರಿಂದಾಗಲಿದೆ. ಬಿಬಿಎಂಪಿ ವ್ಯಾಪ್ತಿಯ 15 ಪ್ರಾಥಮಿಕ, 32 ಪ್ರೌಢಶಾಲೆ, 14 ಪದವಿಪೂರ್ವ ಮತ್ತು 4 ಪದವಿ ಕಾಲೇಜುಗಳಿದ್ದು, ಸುಮಾರು 16 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ












Click it and Unblock the Notifications