ಮಾನ್ಯತಾ ಟೆಕ್ ಪಾರ್ಕ್ ಕಚೇರಿ ಜಪ್ತಿ ಮಾಡಿದ ಬಿಬಿಎಂಪಿ
ಬೆಂಗಳೂರು, ಜೂನ್ 20: ಕೋಟ್ಯಂತರ ರುಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ಕಚೇರಿಯನ್ನು ಬಿಬಿಎಂಪಿ ಅಧಿಕಾರಿಗಳು ಸೋಮವಾರ ಬೆಳಗ್ಗೆ ಜಪ್ತಿ ಮಾಡಿದ್ದಾರೆ. 273 ಕೋಟಿ ರು ತೆರಿಗೆ ಬಾಕಿ ಮೊತ್ತ ಪಾವತಿಸುವಂತೆ ನೋಟಿಸ್, ವಾರೆಂಟ್ ಜಾರಿಗೊಳಿಸಲಾಗಿತ್ತು. ಆದರೆ, ಇದಕ್ಕೆ ಪ್ರತಿಕ್ರಿಯೆ ಬಂದಿರಲಿಲ್ಲ.
ಹೀಗಾಗಿ ಕೋರ್ಟ್ ಆದೇಶದಂತೆ ಕಾರ್ಯಾಚರಣೆಗಿಳಿದ ಜಂಟಿ ಆಯುಕ್ತ(ಯಲಹಂಕ ವಲಯ) ಸರ್ಫರಾಜ್ ಖಾನ್ ನೇತೃತ್ವದ ತಂಡ, ಹೆಬ್ಬಾಳದ ಬಳಿ ಇರುವ ಮಾನ್ಯತಾ ಟೆಕ್ ಪಾರ್ಕ್ ಕಚೇರಿಯನ್ನು ಬಂದ್ ಮಾಡಿದ್ದಾರೆ. [ಬಿಬಿಎಂಪಿ ಆಸ್ತಿ ತೆರಿಗೆ(ವಿನಾಯಿತಿ ಸಹಿತ) ಪಾವತಿ ಅವಧಿ ವಿಸ್ತರಣೆ]
ಪ್ರತಿ ಚದರಡಿಗೆ 10 ರು ಪಾವತಿಸಬೇಕಿದ್ದ ಟೆಕ್ ಪಾರ್ಕ್ 8 ರು ಮಾತ್ರ ಪಾವತಿಸಿ ತೆರಿಗೆ ವಂಚಿಸಿದ ಆರೋಪ ಹೊತ್ತಿದೆ. ಮೂರು ದಿನದೊಳಗೆ 273.95 ಕೋಟಿ ರು ತೆರಿಗೆ ಬಾಕಿ ಪಾವತಿಸುವಂತೆ ಜೂನ್ 9ರಂದು ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಮಾನ್ಯತಾ ಟೆಕ್ ಪಾರ್ಕ್ ನ ಪ್ರವರ್ತಕರಾದ ರೆಡ್ಡಿ ವೀರಣ್ಣ ಅವರು, ಆಸ್ತಿ ತೆರಿಗೆಯನ್ನು ಕಾನೂನು ಪ್ರಕಾರವಾಗಿ ಪಾವತಿಸಲಾಗುವುದು ಎಂದು ಹೇಳಿದ್ದಾರೆ.[ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ ಮಾಡುವುದು ಹೇಗೆ?]

ಸರ್ಫರಾಜ್ ಖಾನ್ ಪ್ರತಿಕ್ರಿಯೆ: ಕೋರ್ಟ್ ಆದೇಶದಂತೆ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ಕಡತಗಳನ್ನು ಜಪ್ತಿ ಮಾಡಲಾಗಿದೆ. ಕಚೇರಿಗಳು ಕಾರ್ಯ ನಿರ್ವಹಿಸುತ್ತಿಲ್ಲ ಎಂದಿದ್ದಾರೆ [ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಕ್ರಿಮಿನಲ್ ಪ್ರಕರಣ?]
* ಒಟ್ಟು 83.45 ಕೋಟಿ ರು ತೆರಿಗೆ ಮೊತ್ತ ಅದಕ್ಕೆ ಶೇ 24ರಷ್ಟು ಬಡ್ಡಿ ಸೇರಿ 273.95 ಕೋಟಿ ರು ಬಾಕಿ.
* 2008-09 ರಿಂದ 2015-16 ರ ಅವಧಿಗೆ ವಾರ್ಷಿಕ ಶೇ 24ರಂತೆ ಬಡ್ಡಿ ಲೆಕ್ಕಾಚಾರ.
* ಸುಮಾರು 125 ಎಕರೆ ವಿಸ್ತೀರ್ಣದ ಟೆಕ್ ಪಾರ್ಕಿನಲ್ಲಿರುವ ಒಟ್ಟು 17 ಕಟ್ಟಡಗಳಿಂದ ತೆರಿಗೆ ಬಾಕಿ.
* ಸ್ವಯಂ ಘೋಷಿತಾ ಅಸ್ತಿ(SAS) ಅಡಿಯಲ್ಲಿ ಮಾನ್ಯತಾ ಟೆಕ್ ಪಾರ್ಕ್ ನೀಡಿರುವ ದಾಖಲೆ ಪ್ರಕಾರ ಪ್ರತಿ ಚದರಡಿಗೆ 8 ರು ಮಾತ್ರ ಪಾವತಿಸುತ್ತಾ ಬಂದಿದೆ. ಇದು ನಿಯಮ ಉಲ್ಲಂಘನೆಯಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ.
* ಬಿಬಿಎಂಪಿ ಆಸ್ತಿ ತೆರಿಗೆ ವಲಯ ಬದಲಾಗಿದ್ದು, ಮಾನ್ಯತಾ ಟೆಕ್ ಪಾರ್ಕ್ ಹೆಬ್ಬಾಳ ವಿಭಾಗದ ಯಲಹಂಕ ವಲಯ ಡಿ ಜೋನ್ ನಲ್ಲಿದೆ.[ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಬಳಿ ಸ್ಕೈ ವಾಕ್ ಸಿದ್ಧ]
ಮಾನ್ಯತಾ ಟೆಕ್ ಪಾರ್ಕಿನಲ್ಲಿ ಐಬಿಎಂ, ಆಕ್ಸಾ, ಮೈಕ್ರೋಸಾಫ್ಟ್ ,ಅಟ್ಲಾಸ್, ಅದಿತಿ ಟೆಕ್ನಾಲಜೀಸ್,ಎಎನ್ ಜಡ್, ಕಾಂಗ್ನಿಜೆಂಟ್, ಕೋಲ್ಟ್, ಡಾಟಾ ಕ್ರಾಫ್ಟ್, ಜಸ್ಟ್ ಡಯಲ್, ಎಲ್ ಅಂಡ್ ಟಿ, ನೋಕಿಯಾ, ಫಿಲಿಫ್ಸ್, ಎಸ್ಎಲ್ ಕೆ ಗ್ರೂಪ್, ಟಾರ್ಗೆಟ್, ಟಿಸಿಎಸ್ ಸೇರಿದಂತೆ ಅನೇಕ ಕಂಪನಿಗಳಿದ್ದು , 95,000ಕ್ಕೂ ಅಧಿಕ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications