Tax Pending: ಮೊದಲ ಭಾರಿಗೆ ಕಾರು, ಶಾಲಾ ಬಸ್ ವಶಕ್ಕೆ ಪಡೆದ ಬಿಬಿಎಂಪಿ
ಬೆಂಗಳೂರು, ಫೆಬ್ರವರಿ 13: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಸ್ತಿ ತೆರಿಗೆ ಪಾವತಿಸದ ಕಾರಣಕ್ಕಾಗಿ ಕಾರುಗಳು ಮತ್ತು ಶಾಲಾ ಬಸ್ಗಳಂತಹ ಚರ ಆಸ್ತಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಜಪ್ತಿ ಮಾಡಿದೆ. ಈ ಮೂಲಕ ತೆರಿಗೆ ಬಾಕಿದಾರರಿಗೆ ಬಿಸಿ ಮುಟ್ಟಿಸಿದೆ.
ತೆರಿಗೆ ಬಾಕಿದಾರರಿಂದ ವಸೂಲಿಗಾಗಿ ಹಲವು ಭಾರಿ ನೋಟೀಸ್ ನೀಲಾಗಿತ್ತು. ಆದರೆ ಸ್ಪಂದಿಸದ ಕಾರಣ ತೆರಿಗೆ ಮರುಪಡೆಯುವಿಕೆ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಬಿಬಿಎಂಪಿಯ ಯಲಹಂಕ ವಿಭಾಗದಲ್ಲಿ ಎಲ್ಲಾ ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆರಿಗೆ ಬಾಕಿದಾರರ ವಾಹನ ಜಪ್ತಿ ಬಳಿಕ ಅವರು ಕೆಲವೇ ಗಂಟೆಗಳ ನಂತರ ಶೇಕಡಾ 50% ಪಾವತಿಸಲು ಮತ್ತು ನಮ್ಮ ನೋಟೀಸ್ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾಗಿ ತಿಳಿದು ಬಂದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.
ಆರು ತಿಂಗಳಿಂದ ಕಾರ್ಯಾಚರಣೆ
ಬಿಬಿಎಂಪಿ ತನ್ನ ತರಿಗೆ ವಸೂಲಿ ಡ್ರೈವ್ ಭಾಗವಾಗಿ ಕಳೆದ ಆರು ತಿಂಗಳಲ್ಲಿ 10,603 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆ ಸೀಲ್ ಮಾಡಿತ್ತು. ಸದ್ಯ ವಶಪಡಿಸಿಕೊಂಡ ವಾಹನಗಳನ್ನು ಇಡಲು ಮೀಸಲಾದ ಸ್ಥಳವನ್ನು ಹೊಂದಿಲ್ಲದ ಕಾರಣ ನಾಗರಿಕ ಸಂಸ್ಥೆ ಚಲಿಸಬಲ್ಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ ಎಂದು ತಿಳಿದು ಬಂದಿದೆ.
2023ರ ನವೆಂಬರ್ ನಿಂದ ಫೆಬ್ರವರಿ ಮಧ್ಯದಲ್ಲಿ 46,318 ಆಸ್ತಿಗಳಿಗೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿದೆ. ಇದೇ ಅವಧಿಯಲ್ಲಿ ಕಂದಾಯ ಇಲಾಖೆ ವತಿಯಿಂದ ತಮ್ಮ ನಿವೇಶನಗಳನ್ನು ಸೀಲ್ ಮಾಡಿದರೂ ತೆರಿಗೆ ಪಾವತಿಸದ 7,203 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

ಬಿಬಿಎಂಪಿಗೆ ಬರಬೇಕಾದ ಬಾಕಿ ಎಷ್ಟು?
ಬಿಬಿಎಂಪಿಗೆ ಒಟ್ಟು 500 ಕೋಟಿ ರೂ.ಗೂ ಹೆಚ್ಚು ಬಾಕಿ ಹಣ ಪಾವತಿಯಾಗಬೇಕಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಹಣ ಬಾಕಿ ಉಳಿಸಿಕೊಂಡ ತೆರಿಗೆ ಸುಸ್ತಿದಾರರ ವಿರುದ್ಧ ಇಂಥದ್ದೊಂದು ಜಪ್ತಿ ಕ್ರಮ ಕೈಗೊಂಡಿದ್ದು ಇದೇ ಮೊದಲು ಎಂದು ಬಿಬಿಎಂಪಿ ತಿಳಿಸಿದೆ.
ಇನ್ನೂ ಸ್ವ-ಮೌಲ್ಯಮಾಪನ ಯೋಜನೆ (ಎಸ್ಎಎಸ್) ಅಡಿಯಲ್ಲಿ ಸಲ್ಲಿಸಿದ ದಾಖಲೆಗಳು ಮತ್ತು ಆಸ್ತಿಯನ್ನು ಮರು ಪರಿಶೀಲಿಸಲು ಬಿಬಿಎಂಪಿ ಆಸ್ತಿಗಳನ್ನು ಮರು ಪರಿಶೀಲಿಸಲು ಆರಂಭಿಸಿದೆ. ಈ ಉಪಕ್ರಮವು ಬಿಬಿಎಂಪಿಯ ಆದಾಯವನ್ನು 550 ಕೋಟಿ ರೂ.ಗಳಷ್ಟು ಹೆಚ್ಚಿಸಲು ನೆರವಾಗಲಿದೆ ಎಂದು ಬಿಬಿಎಂಪಿ ಅಂದಾಜಿಸಿದೆ.
ಬಿಬಿಎಂಪಿಯ ತೆರಿಗೆ ವಸೂಲಾತಿ ಅಭಿಯಾನವನ್ನು ವಿರೋಧಿಸಿದ ಪ್ರಮುಖ ನಾಯಕರಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಸೇರಿದ್ದಾರೆ. ಸೋಮವಾರ, ಬಿಜೆಪಿ ನಾಯಕರ ನಿಯೋಗ ಬಿಬಿಎಂಪಿಯ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದೆ. ಇದು "ಸುಲಿಗೆ" ಮತ್ತು "ನಾಗರಿಕರ ಕಿರುಕುಳ" ಎಂದು ದೂರಿದೆ.
85 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ
ನಗರದ ಯಲಹಂಕ ವಲಯ ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52ರಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪಾಲಿಕೆ ವಶಪಡಿಸಿಕೊಂಡಿದೆ.
ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಾಗದಲ್ಲಿ ಕೆಲವು ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡು ಶೆಡ್ಗಳನ್ನು ನಿರ್ಮಿಸಿಕೊಂಡು ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದರು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications