73 ಅಂಗಡಿಗಳಿಗೆ ಬೀಗ ಜಡಿದ ಬಿಬಿಎಂಪಿ
ಬೆಂಗಳೂರು, ಜು. 11 : ಸುಮಾರು 1 ಕೋಟಿ ರೂ.ಗಳಷ್ಟು ಬಾಕಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಪಾವತಿ ಮಾಡಬೇಕಾಗಿದ್ದ ಕೆ.ಆರ್.ಮಾರುಕಟ್ಟೆಯ 73 ಮಳಿಗೆಗಳಿಗೆ ಬಿಬಿಎಂಪಿ ಶುಕ್ರವಾರ ಬೀಗ ಜಡಿದಿದೆ. ಕಾಲಾವಕಾಶ ನೀಡಿದರೂ ಬಾಡಿಗೆ ಪಾವತಿ ಮಾಡದ ಅಂಗಡಿಗಳನ್ನು ಮಾರುಕಟ್ಟೆ ಸ್ಥಾಯಿ ಸಮಿತಿ ಮುಚ್ಚಿಸಿದೆ.
ಶುಕ್ರವಾರ ಕೆ.ಆರ್. ಮಾರುಕಟ್ಟೆಯಲ್ಲಿ ಬಿಬಿಎಂಪಿ ಮಾರುಕಟ್ಟೆ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಮ್ಮ ಅವರ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ವ್ಯಾಪಾರಿಗಳ ವಿರೋಧದ ನಡುವೆಯೂ ಮಳಿಗೆಗಳಿಗೆ ಬೀಗ ಹಾಕಲಾಗಿದೆ. [ಕೃಷ್ಣ ರಾಜೇಂದ್ರ ಮಾರುಕಟ್ಟೆಯನ್ನು ಬೆಳಗಿದ ಹಸಿ ತ್ಯಾಜ್ಯ]

ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ ಗೌರಮ್ಮ ಅವರು, ಸುಮಾರು 25 ವರ್ಷಗಳಿಂದ ಕೆ.ಆರ್.ಮಾರುಕಟ್ಟೆಯ 73 ವ್ಯಾಪಾರಿಗಳು ಬಾಡಿಗೆ ಪಾವತಿ ಮಾಡಿರಲಿಲ್ಲ. ಗುತ್ತಿಗೆ ನವೀಕರಿಸುತ್ತಿರಲಿಲ್ಲ. ಈ ಬಗ್ಗೆ ಹಿಂದೆಯೇ ನೋಟಿಸ್ ನೀಡಿ ಜುಲೈ 10ರ ಗಡುವು ನೀಡಲಾಗಿತ್ತು. ಆದರೂ ಪಾವತಿ ಮಾಡದ ಹಿನ್ನಲೆಯಲ್ಲಿ ಬೀಗ ಹಾಕಲಾಗಿದೆ ಎಂದು ಹೇಳಿದರು. [ಬಿಬಿಎಂಪಿ ವಿಭಜನೆ ನಿರ್ಧಾರಕ್ಕೆ ಸದಸ್ಯರ ವಿರೋಧ]
ಈ ಮಳಿಗೆಗಳ ಮಾಲೀಕರಿಂದ ಪಾಲಿಕೆಗೆ ಸುಮಾರು 1 ಕೋಟಿ 25 ಲಕ್ಷ ರೂ. ಬಾಡಿಗೆ ಪಾವತಿಯಾಗಬೇಕಾಗಿದೆ. ಹಲವು ಬಾರಿ ನೋಟಿಸ್ ಜಾರಿಗೊಳಿಸಿದರೂ ವ್ಯಾಪಾರಿಗಳು ಸ್ಪಂದಿಸಿಲ್ಲ. ಆದ್ದರಿಂದ ಇಂದು ಎಲ್ಲಾ ಮಳಿಗೆಗಳಿಗೆ ಬೀಗ ಹಾಕುವ ಕಾರ್ಯಾಚರಣೆ ನಡೆಸಲಾಯಿತು ಎಂದು ತಿಳಿಸಿದರು.
ಕಾರ್ಯಾಚರಣೆ ನಂತರ ಮಾತನಾಡಿದ ಸಮಿತಿಯ ಸದಸ್ಯ ಬಿ.ಆರ್.ನಂಜುಂಡಪ್ಪ ಅವರು, ಬಾಡಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಳಿಗೆಗಳಿಗೆ ಬೀಗ ಹಾಕಿದ್ದೇವೆ. ಆದರೆ ವ್ಯಾಪಾರಿಗಳು ದಂಡ ಸಮೇತ ಬಾಡಿಗೆ ಪಾವತಿಸಿದರೆ ಬೀಗ ಮುದ್ರೆ ತೆರವುಗೊಳಿಸಲಾಗುವುದು ಎಂದು ಹೇಳಿದರು.
ವ್ಯಾಪಾರಿಗಳ ವಿರೋಧ : ಬಿಬಿಎಂಪಿ ಅಧಿಕಾರಿಗಳ ಬೀಗ ಹಾಕುವ ಕಾರ್ಯಾಚರಣೆಯನ್ನು ವ್ಯಾಪಾರಿಗಳು ವಿರೋಧಿಸಿದರು. ಆದರೆ, ಯಾವುದೇ ಒತ್ತಡಕ್ಕೆ ಮಣಿಯದ ಅಧಿಕಾರಿಗಳು 73 ಮಳಿಗೆಗಳನ್ನು ಮುಚ್ಚಿಸಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications