ಹೊರಗುತ್ತಿಗೆ ಶಿಕ್ಷಕರ ವೇತನ ವಿಳಂಬ: ಬಿಬಿಎಂಪಿ ಎದುರು ಪ್ರತಿಭಟನೆ
ಬೆಂಗಳೂರು, ಡಿಸೆಂಬರ್, 05 : ಪಾಲಿಕೆಯ ಹೊರಗುತ್ತಿಗೆ ಆಧಾರದ12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ವೇತನ ವಿಳಂಬ ವಿರೋಧಿಸಿ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಮಂಗಳವಾರ ಶಿಕ್ಷಕರು ಪ್ರತಿಭಟನೆ ನಡೆಸಿದರು.
ಕಳೆದ ಮೂರು ತಿಂಗಳಿನಿಂದ ಸಂಬಳವಾಗಿಲ್ಲ, ಸರಸ್ವತಿ ಮತ್ತು ಹರೀಶ್ ಎಂಬ ಶಿಕ್ಷಕರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಇದನ್ನು ಖಂಡಿಸಿ ಎಲ್ಲಾ ಗುತ್ತಿಗೆ ಶಿಕ್ಷಕರು ಪಾಲಿಕೆ ಕೇಂದ್ರ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿದರು. ಶಿಕ್ಷಕರಿಗೆ ಕೂಡಲೇ ಸಂಬಳ ನೀಡುವಂತೆ ಒತ್ತಾಯಿಸಿ ಧರಣಿ ಪ್ರತಿಭಟಾ ನಿರತ ಶಿಕ್ಷಕರಿಗೆ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಸಾಥ್ ನೀಡಿದ್ದಾರೆ.

ಬಿಬಿಎಂಪಿಯ ಶಾಲೆಗಳಲ್ಲಿ ಶಿಕ್ಷಣವಿಲ್ಲ ಯಾಕಂದರೆ ಎಲ್ಲಾ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿ. ಕ್ರಿಸ್ಟಲ್ ಇನ್ಫೋಸಿಸ್ ಅನ್ನೋ ಸಂಸ್ಥೆ ಈ ಶಿಕ್ಷಕರಿಗೆ ಮೂರು ತಿಂಗಳಿಂದ ಸಬಳ ನೀಡಿಲ್ಲ. ಪಾಲಿಕೆ ಹಣ ನೀಡುವುದನ್ನು ವಿಳಂಬ ಮಾಡಿದರೆ ಗುತ್ತಿಗೆ ಪಡೆದ ಸಂಸ್ಥೆ ಶಿಕ್ಷಕರಿಗೆ ಸಂಬಳ ಕೊಡಬೇಕು. ಆದರೆ ಆ ಸಂಸ್ಥೆಯ ದುರಾಡಳಿತದಿಂದ ಶಿಕ್ಷಕರು ಕಷ್ಟಪಡುವಂತಾಗಿದೆ ಪೌರಕಾರ್ಮಿಕರ ಖಾಯಂ ರೀತಿಯಲ್ಲಿ ನಮ್ಮನ್ನು ನೇಮಕ ಮಾಡಿಕೊಳ್ಳಬೇಕು ಎಂದು ಉತ್ತಾಯಿಸಿದರು.
ಬೇಡಿಕೆಗಳು: ಮೂರು ತಿಂಗಳಿಂದ ಸಂಬಳ ವಿಳಂಬವಾಗುತ್ತಿದ್ದು ನಗರದಲ್ಲಿ ಜೀವನ ನಡೆಸುವುದು ಕಷ್ಟವಾಗುತ್ತಿದೆ. ನಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಟೆಂಡರ್ ಪ್ರಕ್ರಿಯೆ ಕೈಬಿಟ್ಟು ಬಿಬಿಎಂಪಿಯಿಂದಲೇ ನೇರವಾಗಿ ಹಣ ನೀಡಬೇಕೆಂದು ಒತ್ತಾಯಿಸಿದರು. ಕೂಡಲೇ ಸಂಬಳ ನೀಡುವಂತೆ ಒತ್ತಾಯಿಸಿ ವಿಶೇಷ ಆಯುಕ್ತರಿಗೆ ಮನವಿ ಪತ್ರ ನೀಡಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications