ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ: ಕಣ್ಣೀರಿಟ್ಟ ಮಹಿಳಾ ಕಾರ್ಪೊರೇಟರ್
ಬೆಂಗಳೂರು, ಜನವರಿ 18: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ನೀಡದಿದ್ದಕ್ಕೆ ಕಾರ್ಪೊರೇಟರ್ ಮಹಾಲಕ್ಷ್ಮೀ ಕಣ್ಣೀರಿಟ್ಟಿದ್ದಾರೆ.
'ನನಗೆ ನಿರಾಸೆಯಾಗಿದೆ. ಅಧ್ಯಕ್ಷ ಸ್ಥಾನ ಕೊಡುತ್ತೇನೆ ಎಂದು ಹೇಳಿ ಕೊಡಲಿಲ್ಲ. ಈಗ ಸದಸ್ಯತ್ವ ಕೊಡುವುದಾಗಿ ಇದ್ದಾರೆ. ಆದರೆ ಇದರಿಂದ ನನಗೆ ನೋವಾಗಿದೆ' ಎಂದು ಬೇಸರ ವ್ಯಕ್ತಪಡಿಸಿದರು.
ಬಿಬಿಎಂಪಿ 12 ಸ್ಥಾಯಿ ಸಮಿತಿಯ ಸ್ಥಾನಗಳಿಗೆ ಬಿಬಿಎಂಪಿ ಕೇಂದ್ರ ಕಚೇರಿ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ನಡೆಯುತ್ತಿದೆ. ಬೆಳ್ಳಗ್ಗೆ 8 ಗಂಟೆಯಿಂದ 9.30 ರ ವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿತ್ತು.

ಅಧಿಕಾರಕ್ಕೋಸ್ಕರ ಏನು ಮಾಡಬೇಕು ಅಂತ ನಿಮಗೆ ಗೊತ್ತಿದೆ. ನಾನು ಇದೇ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಕೊಡಿ ಅಂತ ಬೇಡಿಕೆ ಇಟ್ಟಿರಲಿಲ್ಲ. ಅವರಾಗಿಯೇ ಕೊಡುವುದಾಗಿ ಹೇಳಿ ಈಗ ನೀಡಿಲ್ಲ ಎಂದರು.
ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ನಿಷೇಧಾಜ್ಞೆ ಹೊರಡಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಚುನಾವಣೆ ಆರಂಭ ಮಾಡಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಎನ್. ವಿ ಪ್ರಸಾದ್ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದ್ದು, ಇದುವರೆಗೂ ನಿಗದಿಯಾಗಿ ಮೂರು ಬಾರಿಚುನಾವಣೆ ಮುಂದೂಡಲಾಗಿತ್ತು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications