ಬೆಂಗಳೂರಲ್ಲಿ ಮತ್ತೆ ಘರ್ಜಿಸಲಿವೆ ಬುಲ್ಡೋಜರ್ಗಳು: ಆಯುಕ್ತರು ಸೂಚಿಸಿದ ಸ್ಥಳ ಯಾವವು?
ಬೆಂಗಳೂರು, ಡಿಸೆಂಬರ್ 01: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಮಾರ್ಕ್ ಮಾಡಲಾಗಿದೆ. ತಹಶೀಲ್ದಾರ್ ರವರಿಂದ ಆದೇಶಗಳನ್ನು ಜಾರಿಮಾಡಿರುವಂತಹ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರಿಗೆ ತಹಶೀಲ್ದಾರ್ ರವರಿಂದ ಆದೇಶ ನೀಡೀರುವಂತಹ ಒತ್ತುವರಿಗಳನ್ನು ಕೂಡಲೆ ತೆರವುಗೊಳಿಸಬೇಕು. ಆದೇಶಗಳನ್ನು ನೀಡದೇ ಇರುವ ಒತ್ತುವರಿಗಳಿಗೆ ಕೂಡಲೆ ಆದೇಶಗಳನ್ನು ನೀಡಿ ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಬೇಕೆಂದ ಹೇಳಿದರು.

ನಗರದ ಎಂಟು ವಲಯಗಳಲ್ಲಿಯೂ ಬೃಹತ್ ನೀರುಗಾಲುವೆ ಒತ್ತುವರಿ ತೆರವು ಕಾಯಾಚರಣೆ ನಡೆಸಬೇಕು. ಈ ಸಂಬಂಧ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಪೊಲೀಸ್ ಭದ್ರತೆಯೊಂದಿಗೆ ಒತ್ತುವರಿಗಳ ತೆರವು ಮಾಡಲು ಅವರು ನಿರ್ದೇಶಿಸಿದರು.
ಭೂ ಮಾಪನ ಕಾರ್ಯ ಮಾಡಿರುವ ಕಡೆ ಗ್ರಾಮ ನಕ್ಷೆ ಮತ್ತು ಟಿಪ್ಪಣಿಗಳ ಅನ್ವಯ ಯಾವುದೇ ವ್ಯತ್ಯಾಸ ಮಾಡದೆ ಸಂಬಂಧಪಟ್ಟ ಭೂ ಮಾಪಕರು ನಕ್ಷೆಯನ್ನು ಸಿದ್ಧಪಡಿಸಿ ತಹಶೀಲ್ದಾರ್ ರವರು ಅದಕ್ಕೆ ಆದೇಶಗಳನ್ನು ಜಾರಿಮಾಡಬೇಕು.

ವಲಯಗಳಲ್ಲಿ ಎಲ್ಲೆಲ್ಲಿ ಒತ್ತುವರಿ ಆಗಿದೆ ಅದನ್ನು ತೆರವುಗೊಳಿಸಿ ಅಗತ್ಯವಿದ್ದ ಕಡೆ ಸಮರ್ಪಕ ಕಾಲುವೆಯನ್ನು ನಿರ್ಮಾಣ ಮಾಡಬೇಕು. ಜೊತೆಗೆ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ನಿಗಧಿತ ಸಮಯದಲ್ಲಿ ಇತ್ಯರ್ಥಪಡಿಸಿಕೊಂಡು ಒತ್ತುವರಿ ತೆರವುಗೊಳಿಸಬೇಕು.
ಹೈಕೋರ್ಟ್ ಸೂಚನೆಯಂತೆ ಕ್ರಮ
ನಗರದಲ್ಲಿ ಬೃಹತ್ ನೀರುಗಾಲುವೆ ಒತ್ತುವರಿ ಹಾಗೂ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಾನ್ಯ ಉಚ್ಛನ್ಯಾಯಾಲಕ್ಕೆ ಪಾಲಿಕೆಯಿಂದ ವರದಿ ನೀಡಲಾಗಿದೆ. ಅದರಂತೆ, ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಗುರುತಿಸಿದ ಒತ್ತುವರಿ ಸಂಖ್ಯೆ ವಿವರ
ನಗರದಲ್ಲಿ ಹೊಸ ಒತ್ತುವರಿಗಳು ಸೇರಿದಂತೆ 3147 ಒತ್ತುವರಿಗಳನ್ನು ಗುರುತಿಸಲಾಗಿದೆ. 2247 ಒತ್ತುವರಿಗಳನ್ನು ಇದುವರೆಗೆ ತೆರವುಗೊಳಿಸಲಾಗಿದೆ. ಇನ್ನು 900 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದೆ. ಈ ಪೈಕಿ 130 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿದೆ.
401 ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 370 ಒತ್ತುವರಿಗಳಿಗೆ ತಹಶಿಲ್ದಾರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಕೆರೆಗಳ ಒತ್ತುವರಿ ಗುರುತಿಸಿ ಸಮೀಕ್ಷೆ ನಡೆಸಿ
ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಿದೆ ಎಂಬುದನ್ನು ಗುರುತಿಸಿ, ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಿರುವ ಕ್ರಿಯಾ ಯೋಜನೆ ಪ್ರಕಾರ ಕ್ರಮವಹಿಸಲು ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ ಪಾಲಿಕೆ ವ್ಯಾಪ್ತಿಯಲ್ಲಿ 130 ಕೆರೆಗಳ ಸರ್ವೇ ಮಾಡಲು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಕೇಳಲಾಗಿದೆ. ಅದರಂತೆ ಇದುವೆರೆಗೆ ಅಂದಾಜು 20 ಕೆರೆಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಉಳಿದ ಕೆರೆಗಳಲ್ಲಿ ಒತ್ತುವರಿ ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಯಿತು.
ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ
ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳಲ್ಲಿ ಹಂತ-ಹಂತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ವಲಯ ಮುಖ್ಯ ಅಭಿಯಂತರರು ಮುಂದಾಗಬೇಕು.
ಸಭೆಯಲ್ಲಿ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಡಾ. ದಯಾನಂದ್, ವಲಯ ಆಯುಕ್ತರು, ವಕಯ ಜಂಟಿ ಆಯುಕ್ತರು, ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರು, ರಾಜಕಾಲುವೆ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications