Get Updates
Get notified of breaking news, exclusive insights, and must-see stories!

Pothole: ರಸ್ತೆಗುಂಡಿ ಸಮಸ್ಯೆಗೆ ಮುಕ್ತಿ ಹಾಡಲು ಬಿಬಿಎಂಪಿಯಿಂದ ಮಹತ್ವದ ನಿರ್ಧಾರ

ಬೆಂಗಳೂರು, ಮೇ 27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಸಮಸ್ಯೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ರಸ್ತೆಗುಂಡಿ ಮುಚ್ಚುವ, ಮೇಲ್ವಿಚಾರಣೆಗಾಗಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ವಲಯ ಮಟ್ಟದಲ್ಲಿ 'ಟಾಸ್ಕ್ ಫೋರ್ಸ್" ಸಮಿತಿ ರಚಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಆದೇಶಿಸಿದ್ದಾರೆ.

Bengaluru BBMP Launches Task Force for Pothole Repairs and Rajkaluve Cleaning

ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12878 ಕಿ.ಮೀ ರಸ್ತೆ ಜಾಲ ಇದೆ. ಈ ರಸ್ತೆಗಳ ಪೈಕಿ 1344.84 ಕಿ.ಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದೆ. ರಸ್ತೆಗಳನ್ನು ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಉಳಿಕೆ 11533.16 ಕಿ.ಮೀ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.

ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮತ್ತು ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ "ವಲಯವಾರು ಟಾಸ್ಕ್ ಫೋರ್ಸ್" ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಲಾಗಿದೆ. ಸದರಿ ಟಾಸ್ಕ್ ಫೋರ್ಸ್‌ ಅನ್ನು ವಲಯ ಮಟ್ಟದ ವಲಯ ಆಯುಕ್ತರು ರವರ ನೇತೃತ್ವದಲ್ಲಿ ರಚನೆ ಆಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

Bengaluru BBMP Launches Task Force for Pothole Repairs and Rajkaluve Cleaning

ಹೇಗಿರಲಿದೆ ಟಾಸ್ಕ್ ಫೋರ್ಸ್ ಸಮಿತಿ? ವಿವರ

1. ವಲಯ ಆಯುಕ್ತರು - ಅಧ್ಯಕ್ಷರು.

2. ವಲಯ ಜಂಟಿ ಆಯುಕ್ತರು - ಸದಸ್ಯರು.

3. ವಲಯ ಮುಖ್ಯ ಅಭಿಯಂತರರು - ಸದಸ್ಯರು.

4. ವಲಯ ಸಹಾಯಕ ಸಂಚಾರ ಪೊಲೀಸ್ ಆಯುಕ್ತರು - ಸದಸ್ಯರು.

5. ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು - ಸದಸ್ಯರು.

6. ವಲಯ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು - ಸದಸ್ಯರು.

7. ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪ ನಿಯಂತ್ರಕರು (ಹಣಕಾಸು) - ಸದಸ್ಯರ ಕಾರ್ಯದರ್ಶಿ.

ಆಯಾ ವಲಯ ವ್ಯಾಪ್ತಿಯಲ್ಲಿ ವಲಯ ಆಯುಕ್ತರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ರಾಜಕಾಲುವೆ ಸ್ವಚ್ಛತೆ ಕಾರ್ಯಕ್ಕೆ ಚುರುಕು

ರಸ್ತೆ ಗುಂಡಿ ಮುಚ್ಚುವುದು, ರಾಜಕಾಲುವೆ ಸ್ವಚ್ಛತೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸಭೆಯಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, ನಗರದ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಈಗಾಗಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕೆ ಮತ್ತಷ್ಟು ಚುರುಕು ನೀಡಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರಥಮ, ದ್ವಿತೀಯ ರಾಜಕಾಲುವೆಗಳಲ್ಲಿ ಸಕ್ರಿಯವಾಗಿ ಹೂಳೆತ್ತುವ ಕೆಲಸ ನಡೆಯಬೇಕು. ರಾಜಕಾಲುವೆಗೆ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮ ವಹಿಸಬೇಕು. ಎಲ್ಲಾ ಕಡೆ ಸ್ವಚ್ಛತೆ ಕಾಪಾಡಿ ಎಲ್ಲಿಯೂ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+