ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ನಿಷೇಧಕ್ಕೆ ಬಿಬಿಎಂಪಿ ಚಿಂತನೆ
ಬೆಂಗಳೂರು, ಆಗಸ್ಟ್ 25: ಕಳೆದ ವರ್ಷವೇ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣಪತಿ ಮೂರ್ತಿ ಬಳಕೆ ಮಾಡದಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿತ್ತು. ಅದಕ್ಕೆ ಬಿಬಿಎಂಪಿಯು ತಲೆಯಾಡಿಸಿತ್ತು. ಆದರೆ ಅದು ಮಧ್ಯಂತರ ಆದೇಶವಾಗಿದ್ದರಿಂದ ರಾಜಾರೋಷವಾಗಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿಯನ್ನು ನಗರದಲ್ಲಿ ಪ್ರತಿಷ್ಠಾಪಿಸಿದ್ದರು.
ಆದರೆ ಈ ಬಾರಿ ಗಣೇಶ ಚತುರ್ಥಿ ತಿಂಗಳು ಇರುವ ಮೊದಲೇ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಷೇಧಿಸುವ ಕುರಿತು ಬಿಬಿಎಂಪಿ ಚಿಂತನೆ ನಡೆಸಿದೆ. ಈ ಪ್ಲಾಸ್ಟರ್ ಪ್ಯಾರೀಸ್ ನೀರಿನಲ್ಲಿ ಸುಲಭವಾಗಿ ಕರಗದಿರುವುದು ಮತ್ತೆ ಅಲ್ಲಿರುವ ಹಾನಿಕಾರಕ ಅಂಶಗಳು ಜನಚರಗಳಿಗೆ ಮಾರಕವಾಗಿರುವ ಹಿನ್ನಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಶ್ ಗಣೇಶನ ಮೂರ್ತಿಯನ್ನು ತಯಾರಿಸಲು ಹಾಗೂ ಪ್ರತಿಷ್ಠಾಪನೆ ನಿಷೇಧಿಸುವ ಸಾಧ್ಯತೆ ಇದೆ.
ಪಿಒಪಿ ಗಣಪತಿಯನ್ನು ಸಂಪೂರ್ಣವಾಗಿ ನಗರದಲ್ಲಿ ನಿಷೇಧಿಸಲು ಬಿಬಿಎಂಪಿ ಮುಂದಾಗಿದೆ. ಸಾರ್ವಜನಿಕ ಸ್ಥಳಗಳು, ಸಂಘಸಂಸ್ಥೆಗಳಲ್ಲಿ ಪಿಒಪಿ ಗಣಪತಿಯನ್ನು ಕೂರಿಸಬಾರದು ಎಂಬ ಷರತ್ತಿನೊಂದಿಗೆ ಅನುಮತಿ ನೀಡಲು ಗಂಭೀರ ಚಿಂತನೆ ನಡೆದಿದೆ. ಒಂದು ವೇಳೆ ಷರತ್ತು ಮೀರಿ ಪ್ರತಿಷ್ಠಾಪಿಸಿದರೆ ದಂಡ ವಿಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಆಲೋಚನೆ ನಡೆಸಲಾಗಿದೆ.

ಗಣೇಶನ ಮೂರ್ತಿ ಪರಿಸರಸ್ನೇಹಿಯಾಗಿರಬೇಕು
ನಗರದಲ್ಲಿ ಗಣೇಶ ಚತರ್ಥಿ ಪ್ರಯುಕ್ತ ಒಂದು ತಿಂಗಳುಗಳ ಸಾರ್ವಜನಿಕ ಸ್ಥಳಗಳಲ್ಲಿ ಕೂರಿಸುವ ಗಣೇಶ ಸಂಪೂರ್ಣ ಪರಿಸರಸ್ನೇಹಿಯಾಗಿರುವಂತೆ ಕ್ರಮ ವಹಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಜತೆಗೂಡಿ ಬಿಬಿಎಂಪಿ ಹಲವು ಮಾರ್ಗಸೂಚಿಗಳನ್ನು ರೂಪಿಸಿದೆ.

ಪಿಒಪಿ ಗಣೇಶ ಅಲ್ಲ ಖಾತ್ರಿ ಪತ್ರ ಪಡೆದುಕೊಳ್ಳಬೇಕು
ಸಾರ್ವಜನಿಕ ಸ್ಥಳಗಳು ಅಥವಾ ಕಚೇರಿಯಲ್ಲಿ ಗಣಪತಿ ಕೂರಿಸಲು ಅನುಮತಿ ಪಡೆಯುವಾಗ ತಾವು ಕೂರಿಸುವ ಗಣಪತಿ ಪಿಒಪಿ ಗಣಪತಿ ಅಲ್ಲ ಎಂದು ಖಾತ್ರಿ ಪತ್ರ ಪಡೆದುಕೊಳ್ಳುವ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

2016ರಲ್ಲೇ ಸರ್ಕಾರ ಪಿಒಪಿ ಗಣೇಶನನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು
2016ರಲ್ಲೇ ಸರ್ಕಾರ ಪರಿಸರಕ್ಕೆ ಮಾರಜವಾಗುವ ಪಿಒಪಿ ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶನನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಆದರೆ ಗಣೇಶ ಮೂರ್ತಿಗಳ ತಯಾರಕರಿಂದ ಇದಕ್ಕೆ ಭಾರಿ ವಿರೋದ ವ್ಯಕ್ತವಾಗಿತ್ತು. ಕೆಲ ವರ್ಷಗಳಿಂದ ಮಾರಾಟವಾಗದೆ ಉಳಿಸಿರುವ ಲಕ್ಷಾಂತರ ರೂ ಮೌಲ್ಯದ ಗಣೇಶ ಮೂರ್ತಿಗಳು ನಮ್ಮ ಬಳಿ ಇದೆ. ಪಿಒಪಿ ಗಣೇಶ ನಿಷೇಧಿಸಿದರೆ ಇವುಗಳ ತಯಾರಿಕೆಗೆ ನಾವುಗಳು ವೆಚ್ಚವನ್ನು ಭರಿಸುವರು ಯಾರು ಎಂದು ಪ್ರಶ್ನಿಸಿದ್ದರು.ಹಾಗಾಘಿ ಕಳೆದ ಎರಡು ವರ್ಷ ವಿನಾಯಿತಿ ನೀಡಲಾಗಿತ್ತು.

ಗಣೇಶ ಮೂರ್ತಿ ಎತ್ತರ ಐದು ಅಡಿಗೆ ನಿಗದಿ
ಬಿಬಿಎಂಪಿ ಪಿಒಪಿ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ, ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವ್ಯಾಪಕ ಪ್ರಚಾರಕ್ಕೆ ನಿರ್ದರಿಸಿದೆ. ಸಾರ್ವಜನಿಕವಾಗಿ ಐದು ಅಡಿ ಮಿತಿ ಗೊತ್ತುಪಡಿಸಲಾಗಿದೆ. ಮಣ್ಣಿನ ಮೂರ್ತಿಗಳು ಹೆಚ್ಚು ತೂಕವಿರುವದರಿಂದ ಕೆಲವೊಮ್ಮೆ ಬಿರುಕು ಮೂಡುವ ಸಾಧ್ಯತೆ ಇದೆ. ಸಣ್ಣ ಪುಷ್ಕರಣಿ, ಟ್ಯಾಂಕ್, ಕಲ್ಯಾಣಿ ವಿಸರ್ಜಿಸುವುದು ಸವಾಲಾಗಿತ್ತು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications