ಬೆಂಗಳೂರು; ಕೋವಿಡ್ ಸೋಂಕಿತರ ಕೈಗೆ ಸೀಲ್
ಬೆಂಗಳೂರು, ಏಪ್ರಿಲ್ 17; ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೋಂಕು ಹರಡುವಿಕೆ ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಈ ಕುರಿತು ಟ್ವೀಟ್ ಮಾಡಿದ್ದಾರೆ. ಕೊರೊನಾ ಸೋಂಕು ದೃಢಪಟ್ಟವರ ಕೈಗೆ ಮೊದಲಿನಂತೆ ಸೀಲ್ ಹಾಕಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಎಚ್. ಡಿ. ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ
"ಈ ಮೂಲಕ ಸೋಂಕಿತರಿಂದ ಹರಡುವಿಕೆಯನ್ನು ತಡೆಯುವುದು ನಮ್ಮ ಉದ್ದೇಶ. ನಿನ್ನೆ ಪಾಲಿಕೆಯ 8 ವಲಯಗಳ ಮಟ್ಟದಲ್ಲಿ ಕೋವಿಡ್ ಸೋಂಕು ನಿಯಂತ್ರಣದ ಸಂಬಂಧ ಆಯೋಜಿಸಿದ್ದ ಸಭೆಯಲ್ಲಿ ಚರ್ಚಿಸಿದೆವು" ಎಂದು ಆಯುಕ್ತರು ಹೇಳಿದ್ದಾರೆ.
ಕೋವಿಡ್ ಪರೀಕ್ಷೆ ತಪ್ಪಿಸಿಕೊಳ್ಳಲು ಹಾರಿಬಿದ್ದು ಓಡಿದ ಜನ
ಬೆಂಗಳೂರು ನಗರದಲ್ಲಿ ಶುಕ್ರವಾರ 9917 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 5,22,438ಕ್ಕೆ ಏರಿಕೆಯಾಗಿದೆ. ನಗರದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 79,616.
ಕೊರೋನ ಸೋಂಕು ದೃಢಪಟ್ಟವರ ಕೈಗೆ ಮೊದಲಿನಂತೆ ಸೀಲ್ ಹಾಕಲು ತೀರ್ಮಾನಿಸಲಾಗಿದೆ. ಈ ಮೂಲಕ ಸೋಂಕಿತರಿಂದ ಹರಡುವಿಕೆಯನ್ನು ತಡೆಯುವುದು ನಮ್ಮ ಉದ್ದೇಶ.
— Gaurav Gupta,IAS (@BBMPCOMM) April 17, 2021
ನಿನ್ನೆ ಪಾಲಿಕೆಯ 8 ವಲಯಗಳ ಮಟ್ಟದಲ್ಲಿ ಕೋವಿಡ್ ಸೋಂಕು ನಿಯಂತ್ರಣದ ಸಂಬಂಧ ಆಯೋಜಿಸಿದ್ದ ಸಭೆಯಲ್ಲಿ ಚರ್ಚಿಸಿದೆವು.
ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಬೆಂಗಳೂರು ನಗರದಲ್ಲಿ ಈಗಾಗಲೇ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 5ರ ತನಕ ಇದು ಜಾರಿಯಲ್ಲಿರುತ್ತದೆ.
Recommended Video