ಬೆಂಗಳೂರಿನಲ್ಲಿ ಮನೆ ನಿರ್ಮಿಸುವವರಿಗೆ ಬಿಬಿಎಂಪಿಯಿಂದ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು, ಜುಲೈ 5: ಮನೆ ಕಟ್ಟಬೇಕೆಂಬ ಆಸೆ ಯಾರಿಗಿರಲ್ಲ ಹೇಳಿ. ಈ ಆಸೆ ನೆರವೇರಿದರೂ ನಕ್ಷೆ ಪಡೆಯಲು ಅಲೆದಾಡುವಂತಹ ಪರಿಸ್ಥಿತಿ ಇತ್ತು. ಆದರೆ ಇದೀಗ ಇದನ್ನು ಸುಲಭವಾಗಿ ಕೇವಲ ಒಂದೇ ದಿನದಲ್ಲಿ ಪಡೆಯಲು ಕಾರ್ಯಕ್ರಮವೊಂದನ್ನು ಬಿಬಿಎಂಪಿ ಆಯೋಜನೆ ಮಾಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಮನೆ ಕಟ್ಟಿ ನೋಡಿ.. ಮದುವೆ ಆಗಿ ನೋಡು ಎಂಬ ಗಾದೆ ಇದೆ. ಇದು ನೆರವೇರಿದರೆ, ಜೀವನವೇ ಸಾರ್ಥಕವಾದಂತೆ. ಅದರಲ್ಲೂ ಬೆಂಗಳೂರಿನಂತಹ ಮಹಾನಗರದಲ್ಲಿ ಒಂದು ಮನೆ ಕಟ್ಟಲು ಸೈಟ್ ತೆಗೆದುಕೊಂಡಿದ್ದಾರೆಂದರೆ ಬಿಲ್ಡಿಂಗ್ ಪ್ಲಾನ್ ತುಂಬಾ ಪ್ರಮುಖ ಆಗುತ್ತದೆ. ಇದನ್ನು ಪಡೆದುಕೊಳ್ಳಲು ಇಷ್ಟು ದಿನ ಅಲೆದಾಡಬೇಕಾಗಿತ್ತು. ಆದರೆ, ಇದೀಗ ಇದನ್ನು ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಸರಳ ಮಾಡಿಕೊಟ್ಟಿದ್ದು, ಇದರಿಂದ ಸಾವರ್ಜನಿಕರಿಗೆ ತುಂಬಾ ಸಹಾಯ ಆದಂತಾಗಿದೆ.

ಮನೆ ನಿರ್ಮಾಣ ಮಾಡುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮನೆ ನಿರ್ಮಾಣಕ್ಕೆ ಕಟ್ಟದ ಪ್ಲಾನ್ ಪಡೆಯಲು ಸಾರ್ವಜನಿಕರ ಅಲೆದಾಟವನ್ನು ತಪ್ಪಿಸಿ ಕೇವಲ 24 ಗಂಟೆಯಲ್ಲಿ ತಾತ್ಕಾಲಿಕ ನಕ್ಷೆ ನೀಡುವ ನಂಬಿಕೆ ನಕ್ಷೆ ವಿತರಣೆ ಮಾಡುವ ಕಾರ್ಯಕ್ರಮವನ್ನು ಬಿಬಿಎಂಪಿ ಮರು ಜಾರಿಗೊಳಿಸಿದೆ.
2024ರ ಮಾರ್ಚ್ನಿಂದ ನಂಬಿಕೆ ನಕ್ಷೆ ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ. ಈ ಯೋಜನೆಯ ಅನ್ವಯ 375 ಚದರ ಮೀಟರ್ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಹೆಚ್ಚು ಸಮಯ ತೆಗೆದುಕೊಳ್ಳದೆ, ನಕ್ಷೆ ವಿತರಣೆ ಮಾಲಾಗುತ್ತದೆ. ತಾತ್ಕಾಲಿಕ ನಕ್ಷೆ ನೀಡಿದ ಬಳಿಕ ದಾಖಲಾತಿ ಪರಿಶೀಲನೆ ಮಾಡಿ 15 ದಿನಗಳಲ್ಲಿ ಅನುಮೋದಿತ ನಕ್ಷೆ ನೀಡಲಾಗುತ್ತದೆ. ಪಾಲಿಕೆ ಯೋಜನಾ ವಿಭಾಗದ ಅಧಿಕಾರಿಗಳು ಅರ್ಜಿಗಳ ಪರಿಶೀಲನೆ ನಡೆಸಿ ಅನುಮೋದನೆ ನೀಡಿದ್ದಾರೆ.
ಈ ಯೋಜನೆಯ ಉದ್ದೇಶ ಏನು?: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ನಂಬಿಕೆ ನಕ್ಷೆ ಯೋಜನೆಯಿಂದ ಮನೆ ಕಟ್ಟುವ ಬಡ, ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲ ಆಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಪಾರದರ್ಶಕ ರೀತಿಯಲ್ಲಿ ಯಾವುದೇ ಖರ್ಚಿಲ್ಲದೆ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಈ ಹಿಂದೆ ಕಟ್ಟದ ನಕ್ಷೆ ಪಡೆಯಬೇಕೆಂದರೆ ತಿಂಗಳುಗಟ್ಟಲ್ಲೇ ಕಾಯಬೇಕಿತ್ತು. ಇದರಿಂದ ಸಾರ್ವಜನಿಕರು ಬೇಸತ್ತು ಹೋಗಿದ್ದರು. ಈ ಸಮಸ್ಯೆಗೆ ಪರಿಹಾರ ನೀಡಲು ಕಡಿಮೆ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಯಾರೂ ಅಡ್ಡಿ ಪಡಿಸದಂತೆ ಪ್ಲಾನ್ ವಿತರಣೆ ಮಾಡಲು ಆನ್ಲೈನ್ ಸೌಲಭ್ಯಕ್ಕೆ ಕಳೆದ ಸೆಪ್ಟೆಂಬರ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದು, ಈವರೆಗೂ 9,000 ಮಂದಿಗೆ ನಕ್ಷೆ ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?: ಇದಕ್ಕಾಗಿಯೇ ಸ್ವತ್ತಿನ ಇ-ಖಾತಾ, ನಿವೇಶನದ ಭಾವಚಿತ್ರ, ಸ್ವತ್ತಿನ ವಿಸ್ತೀರ್ಣ ಅಗತ್ಯ ದಾಖಲೆಗಳು ಆಗಿವೆ. ಇ-ಖಾತಾ ಕಡ್ಡಾಯ ಮಾಡಲಾಗಿದ್ದು, ಇ-ಖಾತಾದಲ್ಲಿ ಸ್ವತ್ತಿನ ವಿವರ, ಆಸ್ತಿದಾರರ ಮಾಹಿತಿ, ಚೆಕ್ಕುಬಂದಿ, ತೆರಿಗೆ ಪಾವತಿ ರಶೀದಿ, ವಿಳಾಸ ದೃಢೀಕರಣ, ಆಧಾರ್ ಕಾರ್ಡ್ ಮಾಹಿತಿ ಪರಿಶೀಲಿಸಿ ಅರ್ಜಿಯನ್ನು ಅನುಮೋದಿಸಲಾಗುವುದು. ಮನೆ ಕಟ್ಟುವವರು ಇಲ್ಲಿ ನೀಡಲಾಗಿರುವ https://bpas.bbmpgov.in/BPAMSClient4/Default.aspx ಗೆ ಬೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications