ಬಿಬಿಎಂಪಿ ಎಲ್ಐಸಿಗೆ 35 ಕೋಟಿ ಕಟ್ಟಬೇಕು
ಬೆಂಗಳೂರು, ನ.12 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಬಳದಿಂದ ಕಡಿತ ಮಾಡಿದ ವಿಮಾ ಕಂತಿನ ಹಣವನ್ನು ಆರು ತಿಂಗಳಿನಿಂದ ಭಾರತೀಯ ಜೀವವಿಮಾ ನಿಗಮಕ್ಕೆ ಪಾವತಿ ಮಾಡಿಲ್ಲ. ಸುಮಾರು 35 ಕೋಟಿಯಷ್ಟು ಹಣವನ್ನು ಕಟ್ಟಿ ಎಂದು ಎಲ್ಐಸಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದೆ.
ನಾಲ್ಕು ದಿನಗಳ ಹಿಂದೆ ಎಲ್ಐಸಿ ಬಾಕಿ ಉಳಿಸಿಕೊಂಡ ಕಂತಿನ ಮೊತ್ತವನ್ನು ಬಡ್ಡಿಸಹಿತ ಪಾವತಿ ಮಾಡಬೇಕು ಎಂದು ಆಯುಕ್ತರಿಗೆ ಪತ್ರ ಬರೆದಿದ್ದು, ತಡವಾಗಿ ಹಣ ಪಾವತಿ ಮಾಡಿದರೆ ದಂಡವನ್ನು ಕಟ್ಟಬೇಕಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದೆ. ಆರು ತಿಂಗಳಿನಿಂದ ನೌಕರರ ವಿಮಾ ಹಣವನ್ನು ಸಂಬಳದಲ್ಲಿ ಕಡಿತ ಮಾಡಿದ್ದರೂ ಅದನ್ನು ಎಲ್ಐಸಿಗೆ ಪಾವತಿ ಮಾಡಿಲ್ಲ. [ಜನಧನ ಯೋಜನೆಯಡಿ ಜೀವ ವಿಮಾ ಸೌಲಭ್ಯ]

ಕಾಚರಕನಹಳ್ಳಿ ವಾರ್ಡ್ನ ಸದಸ್ಯರಾದ ಪದ್ಮನಾಭ ರೆಡ್ಡಿ ಅವರು ಎಲ್ಐಸಿ ಅಧಿಕಾರಿಗಳು ಬರೆದ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದು, ಸಂಬಳದಿಂದ ಕಡಿತ ಮಾಡಲಾದ ವಿಮಾ ಕಂತಿನ ಮೊತ್ತವೂ ನೌಕರರಿಗೆ ಸೇರಿದ್ದು. ಅದನ್ನು ತನ್ನ ಬಳಿ ಇಟ್ಟುಕೊಳ್ಳಲು ಬಿಬಿಎಂಪಿಗೆ ಯಾವುದೇ ಅಧಿಕಾರ ಇಲ್ಲ. ಆಯಾ ತಿಂಗಳಿನಲ್ಲಿ ಪಾವತಿ ಮಾಡಲು ಹಣಕಾಸು ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ರೆಡ್ಡಿ ದೂರಿದರು.
ಬಿಬಿಎಂಪಿಯಲ್ಲಿ 9,500 ನೌಕರರಿದ್ದು, ಅವರ 6 ತಿಂಗಳ ವಿಮಾ ಕಂತು ಸುಮಾರು 35 ಕೋಟಿಗೂ ಹೆಚ್ಚಾಗುತ್ತದೆ. ಇಷ್ಟು ಹಣವನ್ನು ಎಲ್ಐಸಿಗೆ ಪಾವತಿ ಮಾಡಬೇಕಾಗಿದೆ. ಈ ವಿಷಯವನ್ನು ಈಗಾಗಲೇ ಆಯುಕ್ತರ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು. [ಸರ್ಕಾರದಿಂದ ಬಿಬಿಎಂಪಿಗೆ ಅನುದಾನ ಬೇಕು]
ಮೂರು ದಿನದಲ್ಲಿ ಪಾವತಿ ಮಾಡುತ್ತೇವೆ : ಎಲ್ಐಸಿಗೆ ವಿಮಾ ಕಂತು ಪಾವತಿ ಮಾಡಬೇಕಾಗಿರುವುದು ನಿಜ, ಮೂರು ದಿನದಲ್ಲಿ ಈ ಹಣವನ್ನು ಪಾವತಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪಾವತಿ ಮಾಡದಿರುವುದಕ್ಕೆ ಕಾರಣ ತಿಳಿಸುವಂತೆಯೂ ನಿರ್ದೇಶನ ನೀಡಿದ್ದೇನೆ ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications