ಚಿದಂಬರಂ ಬಜೆಟ್ ನಂತರ ಶಿವಪ್ರಸಾದ್ ಬಜೆಟ್
ಬೆಂಗಳೂರು, ಫೆ.17 : ಅತ್ತ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ 2014-15ರ ಮಧ್ಯಂತರ ಬಜೆಟ್ ಮಂಡನೆ ಮಾಡಿ ಮುಗಿಸಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಡಾ.ಕೆ.ಶಿವಪ್ರಸಾದ್ ಮಧ್ಯಾಹ್ನ 3 ಗಂಟೆಗೆ ಬಿಬಿಎಂಪಿ ಬಜೆಟ್ ಮಂಡಿಸಲಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2014-15ರ ಬಜೆಟ್ ಅನ್ನು ಸೋಮವಾರ ಮಂಡಿಸಲಿದೆ.
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನೆರವುಗಳನ್ನು ಆಧಾರವಾಗಿಟ್ಟುಕೊಂಡು ಸಿದ್ಧಪಡಿಸಿರುವ ಆಯವ್ಯಯವನ್ನು ತೆರಿಗೆ ಮತ್ತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಸೋಮವಾರ ಮಧ್ಯಾಹ್ನ 3ಗಂಟೆಗೆ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮಂಡಿಸಲಿದ್ದಾರೆ. [ಚಿದಂಬರಂ ಬಜೆಟ್ ನಲ್ಲೇನಿದೆ?]

ಬೆಂಗಳೂರಿನ ಜನರ ಮೇಲೆ ಹೊಸ ತೆರಿಗೆ ಹೊರೆ ಹೇರದೆ, ಬೆರಳೆಣಿಕೆಯಷ್ಟು ಹೊಸ ಯೋಜನೆಗಳನ್ನು ಮಾತ್ರ ಒಳಗೊಂಡಿರುವ ಸುಮಾರು 8 ಸಾವಿರ ಕೋಟಿ ಮೊತ್ತದ ಬಜೆಟ್ ಅನ್ನು ಮಂಡಿಸಲಾಗುತ್ತದೆ. ಗುತ್ತಿಗೆದಾರರಿಗೆ ಬಿಲ್ ಪಾವತಿ ಮತ್ತು ನಡೆಯುತ್ತಿರುವ ಕಾಮಗಾರಿಗಳಿಗೆ ಅನುದಾನ ಒದಗಿಸಲು ಬಜೆಟ್ ಆದ್ಯತೆ ನೀಡುವ ಸಾಧ್ಯತೆ ಇದೆ. [ಬಿಬಿಎಂಪಿ 2013ರ ಬಜೆಟ್ ಮುಖ್ಯಾಂಶಗಳು]
ಪಾಲಿಕೆ ಈಗಾಗಲೇ 1800ಕೋಟಿ ಗುತ್ತಿಗೆದಾರರ ಬಾಕಿ ಉಳಿಸಿಕೊಂಡಿದೆ. ಇದರೊಂದಿಗೆ 1500 ಕೋಟಿಗೂ ಹೆಚ್ಚಿನ ಸಾಲದ ಹೊರೆ ಇದೆ. ನಗರದಲ್ಲಿನ ಟ್ರಾಫಿಕ್ ಜಾಮ್ ತಪ್ಪಿಸಲು ಅನೇಕ ಸಂಚಾರ ಸುಧಾರಣೆ, ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಬಜೆಟ್ ನಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ. [ಸಿದ್ದರಾಮಯ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?]
ಅಂದಹಾಗೆ ಕಳೆದ ಬಾರಿ ಮೇಯರ್ ಆಗಿದ್ದ ಡಿ.ವೆಂಕಟೇಶಮೂರ್ತಿ 10,000 ಕೋಟಿಗೂ ಮೀರಿದ ಬಜೆಟ್ ಮಂಡಿಸಿದ್ದರು. ಆದರೆ, ಅದನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಈ ಬಾರಿ ಬಜೆಟ್ ಗಾತ್ರವನ್ನು 7.5ಸಾವಿರ ಕೋಟಿಯಿಂದ 8 ಸಾವಿರ ಕೋಟಿ ಮಿತಿಯಲ್ಲಿ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications