ಸಂಘ-ಸಂಸ್ಥೆ ಖಾಸಗಿ ಗ್ರಂಥಾಲಯ ಸ್ಥಾಪಿಸಿದರೆ ಬಿಬಿಎಂಪಿಯಿಂದ ಉಚಿತ ಪುಸ್ತಕ
ಬೆಂಗಳೂರು, ನವೆಂಬರ್ 10: ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಘ ಸಂಸ್ಥೆಗಳು ಖಾಸಗಿ ಗ್ರಂಥಾಲಯ ತೆರೆಯಲು ಮುಂದೆ ಬಂದಲ್ಲಿ ಅವರಿಗೆ ಸಹಕರಿಸಲಾಗುವುದು ಎಂದು ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ತಿಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 5 ವಲಯಗಳ ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಜೊತೆ ಗುರುವಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರಾಕೇಶ್ ಸಿಂಗ್, ಸಂಘ ಸಂಸ್ಥೆಗಳು ಖಾಸಗಿ ಗ್ರಂಥಾಲಯ ತೆರೆಯಲು ಮುಂದೆ ಬಂದರೆ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಉಚಿತವಾಗಿ ಪುಸ್ತಕ ನೀಡಲಾಗುವುದು ಎಂದರು.
ನಗರದಲ್ಲಿ ಹೆಚ್ಚೆಚ್ಚು ಗ್ರಂಥಾಲಯಗಳನ್ನು ತೆರೆಯುವುದರಿಂದ ಸಾರ್ವಜನಿಕರಿಗೆ ಓದುವ ಹವ್ಯಾಸ ಬೆಳೆಸಲು ಸಹಕಾರಿಯಾಗುತ್ತದೆ. ನಗರ ವ್ಯಾಪ್ತಿಯಲ್ಲಿನ ಪಾಲಿಕೆ ಮತ್ತು ಸರ್ಕಾರದ ಶಾಲಾ/ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಅದಕ್ಕಾಗಿ ಪ್ರಾಂಶುಪಾಲರಿಂದ ಪುಸ್ತಕಗಳ ಪಟ್ಟಿಯನ್ನು ಪಡೆಯುವಂತೆ ಸೂಚಿಸಿದರು.

ಬಿಬಿಎಂಪಿ ವ್ಯಾಪ್ತಿಯ 243 ವಾರ್ಡ್ಗಳಲ್ಲಿ ಗ್ರಂಥಾಲಯ ತೆರೆಯಲು ಬಿಬಿಎಂಪಿ ಕಟ್ಟಡಗಳನ್ನು ಗುರುತಿಸಿ ಗ್ರಂಥಾಲಯ ಸ್ಥಾಪಿಸುವ ಬಗ್ಗೆ ಕ್ರಿಯಾಯೋಜನೆ ರೂಪಿಸುವಂತೆ ಉಪನಿರ್ದೇಶಕರುಗಳಿಗೆ ಅವರು ಸೂಚಿದರು. ಹೊಸದಾಗಿ ಗ್ರಂಥಾಲಯ ಕಟ್ಟಡ ನಿರ್ಮಿಸುವ ಸಂದರ್ಭದಲ್ಲಿ ಗ್ರಂಥಾಲಯ ಅಧಿಕಾರಿ, ಸಿಬ್ಬಂದಿ ಹೆಚ್ಚಿನ ಕಾರ್ಯಕ್ಷಮತೆಗೆ ಅನುಕೂಲವಾಗುವಂತೆ ಗ್ರಂಥಾಲಯ ಪಕ್ಕದಲ್ಲಿ ವಸತಿ ಗೃಹ ನಿರ್ಮಿಸಲು ಯೋಜನೆ ರೂಪಿಸಬೇಕು ಎಂದರು.
ಬಿಬಿಎಂಪಿ ವ್ಯಾಪ್ತಿಯ ಗ್ರಂಥಾಲಯಗಳ ಸ್ಥಾಪನೆಗೆ ಕರ ಬಳಕೆ
ಬಿಬಿಎಂಪಿ ವತಿಯಿಂದ ನೀಡುವ ಗ್ರಂಥಾಲಯ ಕರವನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಗ್ರಂಥಾಲಯಗಳ ಸ್ಥಾಪನೆಗೆ ಉಪಯೋಗಿಸಬೇಕು. ಈ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುದಾನ ಹಂಚಿಕೆ ಬಿಡುಗಡೆ ಮಾಡಲು ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದರು.
ಸಭೆಯಲ್ಲಿ 5 ವಲಯಗಳ ಗ್ರಂಥಾಲಯಗಳ ಉಪ ನಿರ್ದೇಶಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications