ಬಿಬಿಎಂಪಿಯಿಂದ ಬಡ ಮಕ್ಕಳಿಗಾಗಿ ಟ್ಯೂಷನ್ ಸೆಂಟರ್; ಯಾವಾಗ, ಎಲ್ಲೆಲ್ಲಿ ತಿಳಿಯಿರಿ
ಬೆಂಗಳೂರು, ಆಗಸ್ಟ್ 23: ಹಿಂದುಳಿದ ವರ್ಗಗಳ ಮಕ್ಕಳಿಗೆ ಶೈಕ್ಷಣಿಕವಾಗಿ ನೆರವಾಗುವ ಉದ್ಧೇಶದೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಟ್ಯೂಷನ್ ಸೆಂಟರ್ಗಳನ್ನು ಆರಂಭಿಸಲು ಮುಂದಾಗಿದೆ. ಬೆಂಗಳೂರಿನ ಹತ್ತು ಕಡೆ ಈ ಬೋಧನ ಕೇಂದ್ರ(ಟ್ಯೂಷನ್ ಸೆಂಟರ್) ಗಳನ್ನು ಪ್ರಾರಂಭಿಸಲು ಬಿಬಿಎಂಪಿ ತಯಾರಿ ನಡೆಸಿದೆ.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5 ರಿಂದ ನಗರದ ವಿವಿಧೆಡೆ ಹಿಂದುಳಿದ ವರ್ಗದ ಮಕ್ಕಳಿಗಾಗಿ ಟ್ಯೂಷನ್ ಸೆಂಟರ್ ಆರಂಭಿಸಲು ನಗರದ ನಾಗರಿಕರ ಸಂಸ್ಥೆ ಬಿಬಿಎಂಪಿ ಸಜ್ಜಾಗಿದೆ.
"ವಿದ್ಯಾರ್ಥಿ ಬೆಳಕು ಅಧ್ಯಯನ ಕೇಂದ್ರ" ಎಂಬ ವಿಶಿಷ್ಟ ಉಪಕ್ರಮವನ್ನು ಸರ್ಕಾರೇತರ ಸಂಸ್ಥೆಗಳ (ಎನ್ಜಿಒ) ಸಹಾಯದಿಂದ ಹತ್ತು ಸ್ಥಳಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗುವುದು. ಅಲ್ಲಿ ಶಿಕ್ಷಕರು ಕೊಳೆಗೇರಿ ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಬಡ ಮಕ್ಕಳಿಗೆ ಟ್ಯೂಷನ್ ತರಗತಿ ನಡೆಸುವುದರ ಮೂಲಕ ಶೈಕ್ಷಣಿಕವಾಗಿ ಸಹಾಯ ಮಾಡುತ್ತಾರೆ. ಅಲ್ಲದೆ ಕಲಿಕೆಯ ಕೌಶಲ್ಯಗಳು ಮತ್ತು ಹೋ ವರ್ಕ್ಗಳನ್ನು ಮಾಡಲು ಅವರಿಗೆ ಸಹಾಯ ಮಾಡುತ್ತದೆ.
"ಆರ್ಥಿಕ ಬಿಕ್ಕಟ್ಟಿನಿಂದಾಗಿ ಟ್ಯೂಷನ್ಗೆ ಹೋಗಲು ಮತ್ತು ಪರೀಕ್ಷೆಗಳಿಗೆ ತಯಾರಾಗಲು ಹೆಚ್ಚಿನ ಕೌಶಲ್ಯಗಳನ್ನು ಪಡೆಯಲು ಸಾಧ್ಯವಾಗದ ಅನೇಕ ವಿದ್ಯಾರ್ಥಿಗಳು ನಗರದಲ್ಲಿದ್ದಾರೆ. ಹಾಗಾಗಿ ನಮ್ಮ ಬಿಬಿಎಂಪಿ ಶಾಲೆಗಳಲ್ಲಿ 25 ರಿಂದ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವ ಟ್ಯೂಷನ್ ಸೆಂಟರ್ಗಳನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ ಎಂದು ಬಿಬಿಎಂಪಿ ಸಹಾಯಕ ಆಯುಕ್ತ (ಶಿಕ್ಷಣ) ಡಿ.ಎಸ್.ಉಮೇಶ್ ಹೇಳಿದರು.

ಅಧ್ಯಯನ ಸಾಮಗ್ರಿ, ಉಪಕರಣನ್ನು ನೀಡಲಾಗುತ್ತೆ
ಅಗಸ್ತ್ಯ ಇಂಟರ್ನ್ಯಾಶನಲ್ ಫೌಂಡೇಶನ್ ಎಂಬ ಎನ್ಜಿಒ ಟ್ಯೂಷನ್ ಸೆಂಟರ್ಗಳನ್ನು ಸ್ಥಾಪಿಸಲು ಬಿಬಿಎಂಪಿಗೆ ಸಹಾಯ ಮಾಡುತ್ತದೆ. ಟ್ಯೂಷನ್ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಕಾರ್ಯಾದೇಶ ನೀಡಲಾಗಿದೆ. ಎನ್ಜಿಒ ವಿದ್ಯಾರ್ಥಿಗಳಿಗೆ ಅಧ್ಯಯನ ಸಾಮಗ್ರಿಗಳನ್ನು ಮತ್ತು ಟ್ಯೂಷನ್ ಸೆಂಟರ್ಗಳಿಗೆ ಉಪಕರಣಗಳನ್ನು ಒದಗಿಸುತ್ತದೆ ಎಂದು ಉಮೇಶ್ ಹೇಳಿದರು.

ಸಂಜೆ 5.30 ರಿಂದ 7 ಗಂಟೆಯವರೆಗೆ ಟ್ಯೂಷನ್
ವಿದ್ಯಾರ್ಥಿಗಳಿಗೆ ಕಲಿಸುವ ಆಸಕ್ತಿಯಿರುವ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಲಿಸಲು ಬಯಸುವ ಅರ್ಹ ಯುವಕರು ಅರ್ಜಿ ಸಲ್ಲಿಸಬಹುದು. ಬಿಬಿಎಂಪಿಯು ಶಿಕ್ಷಕರಿಗೆ ತಿಂಗಳಿಗೆ ₹3,500 ಗೌರವಧನ ನೀಡಲಿದೆ. ಈ ತರಗತಿಗಳು ಸಂಜೆ 5.30 ರಿಂದ 7 ಗಂಟೆಯವರೆಗೆ ನಡೆಯಲಿವೆ. ಇದು ಪ್ರಾಯೋಗಿಕ ಯೋಜನೆಯಾಗಿರುವುದರಿಂದ 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗೆ ಮಾತ್ರ ತರಗತಿಯನ್ನು ತೆಗೆದುಕೊಳ್ಳಲಾಗುತ್ತದೆ. ಈ ಯೋಜನೆಯು ಹೇಗೆ ಜಾರಿಯಾಗುತ್ತದೆ ಎಂಬುದನ್ನು ನೋಡಿದ ನಂತರ ಬಿಬಿಎಂಪಿ ಪ್ರೌಢಶಾಲೆಯವರೆಗೆ ಟ್ಯೂಷನ್ ತರಗತಿಯನ್ನು ವಿಸ್ತರಿಸುತ್ತದೆ ಎಂದು ಸಹಾಯಕ ಆಯುಕ್ತ ಉಮೇಶ್ ಹೇಳಿದರು.

ವಿಜಯನಗರ ಪ್ರೌಢಶಾಲೆನಲ್ಲಿ ಸೆಂಟರ್
ಬಿಬಿಎಂಪಿ ಟ್ಯೂಷನ್ ಕೇಂದ್ರಗಳು ಇಂತಿವೆ. 1. ಕ್ಲೀವ್ಲ್ಯಾಂಡ್ ಟೌನ್ ಪಿಯು ಕಾಲೇಜು ಮತ್ತು ಪ್ರೌಢಶಾಲೆ, 2. ಬೈರವೇಶ್ವರ ನಗರ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 3. ಶ್ರೀರಾಂಪುರ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 4. ಕಸ್ತೂರಬಾ ನಗರ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 5. ಮತ್ತಿಕೆರೆ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 6. ಆಸ್ಟಿನ್ ಟೌನ್ ಬಿಬಿಎಂಪಿ ಬಾಲಕರ ಪ್ರೌಢಶಾಲೆ, 7.ಗಂಗಾನಗರ ಪ್ರೌಢಶಾಲೆ, 8. ಪಾದರಾಯನಪುರ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 9. ವಿಜಯನಗರ ಪ್ರೌಢಶಾಲೆ, 10. ಪಿಳ್ಳಣ್ಣ ಗಾರ್ಡನ್ ಪ್ರೌಢಶಾಲೆ ಮತ್ತು ಪಿಯು ಕಾಲೇಜು.

ಎನ್ಜಿಒ ಸಂಸ್ಥೆಯ ಸಹಯೋಗ
ಮನೆಯಲ್ಲಿ ಓದಲು ಕಷ್ಟವಿರುವ ಪರಿಸ್ಥಿತಿ ಇರುವ ಮಕ್ಕಳು ಇನ್ನು ಬೆಂಗಳೂರಿನಲ್ಲಿ ಇದ್ದಾರೆ. ಅವರು ಶೈಕ್ಷಣಿಕವಾಗಿ ಮುಂದೆ ತರುವುದು ಬಿಬಿಎಂಪಿಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎನ್ಜಿಒ ಸಂಸ್ಥೆಯ ಮೂಲಕ ಮಕ್ಕಳಿಗೆ ಟ್ಯೂಷನ್ ಕೊಡಿಸಲಾಗುವುದು. ಇಲ್ಲಿ ಮಕ್ಕಳಿಗೆ ಖಾಸಗಿ ಟ್ಯೂಷನ್ ಸೆಂಟರ್ನಂತೆಯೇ ಪಾಠ ಹಾಗೂ ಹೋ ವರ್ಕ್ಗಳನ್ನು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications