ಬಿಬಿಎಂಪಿಯಿಂದ ಬಡ ಮಕ್ಕಳಿಗಾಗಿ ಟ್ಯೂಷನ್ ಸೆಂಟರ್; ಯಾವಾಗ, ಎಲ್ಲೆಲ್ಲಿ ತಿಳಿಯಿರಿ
ಬೆಂಗಳೂರು, ಆಗಸ್ಟ್ 23: ಹಿಂದುಳಿದ ವರ್ಗಗಳ ಮಕ್ಕಳಿಗೆ ಶೈಕ್ಷಣಿಕವಾಗಿ ನೆರವಾಗುವ ಉದ್ಧೇಶದೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಟ್ಯೂಷನ್ ಸೆಂಟರ್ಗಳನ್ನು ಆರಂಭಿಸಲು ಮುಂದಾಗಿದೆ. ಬೆಂಗಳೂರಿನ ಹತ್ತು ಕಡೆ ಈ ಬೋಧನ ಕೇಂದ್ರ(ಟ್ಯೂಷನ್ ಸೆಂಟರ್) ಗಳನ್ನು ಪ್ರಾರಂಭಿಸಲು ಬಿಬಿಎಂಪಿ ತಯಾರಿ ನಡೆಸಿದೆ.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5 ರಿಂದ ನಗರದ ವಿವಿಧೆಡೆ ಹಿಂದುಳಿದ ವರ್ಗದ ಮಕ್ಕಳಿಗಾಗಿ ಟ್ಯೂಷನ್ ಸೆಂಟರ್ ಆರಂಭಿಸಲು ನಗರದ ನಾಗರಿಕರ ಸಂಸ್ಥೆ ಬಿಬಿಎಂಪಿ ಸಜ್ಜಾಗಿದೆ.
"ವಿದ್ಯಾರ್ಥಿ ಬೆಳಕು ಅಧ್ಯಯನ ಕೇಂದ್ರ" ಎಂಬ ವಿಶಿಷ್ಟ ಉಪಕ್ರಮವನ್ನು ಸರ್ಕಾರೇತರ ಸಂಸ್ಥೆಗಳ (ಎನ್ಜಿಒ) ಸಹಾಯದಿಂದ ಹತ್ತು ಸ್ಥಳಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗುವುದು. ಅಲ್ಲಿ ಶಿಕ್ಷಕರು ಕೊಳೆಗೇರಿ ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಬಡ ಮಕ್ಕಳಿಗೆ ಟ್ಯೂಷನ್ ತರಗತಿ ನಡೆಸುವುದರ ಮೂಲಕ ಶೈಕ್ಷಣಿಕವಾಗಿ ಸಹಾಯ ಮಾಡುತ್ತಾರೆ. ಅಲ್ಲದೆ ಕಲಿಕೆಯ ಕೌಶಲ್ಯಗಳು ಮತ್ತು ಹೋ ವರ್ಕ್ಗಳನ್ನು ಮಾಡಲು ಅವರಿಗೆ ಸಹಾಯ ಮಾಡುತ್ತದೆ.
"ಆರ್ಥಿಕ ಬಿಕ್ಕಟ್ಟಿನಿಂದಾಗಿ ಟ್ಯೂಷನ್ಗೆ ಹೋಗಲು ಮತ್ತು ಪರೀಕ್ಷೆಗಳಿಗೆ ತಯಾರಾಗಲು ಹೆಚ್ಚಿನ ಕೌಶಲ್ಯಗಳನ್ನು ಪಡೆಯಲು ಸಾಧ್ಯವಾಗದ ಅನೇಕ ವಿದ್ಯಾರ್ಥಿಗಳು ನಗರದಲ್ಲಿದ್ದಾರೆ. ಹಾಗಾಗಿ ನಮ್ಮ ಬಿಬಿಎಂಪಿ ಶಾಲೆಗಳಲ್ಲಿ 25 ರಿಂದ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವ ಟ್ಯೂಷನ್ ಸೆಂಟರ್ಗಳನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ ಎಂದು ಬಿಬಿಎಂಪಿ ಸಹಾಯಕ ಆಯುಕ್ತ (ಶಿಕ್ಷಣ) ಡಿ.ಎಸ್.ಉಮೇಶ್ ಹೇಳಿದರು.

ಅಧ್ಯಯನ ಸಾಮಗ್ರಿ, ಉಪಕರಣನ್ನು ನೀಡಲಾಗುತ್ತೆ
ಅಗಸ್ತ್ಯ ಇಂಟರ್ನ್ಯಾಶನಲ್ ಫೌಂಡೇಶನ್ ಎಂಬ ಎನ್ಜಿಒ ಟ್ಯೂಷನ್ ಸೆಂಟರ್ಗಳನ್ನು ಸ್ಥಾಪಿಸಲು ಬಿಬಿಎಂಪಿಗೆ ಸಹಾಯ ಮಾಡುತ್ತದೆ. ಟ್ಯೂಷನ್ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಕಾರ್ಯಾದೇಶ ನೀಡಲಾಗಿದೆ. ಎನ್ಜಿಒ ವಿದ್ಯಾರ್ಥಿಗಳಿಗೆ ಅಧ್ಯಯನ ಸಾಮಗ್ರಿಗಳನ್ನು ಮತ್ತು ಟ್ಯೂಷನ್ ಸೆಂಟರ್ಗಳಿಗೆ ಉಪಕರಣಗಳನ್ನು ಒದಗಿಸುತ್ತದೆ ಎಂದು ಉಮೇಶ್ ಹೇಳಿದರು.

ಸಂಜೆ 5.30 ರಿಂದ 7 ಗಂಟೆಯವರೆಗೆ ಟ್ಯೂಷನ್
ವಿದ್ಯಾರ್ಥಿಗಳಿಗೆ ಕಲಿಸುವ ಆಸಕ್ತಿಯಿರುವ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಲಿಸಲು ಬಯಸುವ ಅರ್ಹ ಯುವಕರು ಅರ್ಜಿ ಸಲ್ಲಿಸಬಹುದು. ಬಿಬಿಎಂಪಿಯು ಶಿಕ್ಷಕರಿಗೆ ತಿಂಗಳಿಗೆ ₹3,500 ಗೌರವಧನ ನೀಡಲಿದೆ. ಈ ತರಗತಿಗಳು ಸಂಜೆ 5.30 ರಿಂದ 7 ಗಂಟೆಯವರೆಗೆ ನಡೆಯಲಿವೆ. ಇದು ಪ್ರಾಯೋಗಿಕ ಯೋಜನೆಯಾಗಿರುವುದರಿಂದ 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗೆ ಮಾತ್ರ ತರಗತಿಯನ್ನು ತೆಗೆದುಕೊಳ್ಳಲಾಗುತ್ತದೆ. ಈ ಯೋಜನೆಯು ಹೇಗೆ ಜಾರಿಯಾಗುತ್ತದೆ ಎಂಬುದನ್ನು ನೋಡಿದ ನಂತರ ಬಿಬಿಎಂಪಿ ಪ್ರೌಢಶಾಲೆಯವರೆಗೆ ಟ್ಯೂಷನ್ ತರಗತಿಯನ್ನು ವಿಸ್ತರಿಸುತ್ತದೆ ಎಂದು ಸಹಾಯಕ ಆಯುಕ್ತ ಉಮೇಶ್ ಹೇಳಿದರು.

ವಿಜಯನಗರ ಪ್ರೌಢಶಾಲೆನಲ್ಲಿ ಸೆಂಟರ್
ಬಿಬಿಎಂಪಿ ಟ್ಯೂಷನ್ ಕೇಂದ್ರಗಳು ಇಂತಿವೆ. 1. ಕ್ಲೀವ್ಲ್ಯಾಂಡ್ ಟೌನ್ ಪಿಯು ಕಾಲೇಜು ಮತ್ತು ಪ್ರೌಢಶಾಲೆ, 2. ಬೈರವೇಶ್ವರ ನಗರ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 3. ಶ್ರೀರಾಂಪುರ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 4. ಕಸ್ತೂರಬಾ ನಗರ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 5. ಮತ್ತಿಕೆರೆ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 6. ಆಸ್ಟಿನ್ ಟೌನ್ ಬಿಬಿಎಂಪಿ ಬಾಲಕರ ಪ್ರೌಢಶಾಲೆ, 7.ಗಂಗಾನಗರ ಪ್ರೌಢಶಾಲೆ, 8. ಪಾದರಾಯನಪುರ ಪ್ರೌಢಶಾಲೆ ಮತ್ತು ಪಿಯು ಕಾಲೇಜು, 9. ವಿಜಯನಗರ ಪ್ರೌಢಶಾಲೆ, 10. ಪಿಳ್ಳಣ್ಣ ಗಾರ್ಡನ್ ಪ್ರೌಢಶಾಲೆ ಮತ್ತು ಪಿಯು ಕಾಲೇಜು.

ಎನ್ಜಿಒ ಸಂಸ್ಥೆಯ ಸಹಯೋಗ
ಮನೆಯಲ್ಲಿ ಓದಲು ಕಷ್ಟವಿರುವ ಪರಿಸ್ಥಿತಿ ಇರುವ ಮಕ್ಕಳು ಇನ್ನು ಬೆಂಗಳೂರಿನಲ್ಲಿ ಇದ್ದಾರೆ. ಅವರು ಶೈಕ್ಷಣಿಕವಾಗಿ ಮುಂದೆ ತರುವುದು ಬಿಬಿಎಂಪಿಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎನ್ಜಿಒ ಸಂಸ್ಥೆಯ ಮೂಲಕ ಮಕ್ಕಳಿಗೆ ಟ್ಯೂಷನ್ ಕೊಡಿಸಲಾಗುವುದು. ಇಲ್ಲಿ ಮಕ್ಕಳಿಗೆ ಖಾಸಗಿ ಟ್ಯೂಷನ್ ಸೆಂಟರ್ನಂತೆಯೇ ಪಾಠ ಹಾಗೂ ಹೋ ವರ್ಕ್ಗಳನ್ನು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications