ಬಿಬಿಎಂಪಿ ವಿಭಜನೆ ನಿರ್ಧಾರಕ್ಕೆ ಸದಸ್ಯರ ವಿರೋಧ
ಬೆಂಗಳೂರು, ಜು. 10 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವ ಪ್ರಸ್ತಾಪಕ್ಕೆ ಬಿಬಿಎಂಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಪಾಲಿಕೆಯನ್ನು ವಿಭಜಿಸಬಾರದು ಎಂಬ ನಿರ್ಣಯವನ್ನು ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದ್ದು, ಇದನ್ನು ಸರ್ಕಾರಕ್ಕೆ ಕಳುಹಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಬಿಬಿಎಂಪಿ ವಿಭಜನೆ ಕುರಿತು ಚರ್ಚಿಸಲು ಪಾಲಿಕೆಯ ಸಭಾಂಗಣದಲ್ಲಿ ಗುರುವಾರ ವಿಶೇಷ ಕೌನ್ಸಿಲ್ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯರು ಪಾಲಿಕೆಯನ್ನು ವಿಭಜನೆ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದರು. [ಬಿಬಿಎಂಪಿ ವಿಭಜನೆಯ ಸುಳಿವು ಕೊಟ್ಟ ಸಿದ್ದರಾಮಯ್ಯ]

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ, ಪಾಲಿಕೆಯನ್ನು ವಿಭಜನೆ ಮಾಡುವ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಪಾಲಿಕೆ ವಿಭಜನೆ ಮಾಡದಂತೆ ಕೈಗೊಂಡ ನಿರ್ಣಯವನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.[ಬಿಬಿಎಂಪಿ ವಿಭಜನೆ ಆಗುತ್ತಾ?]
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಮಾಡುವ ಕುರಿತು ವರದಿ ನೀಡುವಂತೆ ಸರ್ಕಾರ ರಚಿಸಿದ್ದ ಸಮಿತಿ ಎರಡು ಅಥವ ಮೂರು ವಿಭಾಗಗಳಾಗಿ ಪಾಲಿಕೆಯನ್ನು ವಿಭಜಿಸಬಹುದು. ಇದರಿಂದ 198 ವಾರ್ಡ್ ಗಳಿರುವ ಪಾಲಿಕೆಯಲ್ಲಿ ಆಡಳಿತ ನಡೆಸಲು ಅನುಕೂಲವಾಗುತ್ತದೆ ಎಂದು ಸಲಹೆ ವರದಿ ನೀಡಿತ್ತು. ಸರ್ಕಾರ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ವರದಿ ಮಂಡಿಸಿ ಅಭಿಪ್ರಾಯ ತಿಳಿಸುವಂತೆ ಕೇಳಿತ್ತು.
ಈ ಹಿನ್ನಲೆಯಲ್ಲಿ ಗುರುವಾರ ನಡೆದ ಪಾಲಿಕೆ ವಿಶೇಷ ಕೌನ್ಸಿಲ್ ಸಭೆಯಲ್ಲಿ ವಿಭಜನೆ ಕುರಿತು ಚರ್ಚೆ ನಡೆಸಲಾಯಿತು. ಆದರೆ, ಸದಸ್ಯರು ಆಡಳಿತಾತ್ಮಕ ದೃಷ್ಟಿಯಿಂದಾಗಿ ಪಾಲಿಕೆ ವಿಭಜನೆ ಮಾಡುವುದು ಬೇಡ. ಬಿಬಿಎಂಪಿ ಕುರಿತಾದ ಪ್ರತ್ಯೇಕ ನೀತಿಯನ್ನು ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ತೀರ್ಮಾನ ಕೈಗೊಂಡಿತು. ಆದ್ದರಿಂದ ಪಾಲಿಕೆ ವಿಭಜನೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡುವ ಸಾಧ್ಯತೆ ಇದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications