ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದ ದೇವೇಂದ್ರಪ್ಪ ಅಮಾನತು
ಬೆಂಗಳೂರು, ಫೆಬ್ರವರಿ 9: ಬೊಮ್ಮನಹಳ್ಳಿ ಎಡಿಟಿಪಿ ದೇವೇಂದ್ರಪ್ಪ ಅವರ ಮನೆ ಮೇಲೆ ಎಸಿಬಿ ದಾಳಿ ಪ್ರಕರಣದ ವಿಚಾರವಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ದೇವೇಂದ್ರಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದರು.
ಈ ಕುರಿತು ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಎಸಿಬಿ ತನಿಖಾ ವರದಿ ಬಂದ ಮೇಲೆ ತೀರ್ಮಾನ ಆಗಲಿದ್ದು, ಮಹಾನಗರ ಪಾಲಿಕೆ ಎಲ್ಲ ತೀರ್ಮಾನ ಕೈಗೊಳ್ಳಲು ಸಜ್ಜಾಗಿದೆ. ನಕಲಿ ಒಸಿ, ನಕಲಿ ಸೀಲ್ ಹಾಕಲು ಮನೆಯಲ್ಲಿ ಇಟ್ಟಿದ್ದು, ಅನುಮತಿ ಇಲ್ಲದೇ ಕಟ್ಟಡ ಕಟ್ಟಿದ್ದವರಿಗೆ ಅನುಮತಿ ನೀಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ ಎಂದರು.
ಅಕ್ರಮ ಕಟ್ಟಡ ಮಾಲೀಕರಿಗೂ ಒಸಿ ಪಡೆಯಲು ಇಂತಹ ವ್ಯಕ್ತಿಗಳನ್ನು ಬಳಸುತ್ತಿದ್ದ ಮಾಹಿತಿ ಇದೆ. ಈ ಮಾಲೀಕರ ವಿರುದ್ಧವು ಕ್ರಿಮಿನಲ್ ಕೇಸ್ ಹಾಕಲು ತೀರ್ಮಾನವಾಗಿದೆ ಎಂದು ತಿಳಿಸಿದರು.

ಸದ್ಯ ಕಟ್ಟಡ ಒಸಿ ಇಲ್ಲದೇ ಜಲಮಂಡಳಿ, ಬೆಸ್ಕಾಂ ಸೇವೆ ಸಿಗಲ್ಲ. ಹೀಗಾಗಿ ನಕಲಿ ಸೀಲ್, ದಾಖಲೆ ಸೃಷ್ಟಿಸಿ ಒಸಿ ನೀಡುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಹೀಗಾಗಿ ಸರ್ಕಾರಿ ಕೆಲಸದಿಂದಲೇ ಅಧಿಕಾರಿ ದೇವೇಂದ್ರಪ್ಪನ ವಜಾದ ಬಗ್ಗೆ ಆಲೋಚನೆ ಮಾಡಿ ತೀರ್ಮಾನ ಮಾಡಲಾಗುವುದು ಎಂದರು.
ಕಟ್ಟಡವೊಂದಕ್ಕೆ ಒಸಿ ನೀಡಲು ದೇವೇಂದ್ರಪ್ಪ ಬರೋಬ್ಬರಿ 40 ಲಕ್ಷ ರೂ. ಹಣ ಕೇಳಿದ್ದರಂತೆ. ಅದರ ಅಡ್ವಾನ್ಸ್ ಹಣವಾಗಿ 20 ಲಕ್ಷ ರೂ. ತೆಗೆದುಕೊಳ್ಳೊವಾಗ ಎಸಿಬಿ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ನಂತರ ವಿಚಾರಣೆಗೆ ಒಳಪಡಿಸಿದಾಗ ಬಿಬಿಎಂಪಿ ಕಚೇರಿಯಲ್ಲೇ ಒಂದಷ್ಟು ನಗದು, ಕಾರಿನಲ್ಲಿ ಏಳುವರೇ ಲಕ್ಷ ಹಣ ಎಲ್ಲವೂ ಸಿಕ್ಕಿತ್ತು.
ನಂತರ ಮನೆಯಲ್ಲಿ ಹುಡುಕಾಡಿದಾಗ ಎಸಿಬಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಮನೆಯಲ್ಲಿ ಮಿನಿ ಬಾರ್ ಒಂದು ತೆರೆದುಕೊಂಡಿತ್ತು. ಇಲ್ಲಿ ವಿದೇಶಿ ಸೇರಿದಂತೆ 120 ಲೀಟರ್ ವಿವಿಧ ಬ್ರ್ಯಾಂಡ್ ನ ಮದ್ಯದ ಬಾಟಲ್ಗಳು ಪತ್ತೆಯಾಗಿವೆ. ಜೊತೆಗೆ ಬಿಬಿಎಂಪಿ ಕಚೇರಿಯಲ್ಲಿ ಇರಬೇಕಾದ ಬರೋಬ್ಬರಿ 480 ಫೈಲ್ ಗಳು, ಹಿರಿಯ ಅಧಿಕಾರಿಗಳ ಹೆಸರಿನ ನಕಲಿ ಸೀಲು, ಸೈನ್ ಗಳು, ವಿವಿಧ ಬ್ಯಾಂಕ್ ಗಳ ಬೇನಾಮಿ ಅಕೌಂಟ್ಗಳು, ಆಸ್ತಿ ಪತ್ರಗಳು ದೊರೆತಿದ್ದವು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications