Bengaluru: ವಿಶ್ವ ಮಾಸಿಕ ಆರೋಗ್ಯ ದಿನಾಚರಣೆ-2023: ತಜ್ಞರು ನೀಡಿದ ಸಲಹೆಗಳೇನು?
ಬೆಂಗಳೂರು, ಅಕ್ಟೋಬರ್ 19: ಮಾನವನಿಗೆ ಮಾನಸಿಕ ಆರೋಗ್ಯ ಬಹಳ ಪ್ರಮುಖವಾದ ವಿಷಯವಾಗಿದೆ. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಚ್ಚಿನವರು ನಿರ್ಲಕ್ಷ್ಯ ವಹಿಸುತ್ತಾರೆ. ಈ ಸಮಸ್ಯೆಯ ಗುರುತಿಸುವಿಕೆ ನಡೆಯಬೇಕು. ಜೊತೆಗೆ ನಾಗರೀಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ರವರು ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BMTC) ಮಾನಸಿಕ ಆರೋಗ್ಯ ವಿಭಾಗದಿಂದ ಆರ್.ವಿ ಕಾಲೇಜ್ ಆಫ್ ನರ್ಸಿಂಗ್ ಬೆಂಗಳೂರು ಅವರ ಸಹಯೋಗದೊಂದಿಗೆ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2023ಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾನಸಿಕ ಆರೋಗ್ಯ ಹಾಗೂ ಖಿನ್ನತೆಯ ಕುರಿತು ಮಾಹಿತಿ ನೀಡಿದರು.

ನಿಮ್ಹಾನ್ಸ್ ನ ಪ್ರಾಧ್ಯಾಪಕರಾದ ಡಾ.ಗಿರೀಶ್ ಎನ್ ರವರು ಮಾತನಾಡಿ, ಮಾನಸಿಕ ಆರೋಗ್ಯ, ಮಾದಕ ದ್ರವ್ಯ ಸೇವನೆಯಿಂದ ಮಾನವನ ಕಲ್ಪನೆಯಿಂದ ನೈಜತೆ ಹಾಗೂ ವಾಸ್ತವಿಕತೆ ವ್ಯತ್ಯಾಸದ ಕುರಿತು ಮಾಹಿತಿ ನೀಡಿದರು.
ಸಣ್ಣವರಿಗೆ ಮಾನಸಿಕ ಸಮಸ್ಯೆಗಳು ಏರಿಕೆ
ಪಾಲಿಕೆಯ ಡಿ.ಎಮ್.ಹೆಚ್.ಪಿಯ ಕಾರ್ಯಕ್ರಮ ಅಧಿಕಾರಿಯಾದ ಡಾ. ಕುಮಾರ್ ಎಮ್.ವಿ ರವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಚಿಕ್ಕವಯಸ್ಸಿನವರಲ್ಲಿ ಮಾನಸಿಕ ಸಮಸ್ಯೆಗಳನ್ನು ಹೆಚ್ಚಾಗುತ್ತಿದ್ದು, ಆ ಬಗ್ಗೆ ಗಮನವರಿಸಬೇಕು. ಮನಸ್ಸು ಮತ್ತು ದೇಹ ಎರಡನ್ನೂ ಬೇರೆ ಬೇರೆಯಾಗಿ ನೋಡಬಾರದು. ದೇಹ ಎಷ್ಟು ಮುಖ್ಯವೋ ಮನಸ್ಸು ಕುಡಾ ಅಷ್ಟೇ ಮುಖ್ಯ ಎಂದು ತಿಳಿಸಿದರು.
ಈ ವೇಳೆ ಮಾನಸಿಕ ಆರೋಗ್ಯದ ಉಪ ನಿರ್ದೇಶಕರಾದ ಡಾ. ರಜನಿ.ಪಿ, ಮಾನಸಿಕ ಆರೋಗ್ಯ ಮನೋವೈದ್ಯರಾದ ಡಾ. ವಿಕ್ರಂ ಅರುಣಾಚಲಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications