ಅಪಾರ್ಟ್ಮೆಂಟ್ಗಳಲ್ಲಿ ಲಸಿಕಾ ಶಿಬಿರ ನಡೆಸಲು ಬಿಬಿಎಂಪಿ ಸಿದ್ಧತೆ
ಬೆಂಗಳೂರು, ಮೇ 1 : ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ, ಹಲವು ರಾಜ್ಯಗಳಲ್ಲಿ ಕೊರೊನಾ ನಿಯಮಗಳನ್ನು ಕಡ್ಡಾಯಗೊಳಿಸಿದೆ. ಜೊತೆಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಿದೆ. ಸದ್ಯ ಬೆಂಗಳೂರಿನಲ್ಲೂ ಕೂಡ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ, ನಿವಾಸಿಗಳ ಕಲ್ಯಾಣ ಸಂಘ ನಗರದಲ್ಲಿರುವ ಇನ್ನು ಹಲವು ಜನರಿಗೆ ಲಸಿಕೆ ನೀಡಿಲ್ಲ, ಹೀಗಾಗಿ ಲಸಿಕೆ ನೀಡುವಂತೆ ಮನವಿ ಮಾಡಿತ್ತು ಅದರಂತೆ ಬಿಬಿಎಂಪಿ ನಗರದಲ್ಲಿ ಇನ್ನೂ ಮೂರು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಎರಡನೇ ಡೋಸ್ ಪಡೆಯಬೇಕಾಗಿರುವುದರಿಂದ ಅಪಾರ್ಟ್ಮೆಂಟ್ ಹಾಗೂ ವಸತಿ ಬಡಾವಣೆಗಳಲ್ಲಿ ಲಸಿಕೆ ಶಿಬಿರ ನಡೆಸಲು ಸಿದ್ದತೆ ಮಾಡಿಕೊಂಡಿದೆ.
ನಿವಾಸಿಗಳ ಕಲ್ಯಾಣ ಸಂಘ ಮತ್ತು ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಶನ್ ಜೊತೆ ಸಭೆ ನಡೆಸಿದ ಬಿಬಿಎಂಪಿ ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ ಅವರು ಕೊರೊನಾ ಹರಡುವಿಕೆ, ಮುನ್ನೆಚ್ಚರಿಕಾ ಡೋಸ್ಗಳು ವಿತರಣೆ ಹಾಗೂ ಮಕ್ಕಳ ವ್ಯಾಕ್ಸಿನೇಶನ್ ಕುರಿತು ನಿವಾಸಿಗಳಲ್ಲಿ ಜಾಗೃತಿ ಮೂಡಿಸಿದರು. ಜೊತೆಗೆ 12 ರಿಂದ 18 ವರ್ಷದೊಳಗಿನವರಿಗೂ ಸೇರಿದಂತೆ ಎಲ್ಲಾ ಅರ್ಹ ನಾಗರಿಕರಿಗೆ ಲಸಿಕೆ ಹಾಕಲು ಸಾಕಷ್ಟು ಲಸಿಕೆ ದಾಸ್ತಾನು ಇದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಐಎಲ್ಐ ಕಾಯಿಲೆ ಮತ್ತು ತೀವ್ರ ಉಸಿರಾಟದ ಸಮಸ್ಯೆ ಹೊಂದಿರುವ ರೋಗಿಗಳು ಹಾಗೂ ಹೊರ ರೋಗಿ ಮತ್ತು ಒಳ ರೋಗಿಗಾಗಿ ಬರುವ ರೋಗಿಗಳಿಗೆ ಕೊರೊನಾ ಪರೀಕ್ಷೆಯನ್ನು ನಡೆಸಬೇಕು ಎಂದು ಬಿಬಿಎಂಪಿ ಸೂಚನೆ ನೀಡಿದೆ.

ಅಲ್ಲದೆ ನಗರದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡ 10 ರಷ್ಟು ಹಾಸಿಗೆಗಳನ್ನು ಕಾಯ್ದಿರಿರಿಸಬೇಕಾಗಿದೆ ಎಂದು ಆಸ್ಪತ್ರೆ ಪ್ರತಿನಿಧಿಗಳ ಜೊತೆ ನಡೆಸ ಸಭೆಯಲ್ಲಿ ಪಾಲಿಕೆ ಅಧಿಕಾರಿಗಳು ಸೂಚಿಸಿದ್ದಾರೆ.
ಇನ್ನು ಮಾಲ್, ಹೋಟೆಲ್ , ಸಿನಿಮಾ ಹಾಲ್ಗಳಲ್ಲಿ ಡಬಲ್ ಡೋಸ್ ವ್ಯಾಕ್ಸಿನೇಷನ್ ಹಾಕಿದವರಿಗೆ ಪ್ರವೇಶ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಮಾರ್ಷಲ್ಗಳು ಕೂಡ ಹೆಚ್ಚು ಜನಸಂದಣಿಯಾಗುವ ಪ್ರದೇಶಗಳಲ್ಲಿ ಗಸ್ತು ತಿರುಗುವಂತೆ ಹೇಳಿದೆ.
ಒಟ್ಟಿನಲ್ಲಿ ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುವುದನ್ನ ತಡೆಗಟ್ಟಲು ಬಿಬಿಎಂಪಿ ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ. ಈ ಮೂಲಕ ನಾಲ್ಕನೇ ಅಲೆ ಹೆಚ್ಚು ಹರಡದಂತೆ ಈಗಿನಿಂದಲೇ ಸೂಕ್ತ ಕ್ರಮ ವಹಿಸಿದೆ.
Recommended Video
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications