Breaking News: ಬಿಬಿಎಂಪಿ ವಾರ್ಡ್ ಮರುವಿಂಗಡಣೆ ವಿರುದ್ಧ ಮೊದಲ ಆಕ್ಷೇಪಣೆ
ಬೆಂಗಳೂರು, ಜೂನ್ 25:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ಗಳನ್ನು ಮರುವಿಂಗಡಣೆ ಮಾಡಿದೆ. 198 ವಾರ್ಡ್ಗಳ್ನು ಮರುವಿಂಗಡಣೆ ಮಾಡಿ 243 ವಾರ್ಡ್ಗಳಿಗೆ ಏರಿಕೆಯನ್ನು ಮಾಡಿದೆ. 2011ರ ಜನಗಣತಿ ಆಧಾರದಲ್ಲಿ ವಾರ್ಡ್ ವಿಂಗಡಣೆ ಮಾಡಲಾಗಿದ್ದರು ವಾರ್ಡ್ ವಿಂಗಡಣೆ ಅವೈಜ್ಞಾನಿಕದ ಆರೋಪ ಕೇಳಿಬಂದಿದೆ.
ವಾರ್ಡ್ ಮರುವಿಂಗಡಣೆಗೆ ಬಗ್ಗೆ ಆಕ್ಷೇಪಗಳಿದ್ದರೇ ಸಂಬಂಧಿಸಿದ ಕಚೇರಿಯಲ್ಲಿ ಆಕ್ಷೇಪಣೆಯನ್ನು ಸಲ್ಲಿಸಲು ಸಾರ್ವಜನಿಕರಿಗೆ 15 ದಿನ ಕಾಲಾವಕಾಶವನ್ನು ನೀಡಲಾಗಿದೆ. ವಾರ್ಡ್ ಮರುವಿಂಗಣೆ ಕುರಿತಾಗಿ ಮೊದಲ ಆಕ್ಷೇಪವನ್ನು ಸಲ್ಲಿಸಲು ಬೈರಸಂಧ್ರ ವಾರ್ಡ್ ನಿವಾಸಿಗಳು ಸನ್ನದ್ದರಾಗಿದ್ದಾರೆ.

ವಾಡ್೯ ಮರುವಿಂಗಡಣೆಗೆ ಮೊದಲ ಆಕ್ಷೇಪ ಸಿದ್ದವಾಗಿದೆ. ಸಾರ್ವಜನಿಕರ ಅಭಿಪ್ರಾಯ ಸಂಘ ಸಂಸ್ಥೆಗಳ ಅಭಿಪ್ರಾಯವನ್ನೂ ಕೇಳದ ಬಿಬಿಎಂಪಿ ವಾಡ್೯ ಸರ್ವೆ ನಡೆಸದೆ ಎಸಿ ಕಚೇರಿಯಲ್ಲೇ ಕೂತು ವಾಡ್೯ ವಿಂಗಡಣೆ ಮಾಡಿದ್ದಾರೆ. ಹಳೇಯ ವಾರ್ಡ್ ನಂಬರ್ 169ರಲ್ಲಿದ್ದ ಬೈರಸಂದ್ರ ವಾರ್ಡ್ ಮರು ವಿಂಗಡಣೆ ಬಳಿಕ ಸಂಖ್ಯೆ 196ಕ್ಕೆ ಬದಲಾಗಿದೆ. ಈ ವಾರ್ಡ್ನಲ್ಲಿಯೇ ಆಕ್ಷೇಪ ವ್ಯಕ್ತವಾಗುತ್ತಿರುವುದು.

ಬೈರಸಂದ್ರ ವಾರ್ಡ್ನ ಮಧ್ಯಭಾಗದಲ್ಲಿ ಬರುವ ಎಲ್.ಐ.ಸಿ. ಕಾಲೋನಿಯನ್ನು ಎರಡು ವಾರ್ಡ್ಗಳಿಗೆ ಹಂಚಿಕೆ ಮಾಡಲಾಗಿದೆ. ಕೇವಲ 80 ಅಡಿಯಷ್ಟು ವಿಸ್ತೀರ್ಣ ಹೊಂದಿರುವ ಭಾಗವನ್ನು ತೆಗೆದು ಎರಡು ಕಿಲೋಮೀಟರ್ ದೂರ ಇರುವ ವಾಡ್೯ ಗೆ ಸೇರ್ಪಡೆ ಮಾಡಲಾಗಿದೆ. ಅವೈಜ್ಞಾನಿಕ ವಾಡ್೯ ವಿಂಗಡಣೆಗೆ ಎಲ್.ಐ.ಸಿ ಕಾಲೋನಿ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಎಲ್.ಐ.ಸಿ ಅಸೋಸಿಯೇಷನ್ ಮುಖಾಂತರ ಆಕ್ಷೇಪಣೆ ಸಲ್ಲಿಸಲು ಸಜ್ಜಾಗಿದ್ದಾರೆ. ಬೈರಸಂದ್ರ ವಾರ್ಡ್ನಲ್ಲಿರುವ ಎಲ್.ಐ.ಸಿ ಕಾಲೋನಿಯ ಸ್ವಲ್ಪ ಭಾಗವನ್ನು ತಿಲಕ್ ನಗರ ವಾರ್ಡ್ಗೆ ಸೇರ್ಪಡೆ ಮಾಡಿದ್ದಾರೆ. ಅವೈಜ್ಞಾನಿಕ ವಾಡ್೯ ವಿಂಗಡಣೆಗೆ ಮಾಜಿ ಆಡಳಿತ ಪಕ್ಷದ ನಾಯಕ ಬೈರಸಂದ್ರ ನಾಗರಾಜ್ ರಿಂದ ಆಕ್ರೋಶ ಕೇಳಿಬಂದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications