BBMP Ward Delimitation: ಮೇಲ್ಮನವಿ ಪುರಸ್ಕರಿಸಿದ ಹೈಕೋರ್ಟ್- ಸರ್ಕಾರ, ಬಿಬಿಎಂಪಿಗೆ ನೋಟಿಸ್
ಬೆಂಗಳೂರು, ನವೆಂಬರ್ 24: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ವಿಂಗಡನೆ ಅಧಿಸೂಚನೆ ಕುರಿತ ಅರ್ಜಿಗಳ ಸಂಬಂಧ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ, ಶಾಸಕ ಎಂ.ಸತೀಶ್ ರೆಡ್ಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿದೆ. ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ಚುನಾವಣೆ ಆಯೋಗಕ್ಕೆ ನೋಟಿಸ್ ನೀಡಿದೆ.
ಬುಧವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠವು ರೀಟ್ ಅರ್ಜಿಗಳನ್ನು ಅಂಗೀಕರಿಸಿತು. ನಂತರ ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್ಇಸಿ) ಈ ಸಂಬಂಧ ನೋಟಿಸ್ ನೀಡಿದೆ.
2022ರ ಜುಲೈ 14 ರಂದು ವಾರ್ಡ್ಗಳ ವಿಂಗಡಣೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 7ರ ನಿಬಂಧನೆಗಳು ಒಂದು ವಾರ್ಡ್ ಅನ್ನು ಎರಡು ವಿಧಾನಸಭಾ ಕ್ಷೇತ್ರಗಳಾಗಿ ವಿಸ್ತರಿಸಬಾರದು ಎಂದು ಮೇಲ್ಮನವಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಆದರೆ ಅರ್ಜಿಗಳನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಅಂದು ವಜಾಗೊಳಿಸಿತ್ತು.

ವಾರ್ಡ್ ವಿಂಗಡನೆಯಲ್ಲಿ ಹುಳಿಮಾವು ವಾರ್ಡ್ (ಸಂಖ್ಯೆ 239) ಒಂದನ್ನು ಬೊಮ್ಮನಹಳ್ಳಿ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವುದು ಸರಿಯಾದ ಕ್ರಮವಲ್ಲ. ವಿಂಗಡಣೆಯಲ್ಲಿ ಲೋಪದೋಷಗಳು ಇವೆ. ಈ ಅಂಶವನ್ನು ಬಿಬಿಎಂಪಿ ಅಧಿಕಾರಿಗಳು ಒಪ್ಪಿಕೊಂಡಿದ್ದರು. ಆದರೆ ಈ ಕುರಿತಾ ಅರ್ಜಿಗಳಲ್ಲು ನ್ಯಾಯಾಲಯದಲ್ಲಿ ವಜಾಗೊಂಡಿದ್ದವು.
ಕೇವಲ ಹೊರಮಾವು ಮಾತ್ರವಲ್ಲದೇ ಅಕ್ಷಯ ಗಾರ್ಡನ್ ಲೇಔಟ್, ಸತ್ಯ ಸಾಯಿ ಲೇಔಟ್, ಶಿರಡಿ ಸಾಯಿನಗರ, ವಿಐಪಿ ಬಡಾವಣೆ ಮತ್ತು ಇನ್ನಿತರ ಕೆಲವು ಸ್ಥಳಗಳು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಇದು ಬಿಬಿಎಂಪಿ ಕಾಯ್ದೆಯ ಸೆಕ್ಷನ್ 7ರ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮುಖ್ಯವಾಗಿ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳ ವಿಂಗಡಣೆಯಲ್ಲಿ ಜನಸಂಖ್ಯೆಯ ಪ್ರಮಾಣ, ಅದರ ಅಂಕಿಅಂಶಗಳನ್ನು ಉಲ್ಲೇಖಿಸಲಾಗಿಲ್ಲ. ಇದ ಬಿಬಿಎಂಪಿ ಕಾಯ್ದೆಯ ಸೆಕ್ಷನ್ 7ರ ನಿಬಂಧನೆಗಳ ಸ್ಪಷ್ಟ ಉಲ್ಲಂಘನೆ ಆಗಿದೆ. ಈ ಹಿನ್ನೆಲೆ ಹೈಕೋರ್ಟ್ ಬೊಮ್ಮಾನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಸತೀಶ್ ರೆಡ್ಡಿ ಹಾಗೂ ಇನ್ನಿತರರು ಮೇಲ್ಮನವಿ ಸಲ್ಲಿಸಿದ್ದಾರೆ. ಸದ್ಯ ಹೈಕೋರ್ಟ್ ಅವರ ಅರ್ಜಿಗಳನ್ನು ಅಂಗೀಕರಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications