ವಿಶ್ವ ವನ್ಯಜೀವಿ ದಿನ: ವನ್ಯಜೀವಿಗಳ ಸರಕ್ಷಣೆಗಾಗಿ ಬಿಬಿಎಂಪಿಯ 'ವನ್ಯಜೀವಿ ಸಂರಕ್ಷಣಾ ವಾಹನ' ಸಂಚಾರ
ಇಂದು ಮಾರ್ಚ್ 03 ವಿಶ್ವ ವನ್ಯಜೀವಿ ದಿನ. ಇದರ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅರಣ್ಯ ವಿಭಾಗದ ವತಿಯಿಂದ 2 "ವನ್ಯಜೀವಿ ಸಂರಕ್ಷಣಾ ವಾಹನ"(ಗಳಿಗೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು.
ಬೆಂಗಳೂರು, ಮಾರ್ಚ್ 03: ಇಂದು ಮಾರ್ಚ್ 03 ವಿಶ್ವ ವನ್ಯಜೀವಿ ದಿನ. ಇದರ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅರಣ್ಯ ವಿಭಾಗದ ವತಿಯಿಂದ 2 "ವನ್ಯಜೀವಿ ಸಂರಕ್ಷಣಾ ವಾಹನ"(ಗಳಿಗೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅರಣ್ಯ ವಿಭಾಗದ ವತಿಯಿಂದ ಎಲ್ಲಾ 243 ವಾರ್ಡ್ ಗಳಲ್ಲಿ ವನ್ಯ ಪ್ರಾಣಿಗಳಾದ ಹಾವು, ಪಕ್ಷಿಗಳು, ಕೋತಿ ಸೇರಿದಂತೆ ಇತರ ಪ್ರಾಣಿಗಳನ್ನು ರಕ್ಷಿಸುವ ಸಲುವಾಗಿ 9 ವನ್ಯಜೀವಿ ಸಂರಕ್ಷಕರಿದ್ದಾರೆ. ನಗರದ ನಾಗರಿಕರು/ ಸಾರ್ವಜನಿಕರಿಂದ ದೂರು ಬಂದ ತಕ್ಷಣ ವನ್ಯ ಸಂರಕ್ಷರು ಸ್ಥಳಕ್ಕೆ ಭೇಟಿ ನೀಡಿ ವನ್ಯ ಜೀವಿಯನ್ನು ಸಂರಕ್ಷಿಸಿ ಅವುಗಳಿಗೆ ಪ್ರತಮ ಚಿಕಿತ್ಸೆ ನೀಡಿ ಹತ್ತಿರದ ಕಾಡಿಗೆ ಬಿಡಲಾಗುತ್ತದೆ ಎಂದರು.

ಪಾಲಿಕೆ ಅರಣ್ಯ ವಿಭಾಗದಲ್ಲಿ ವನ್ಯ ಜೀವಿ ಸಂರಕ್ಷಣೆಗಾಗಿ 1 ವಾಹನವು ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಪ್ರತ್ಯೇಕವಾಗಿ 2 ಹೊಸ ವನ್ಯಜೀವಿ ಸಂರಕ್ಷಣಾ ವಾಹನಗಳನ್ನು ಮೀಸಲಿಡಲಾಗಿದೆ. ಉದ್ಘಾಗಟನೆಗೊಂಡ ಈ ಪ್ರಸಕ್ತ ವಾಹನದಲ್ಲಿ ಒಬ್ಬ ಚಾಲಕ, ಇಬ್ಬರು ವನ್ಯಜೀವಿ ಸಂರಕ್ಷರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ವಿವಿಧ ಪ್ರಾಣಿ/ಪಕ್ಷಿಗಳಿಗೆ ವಿವಿಧ ರೀತಿಯ ರಕ್ಷಣೆಗೆ ಅಗತ್ಯವಾಗುವ ಸಲಕರಣೆಗಳು (ಚಿಕ್ಕ-ಚಿಕ್ಕ ಪ್ರಾಣಿಗಳನ್ನು ಹಿಡಿಯಲು ಸ್ಕೈ ಕೆನಲ್, ಹಕ್ಕಿಗಳನ್ನು ಹಿಡಿಯಲು ಬ್ಯಾಸ್ಕೆಟ್, ಹಾವುಗಳನ್ನು ಹಿಡಿಯಲು ಹುಕ್ ಮತ್ತು ಬ್ಯಾಗ್) ಲಭ್ಯವಿರಲಿವೆ ಎಂದು ಅವರು ತಿಳಿಸಿದರು.
ವನ್ಯ ಜೀವಿ ಸರಕ್ಷಣೆಗಾಗಿ ಸಾರ್ವಜನಿಕರು ಬಿಬಿಎಂಪಿಯ ಸಹಾಯವಾಣಿ ಸಂಖ್ಯೆ 08022225659, 08022221188 ಗೆ ಕರೆ ಮಾಡಿ ದೂರು ನೀಡಿದ ತಕ್ಷಣ ವನ್ಯ ಜೀವಿ ಸಂರಕ್ಷಕರು ವನ್ಯಜೀವಿ ಸಂರಕ್ಷಣಾ ವಾಹನದ ಮೂಲಕ ಕೂಡಲೆ ಸ್ಥಳಕ್ಕೆ ಭೇಟಿ ನೀಡಿ ವನ್ಯ ಜೀವಿಗಳ ಸಂಕ್ಷಣೆ ಮಾಡಿ ಹತ್ತಿರದ ಕಾಡಿಗೆ ಬಿಡಲಿದ್ದಾರೆ.

ಈ ಸಂದರ್ಭದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಪ್ರೀತಿ ಗೆಹ್ಲೋಟ್, ವಿಶೇಷ ಭೂಸ್ವಾಧೀನ ಅಧಿಕಾರಿಯಾದ ಪ್ರತೀಕ್ ಬಾಯಲ್, ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯಾದ ಸರೀನಾ ಸಿಕ್ಕಲಿಗರ್ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications