ಬಿಬಿಎಂಪಿಯಿಂದ ಫೆಬ್ರುವರಿ. 2 ರಿಂದ 5 ರವರೆಗೆ 'ಖಾತಾ ಮೇಳ' ಆಯೋಜನೆ
ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಫೆಬ್ರುವರಿ 02 ರಿಂದ 05 ರವರೆಗೆ 3 ದಿನ ಖಾತಾ ಮೇಳ ಹಮ್ಮಿಕೊಳ್ಳಲಾಗಿದೆ. ಆಸ್ತಿ ಖಾತೆ ಮಾಡಿಕೊಳ್ಳುವವರಿಗೆ ಇದೊಂದು ಸುವರ್ಣ ಅವಕಾಶ ಎಂದು ಬಿಬಿಎಂಪಿ ತಿಳಿಸಿದೆ.
ಬೆಂಗಳೂರು, ಜನವರಿ 25: ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ದಕ್ಷಿಣ ವಲಯ ವ್ಯಾಪ್ತಿಯಲ್ಲಿ 3 ದಿನಗಳ ಕಾಲ ಖಾತಾ ಮೇಳ ಹಮ್ಮಿಕೊಳ್ಳಲಾಗಿದೆ.
ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಖಾತಾಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಮುಂದಿನ ತಿಂಗಳು ಫೆಬ್ರುವರಿ 02 ರಿಂದ ಫೆಬ್ರುವರಿ 05 ರವರೆಗೆ ಖಾತಾ ಮೇಳವನ್ನು ಆಯೋಜಿಸಲಾಗಿದೆ.
ನಗರದ ಎಲ್ಲಾ 8 ವಲಯಗಳಲ್ಲಿ ಒಟ್ಟು 2199 ಅರ್ಜಿಗಳು ವಿಲೇವಾರಿಗೆ ಬಾಕಿಯಿದ್ದು, ದಕ್ಷಿಣ ವಲಯ ವ್ಯಾಪ್ತಿಯಲ್ಲಿ 317 ಅರ್ಜಿಗಳು ವಿಲೇವಾರಿಗೆ ಬಾಕಿಯಿದೆ. ಈ ಪೈಕಿ ದಕ್ಷಿಣ ವಲಯದ ಎಲ್ಲಾ ನಾಗರಿಕರು ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ, ತಮ್ಮ ಆಸ್ತಿಗಳಿಗೆ ಖಾತೆ ಹಾಗೂ ಖಾತೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳಲು ವಲಯ ಆಯುಕ್ತರಾದ ಜಯರಾಮ್ ರಾಯ್ಪುರ ಅವರ ಮನವಿ ಮಾಡಿದ್ದಾರೆ. ಜೊತೆಗೆ ಮೂರು ದಿನದ ಖಾತಾ ಮೇಳದ ಸದುಪಯೋಗ ಮಾಡಿಕೊಳ್ಳುವಂತೆ ಕೋರಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಒಟ್ಟು 5232 ಖಾತಾ ಅರ್ಜಿಗಳ ಪೈಕಿ, ಇದುವರೆಗೆ 3038 ಖಾತಾ ಸಂಬಂಧಿತ ಅರ್ಜಿಗಳು ವಿಲೇವಾರಿಯಾಗಿವೆ. ಆದರೆ 2199 ಬಾಕಿ ಉಳಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿನ ಬಾಕಿ ಉಳಿದಿರುವ 2199 ಖಾತಾ ಅಂಕಿ ಸಂಖ್ಯೆ ನೋಡುವುದಾದರೆ...
ಯಲಂಕ ವಲಯ - 57
ಮಹದೇವಪುರ ವಲಯ - 459
ದಾಸರಹಳ್ಳಿ ವಲಯ - 124
ರಾಜರಾಜೇಶ್ವರಿ ನಗರ - 302
ಬೆಂಗಳೂರು ಪಶ್ಚಿಮ - 326

ಬೆಂಗಳೂರು ದಕ್ಷಿಣ - 317
ಬೆಂಗಳೂರು ಪೂರ್ವ- 389
ಬೊಮ್ಮನಹಳ್ಳಿ ವಲಯ - 125
ಒಟ್ಟು - 2199
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications