ಮನೆಮನೆಗೆ ವೋಟರ್ ಸ್ಲಿಪ್ ವಿತರಣೆ ಕಾರ್ಯ ಆರಂಭ
ಬೆಂಗಳೂರು,ಮೇ 3: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರ ಮನೆಗೆ ಬಾಗಿಲಿಗೆ ಗುರುವಾರದಿಂದ ವೋಟರ್ ಸ್ಲಿಪ್ ತಲುಪಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.
ವೋಟರ್ ಸ್ಲಿಪ್ ಜತೆಗೆ ಮತದಾನದ ಮಾರ್ಗದರ್ಶಿ ಕೈಪಿಡಿಯನ್ನು ಸಹ ನೀಡಲಾಗುತ್ತದೆ. ನಗರದಲ್ಲಿ ಒಟ್ಟು 91,13,095 ಮಂದಿ ಮತದಾರರಿದ್ದು, ಚುನಾವಣಾ ಸಿಬ್ಬಂದಿಯು ಮನೆ ಮನೆಗೆ ಭೇಟಿ ನೀಡಿ ವೋಟರ್ ಸ್ಲಿಪ್ ಗಳನ್ನು ವಿತರಿಸಲಿದ್ದಾರೆ.
ಈ ವೋಟರ್ ಸ್ಲಿಪ್ ನಲ್ಲಿ ಮತದಾರರ ಹೆಸರು, ಭಾವಚಿತ್ರ, ಮತಗಟ್ಟೆ ಸಂಖ್ಯೆ, ಕ್ರಮ ಸಂಖ್ಯೆಯ ವಿವರವಿರಲಿದೆ. ಇದೇ ಮೊದಲ ಬಾರಿಗೆ ಮತದಾನದ ವ್ಯವಸ್ಥೆ ಕುರಿತಂತೆ ಮಾಹಿತಿ ನೀಡುವ ಕೈಪಿಡಿಯನ್ನೂ ಕೂಡ ನೀಡಲಾಗುತ್ತದೆ. ಅಲ್ಲದೆ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿದವರಿಗೆ ಚುನಾವಣಾ ಗುರುತಿನ ಚೀಟಿಯನ್ನು ಇದೇ ಸಂದರ್ಭದಲ್ಲಿ ವಿತರಿಸಲಿದ್ದಾರೆ.

ನಗರ ಜಿಲ್ಲಾಡಳಿತ ಮತ್ತು ಪಾಲಿಕೆಯ 8278 ಮಂದಿ ಸಿಬ್ಬಂದಿ ಮತದಾರರ ಮನೆ ಬಾಗಿಲಿಗೆ ವೋಟರ್ ಸ್ಲಿಪ್, ಮತದಾನ ಮಾರ್ಗದರ್ಶಿ ಕೈಪಿಡಿ ಮತ್ತು ಚುನಾವಣಾ ಗುರುತಿನ ಚೀಟಿಯನ್ನು ತಲುಪಿಸುವ ಕೆಲಸ ಮಾಡಲಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮೂರು ದಿನಗಳ ಕಾಲ ವೋಟರ್ ಸ್ಲಿಪ್ ಗಳನ್ನು ವಿತರಿಸಲಾಗುತ್ತದೆ. ಮನೆಯಲ್ಲಿ ಲಭ್ಯವಿಲ್ಲದವರಿಗೆ ಮತದಾನದ ದಿನದಂದದು ಮತಗಟ್ಟೆಗಳ ಬಳಿಯೇ ವೋಟರ್ ಸ್ಲಿಪ್ಗಳನ್ನು ವಿತರಿಸಲಾಗುತ್ತದೆ. ಇದಕ್ಕೂ ಅಗತ್ಯ ಸಿದ್ಧತೆಗಳನ್ನು ಪಾಲಿಕೆ ಕೈಗೊಂಡಿದೆ.
ಪಾಲಿಕೆ ಸಿಬ್ಬಂದಿಯು ಮೇ 6ರವರೆಗೆ ವೋಟರ್ ಸ್ಲಿಪ್, ಮತದಾನ ಮಾರ್ಗದರ್ಶಿ ಕೈಪಿಡಿಯನ್ನು ಮತದಾರರ ಮನೆ ಮನೆಗೆ ತೆರಳಿ ವಿತರಣೆ ಮಾಡಲಿದ್ದಾರೆ. ಈ ಬಾರಿ ಹೊಸದಾಗಿ 4.40 ಲಕ್ಷ ಮಂದಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications