ಮನೆಮನೆಗೆ ವೋಟರ್ ಸ್ಲಿಪ್ ವಿತರಣೆ ಕಾರ್ಯ ಆರಂಭ
ಬೆಂಗಳೂರು,ಮೇ 3: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರ ಮನೆಗೆ ಬಾಗಿಲಿಗೆ ಗುರುವಾರದಿಂದ ವೋಟರ್ ಸ್ಲಿಪ್ ತಲುಪಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.
ವೋಟರ್ ಸ್ಲಿಪ್ ಜತೆಗೆ ಮತದಾನದ ಮಾರ್ಗದರ್ಶಿ ಕೈಪಿಡಿಯನ್ನು ಸಹ ನೀಡಲಾಗುತ್ತದೆ. ನಗರದಲ್ಲಿ ಒಟ್ಟು 91,13,095 ಮಂದಿ ಮತದಾರರಿದ್ದು, ಚುನಾವಣಾ ಸಿಬ್ಬಂದಿಯು ಮನೆ ಮನೆಗೆ ಭೇಟಿ ನೀಡಿ ವೋಟರ್ ಸ್ಲಿಪ್ ಗಳನ್ನು ವಿತರಿಸಲಿದ್ದಾರೆ.
ಈ ವೋಟರ್ ಸ್ಲಿಪ್ ನಲ್ಲಿ ಮತದಾರರ ಹೆಸರು, ಭಾವಚಿತ್ರ, ಮತಗಟ್ಟೆ ಸಂಖ್ಯೆ, ಕ್ರಮ ಸಂಖ್ಯೆಯ ವಿವರವಿರಲಿದೆ. ಇದೇ ಮೊದಲ ಬಾರಿಗೆ ಮತದಾನದ ವ್ಯವಸ್ಥೆ ಕುರಿತಂತೆ ಮಾಹಿತಿ ನೀಡುವ ಕೈಪಿಡಿಯನ್ನೂ ಕೂಡ ನೀಡಲಾಗುತ್ತದೆ. ಅಲ್ಲದೆ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿದವರಿಗೆ ಚುನಾವಣಾ ಗುರುತಿನ ಚೀಟಿಯನ್ನು ಇದೇ ಸಂದರ್ಭದಲ್ಲಿ ವಿತರಿಸಲಿದ್ದಾರೆ.

ನಗರ ಜಿಲ್ಲಾಡಳಿತ ಮತ್ತು ಪಾಲಿಕೆಯ 8278 ಮಂದಿ ಸಿಬ್ಬಂದಿ ಮತದಾರರ ಮನೆ ಬಾಗಿಲಿಗೆ ವೋಟರ್ ಸ್ಲಿಪ್, ಮತದಾನ ಮಾರ್ಗದರ್ಶಿ ಕೈಪಿಡಿ ಮತ್ತು ಚುನಾವಣಾ ಗುರುತಿನ ಚೀಟಿಯನ್ನು ತಲುಪಿಸುವ ಕೆಲಸ ಮಾಡಲಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮೂರು ದಿನಗಳ ಕಾಲ ವೋಟರ್ ಸ್ಲಿಪ್ ಗಳನ್ನು ವಿತರಿಸಲಾಗುತ್ತದೆ. ಮನೆಯಲ್ಲಿ ಲಭ್ಯವಿಲ್ಲದವರಿಗೆ ಮತದಾನದ ದಿನದಂದದು ಮತಗಟ್ಟೆಗಳ ಬಳಿಯೇ ವೋಟರ್ ಸ್ಲಿಪ್ಗಳನ್ನು ವಿತರಿಸಲಾಗುತ್ತದೆ. ಇದಕ್ಕೂ ಅಗತ್ಯ ಸಿದ್ಧತೆಗಳನ್ನು ಪಾಲಿಕೆ ಕೈಗೊಂಡಿದೆ.
ಪಾಲಿಕೆ ಸಿಬ್ಬಂದಿಯು ಮೇ 6ರವರೆಗೆ ವೋಟರ್ ಸ್ಲಿಪ್, ಮತದಾನ ಮಾರ್ಗದರ್ಶಿ ಕೈಪಿಡಿಯನ್ನು ಮತದಾರರ ಮನೆ ಮನೆಗೆ ತೆರಳಿ ವಿತರಣೆ ಮಾಡಲಿದ್ದಾರೆ. ಈ ಬಾರಿ ಹೊಸದಾಗಿ 4.40 ಲಕ್ಷ ಮಂದಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications