ನಿಮ್ಮ ಏರಿಯಾದಲ್ಲಿರುವ ಪ್ರತಿಮೆ, ಪುತ್ತಳಿಗಳು ಕಾನೂನುಬದ್ಧವಾಗಿದೆಯೇ?
ಬೆಂಗಳೂರು, ನ.17: ಬೆಂಗಳೂರಿನಲ್ಲಿ ಯಾವ ಬೀದಿಗೆ ಹೋದರೂ ಒಂದಲ್ಲ ಒಂದು ಪ್ರತಿಮೆ ಅಥವಾ ಪುತ್ತಳಿ ಕಾಣಿಸುವುದು ಪಕ್ಕ. ಸಾಹಿತಿಗಳು, ನಟರು, ಹೋರಾಟಗಾರರ ಪ್ರತಿಮೆಗಳು ಎಲ್ಲೆಂದರಲ್ಲಿ ಕಾಣಸಿಗುತ್ತವೆ. ಆದರೆ, ಈ ಎಲ್ಲಾ ಪ್ರತಿಮೆಗಳು ನಿಜಕ್ಕೂ ಕಾನೂನು ಬದ್ದವಾಗಿವೆಯೇ ಎಂಬ ಪ್ರಶ್ನೆಗೆ ಬಿಬಿಎಂಪಿ ಉತ್ತರ ಹುಡುಕಲು ಹೊರಟಿದೆ.
ಬೆಂಗಳೂರಿನಲ್ಲಿ ಎಷ್ಟು ಪುತ್ತಳಿಗಳು ಮತ್ತು ಪ್ರತಿಮೆಗಳಿವೆ ಎಂಬ ಬಗ್ಗೆ ಮಹಾನಗರ ಪಾಲಿಕೆಗೂ ಸರಿಯಾದ ಮಾಹಿತಿಯಿಲ್ಲ. ಆಶ್ಚರ್ಯವಾದರೂ ಇದು ಸತ್ಯ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂಜಿನಿಯರ್ಗಳಿಗೆ ನಗರದಲ್ಲಿನ ಪ್ರತಿಮೆಗಳ ಸಂಖ್ಯೆಯನ್ನು ಎಣಿಕೆ ಮಾಡಲು ತಿಳಿಸಿದೆ.
ಜೊತೆಗೆ ಈ ಪ್ರತಿಮೆಗಳು ಕಾನೂನುಬದ್ಧವಾಗಿದೆಯೇ ಎಂದು ಪರಿಶೀಲಿಸುವ ಕಾರ್ಯವನ್ನು ವಹಿಸಲಾಗಿದೆ.
ಇನ್ನು, ಇಷ್ಟು ಪ್ರತಿಮೆಗಳಿದ್ದರೂ ಕೂಡ ಪ್ರತಿಮೆಗಳನ್ನು ನಿರ್ಮಿಸಲು ನಾಗರಿಕರು ಮತ್ತು ಸಂಸ್ಥೆಗಳು ಬಿಬಿಎಂಪಿಗೆ ಅರ್ಜಿಗಳನ್ನು ಸಲ್ಲಿಸುವುದನ್ನು ಮುಂದುವರೆಸಿದ್ದಾರೆ. ದಿನಕ್ಕೆ ಸರಾಸರಿ ಎಂಟು ಅರ್ಜಿಗಳಾದರೂ ಬಿಬಿಎಂಪಿ ಕಚೇರಿಗೆ ಬರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ, ಪುನೀತ್ ಪ್ರತಿಮೆ ನಿರ್ಮಾಣಕ್ಕೆ ಗರಿಷ್ಠ ಅರ್ಜಿ
ಬಿಬಿಎಂಪಿ ಅಧಿಕಾರಿಗಳು ದಿನಕ್ಕೆ ಸರಾಸರಿ ಎಂಟು ಮನವಿಗಳನ್ನಾದರೂ ಪಡೆಯುತ್ತಾರೆ. ಅವುಗಳಲ್ಲಿ ಹೆಚ್ಚಿನವು ರಾಜಕಾರಣಿಗಳು ಮತ್ತು ಗಣ್ಯರ ಪ್ರತಿಮೆಗಳನ್ನು ಸ್ಥಾಪಿಸಲು ಸಲ್ಲಿಸಿರುವ ಅರ್ಜಿಗಳಾಗಿವೆ. ಸದ್ಯ ಬೆಂಗಳೂರಿನಲ್ಲಿ ಪುನೀತ್ ರಾಜ್ಕುಮಾರ್ ಮತ್ತು ಕೆಂಪೇಗೌಡ ಪ್ರತಿಮೆಗಳನ್ನು ಸ್ಥಾಪಿಸಲು ಗರಿಷ್ಠ ಅರ್ಜಿಗಳು ಬಂದಿವೆ ಎಂದು ಮಾಹಿತಿ ನೀಡಿದ್ದಾರೆ.

ಎಷ್ಟು ಪ್ರತಿಮೆಗಳು ಕಾನೂನುಬದ್ಧವಾಗಿವೆ ಎಂದು ದಾಖಲೆಯಿಲ್ಲ!
''ಒಂದು ಸ್ಥಳದಲ್ಲಿ ಎಷ್ಟು ಪ್ರತಿಮೆಗಳಿವೆ. ಅವುಗಳಲ್ಲಿ ಎಷ್ಟು ಕಾನೂನುಬದ್ಧವಾಗಿವೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ. ಈ ಹಿಂದೆ ಬಿಬಿಎಂಪಿ ಕೌನ್ಸಿಲ್ ಅಧಿವೇಶನದಲ್ಲಿ ಪುತ್ತಳಿ ಮತ್ತು ಪ್ರತಿಮೆಗಳನ್ನು ಸ್ಥಾಪಿಸಲು ಅರ್ಜಿಗಳನ್ನು ತೆರವುಗೊಳಿಸಲಾಗಿದೆ. ಆದರೆ ಕಳೆದ ಎರಡು ವರ್ಷಗಳಿಂದ ಅಧಿವೇಶನ ನಡೆದಿಲ್ಲ. ಹೀಗಾಗಿ ಏನಾಗಿದೆ ಎಂಬುದಕ್ಕೆ ದಾಖಲೆಗಳಿಲ್ಲ" ಎಂದು ಹೆಸರು ಹೇಳಲು ಇಚ್ಛಿಸದ ಹಿರಿಯ ಬಿಬಿಎಂಪಿ ಅಧಿಕಾರಿ ಮಾಹಿತಿ ತಿಳಿಸಿದ್ದಾರೆ.
"ನಾವು ಈ ಪ್ರತಿಮೆಗಳ ಎಣಿಕೆಯನ್ನು ಮಾಡುವಾಗ, ಎಲ್ಲಾ ವಲಯ ಕಚೇರಿಗಳಿಗೆ ವಾಡ್ವಾರು ಕಡತಗಳನ್ನು ಹುಡುಕಲು ಮತ್ತು ಎಲ್ಲಾ ಡೇಟಾವನ್ನು ಒಗ್ಗೂಡಿಸಲು ನಿರ್ದೇಶಿಸಿದ್ದೇವೆ. ಆದರೆ ಇದಕ್ಕೆ ಕೌನ್ಸಿಲರ್ಗಳು ಎಂದಿಗೂ ಪ್ರಾಮುಖ್ಯತೆ ನೀಡಲಿಲ್ಲ'' ಎಂದು ಹಿರಿಯ ಅಧಿಕಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ಪಾದಚಾರಿ ಮಾರ್ಗಗಳಲ್ಲಿ ಇವೆ ಹಲವು ಪ್ರತಿಮೆಗಳು
ಕರ್ನಾಟಕ ಹೈಕೋರ್ಟ್ ಬಿಬಿಎಂಪಿ ಎಂಜಿನಿಯರ್ಗಳಿಗೆ ಫುಟ್ಪಾತ್ಗಳನ್ನು ತೆರವುಗೊಳಿಸುವಂತೆ ಸೂಚಿಸಿದೆ. ಹೀಗಾಗಿ ಈ ಎಣಿಕೆ ಕ್ರಮ ಮಹತ್ವದ್ದಾಗಿದೆ. ಏಕೆಂದರೆ, ನಗರದಲ್ಲಿರುವ ನೂರಾರು ಪ್ರತಿಮೆಗಳು ಪಾದಚಾರಿ ಮಾರ್ಗಗಳ ಮಧ್ಯದಲ್ಲಿ ನಿಂತಿವೆ.
ಬಿಬಿಎಂಪಿಯ ಎಂಜಿನಿಯರಿಂಗ್ ಮತ್ತು ಕಂದಾಯ ವಿಭಾಗಗಳು ಹೈಕೋರ್ಟ್ ಆದೇಶದ ಬಳಿಕ ಈ ಪುತ್ತಳಿಗಳು ಮತ್ತು ಪ್ರತಿಮೆಗಳ ನಿರ್ಮಾಣಕ್ಕೆ ಅನುಮತಿ ನೀಡಿದವರು ಯಾರು ಎಂದು ತಿಳಿಯಲು ಹೆಚ್ಚಿನ ಕೆಲಸ ಮಾಡುತ್ತಿದ್ದಾರೆ.

ಪ್ರತಿಮೆ ತೆರವುಗೊಳಿಸುವುದು ಬಹಳ ಸೂಕ್ಷ್ಮ ವಿಚಾರ
"ಟ್ರಾಫಿಕ್ ಜಂಕ್ಷನ್ಗಳಲ್ಲಿ ಅನೇಕ ಪುತ್ತಳಿಗಳು ಮತ್ತು ಪ್ರತಿಮೆಗಳನ್ನು ಸ್ಥಾಪಿಸಿರುವುದರಿಂದ ವಾಹನ ಸವಾರರಿಗೆ ಭಾರಿ ಸಮಸ್ಯೆ ಉಂಟಾಗಿರುವುದನ್ನು ನಾವು ನೋಡಿದ್ದೇವೆ. ಪ್ರತಿಮೆ, ಪುತ್ತಳಿಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಾಗ ಎಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ" ಎಂದಿದ್ದಾರೆ.
ಅಕ್ರಮ ಪ್ರತಿಮೆಗಳನ್ನು ತೆರವುಗೊಳಿಸುವ ಮುನ್ನ ಅಲ್ಲಿನ ಸ್ಥಿತಿಯನ್ನು ತಿಳಿದುಕೊಳ್ಳಬೇಕು. ಇದು ಸೂಕ್ಷ್ಮ ವಿಷಯವಾಗಿರುವುದರಿಂದ, ಎಲ್ಲಾ ಕಾನೂನು ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುತ್ತಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications