ಬೀಡಿ-ಸಿಗರೇಟ್ ಸೇದುವವರಿಗೆ ಬಂತು ಹೊಸ ರೂಲ್ಸ್!
ರಾಜಧಾನಿ ಬೆಂಗಳೂರಿನಲ್ಲಿ ಸಿಗರೇಟ್, ಬೀಡಿ ಸೇದುವವರ ಸಂಖ್ಯೆ ಅಧಿಕವಾಗಿದೆ. ಈ ಧೂಮಪಾನ ಮಾಡುವುದರಿಂದ ಭಾರಿ ಪ್ರಮಾಣದ ಕಸ ಕೂಡ ಸಂಗ್ರಹವಾಗುತ್ತಿರುವ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಳವಳ ವ್ಯಕ್ತಪಡಿಸಿತ್ತು. ಚಹಾ ಅಂಗಡಿ, ಮನೆಗಳು ಸೇರಿದಂತೆ ಬಹುತೇಕ ಎಲ್ಲೆಡೆಯೂ ಸಿಗರೇಟ್ ಸೇದಿ ಬಿಸಾಡಿದ ತುಂಡುಗಳು ಹೆಚ್ಚಾಗಿ ಸಂಗ್ರಹವಾಗುತ್ತಿದೆ. ಇದನ್ನು ತಡೆಗಟ್ಟಲು ಬಿಬಿಎಂಪಿ ಹೊಸ ಪ್ಲ್ಯಾನ್ ಮಾಡಿಕೊಂಡಿದೆ.
ಈ ಸಿಗರೇಟ್ ತುಂಡುಗಳ ವೈಜ್ಞಾನಿಕ ವಿಲೇವಾರಿಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಎರಡು ವರ್ಷಗಳ ಹಿಂದೆಯೇ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಆದರೆ ಬೆಂಗಳೂರಿನಲ್ಲಿ ಇದು ಅನುಷ್ಠಾನಗೊಂಡಿರಲಿಲ್ಲ. ಈಗ ಇದರ ಬಗ್ಗೆ ಆಸಕ್ತಿ ತೋರಿರುವ ಬಿಬಿಎಂಪಿ ಸಿಗರೇಟ್ ಹಾಗೂ ಬೀಡಿ ತುಂಡುಗಳನ್ನು ಬಿಸಾಡಲು ಪ್ರತ್ಯೇಕವಾದ ಕಸದ ಬುಟ್ಟಿಗಳನ್ನು ಅಳವಡಿಸಲು ಚಿಂತನೆ ನಡೆಸಿದೆ.

ಬೆಂಗಳೂರಿನಲ್ಲಿ ಪ್ರತಿದಿನವೂ ಲಕ್ಷಾಂತರ ಸಿಗರೇಟ್ ತುಂಡುಗಳನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತಿದೆ. ಈ ತುಂಡುಗಳು ಹಾನಿಕಾರಕ ಅಂಶಗಳನ್ನು ಒಳಗೊಂಡಿರುವುದರಿಂದ ಚರಂಡಿ, ನೀರು, ಮಣ್ಣಿನಲ್ಲಿ ಸೇರಿಕೊಂಡು ಪರಿಸರವನ್ನು ಕಲುಷಿತಗೊಳಿಸುತ್ತಿದೆ ಎಂದು ಹೇಳಲಾಗಿದೆ. ಹಾಗಾಗಿ ಈ ಸಿಗರೇಟ್, ಬೀಡಿ ತುಂಡುಗಳ ಮುಕ್ತಿಗೆ ಬಿಬಿಎಂಪಿ ಈ ಪ್ಲ್ಯಾನ್ ಮಾಡಿಕೊಂಡಿದೆ.
ಈ ಯೋಜನೆಯಡಿ ಬಿಬಿಎಂಪಿಯು ಸಿಗರೇಟ್ ತಯಾರಿಸುವ ಮುಂಚೂಣಿ ಸಂಸ್ಥೆಯಾಗಿರುವ ಐಟಿಸಿ ಸಹಯೋಗದಲ್ಲೇ ಸಿಗರೇಟ್ ತುಂಡುಗಳನ್ನು ಕಲೆಕ್ಟ್ ಮಾಡಲು ಬೆಂಗಳೂರಿನ ಹಲವು ಕಡೆಗಳಲ್ಲಿ ಕಸದ ಬುಟ್ಟಿಗಳನ್ನು ಅಳವಡಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಈ ಡಸ್ಟ್ಬಿನ್ ಅಳವಡಿಕೆಗೆ ಈಗಾಗಲೇ ಕೆಲವು ಸ್ಥಳಗಳನ್ನು ಪಟ್ಟಿ ಮಾಡಲಾಗಿದ್ದು, ಶೀಘ್ರದಲ್ಲೇ ಇದು ರೂಲ್ಸ್ ಎಲ್ಲೆಡೆ ಜಾರಿಯಾಗಲಿದೆ.
ಈ ಕಸದ ಬುಟ್ಟಿಗಳಲ್ಲಿ ಸಂಗ್ರಹವಾಗುವ ಸಿಗರೇಟ್ ತುಂಡುಗಳ ಕಸದಿಂದ ಇಂಧನ ಉತ್ಪಾದಿಸುವುದು ಅಥವಾ ಮರುಬಳಕೆ ಮಾಡುವ ಪ್ರಕ್ರಿಯೆಯೂ ನಡೆಯಲಿದೆ ಎಂದು ಹೇಳಲಾಗಿದೆ.
ಸಿಗರೇಟ್ ತಯಾರಿಸುವ ಕಂಪನಿಗಳ ಮೇಲೆಯೇ ಸಿಗರೇಟ್ ತುಂಡುಗಳ ಸಂಗ್ರಹ ಹಾಗೂ ಮರುಬಳಕೆ ಜವಾಬ್ದಾರಿ ನೀಡಲಾಗುವುದು. ಈ ಸಂಬಂಧ ಬಿಬಿಎಂಪಿ ಈಗಾಗಲೇ ಸಿಗರೇಟ್ ತಯಾರಕ ಕಂಪನಿಗಳೊಂದಿಗೆ ಚರ್ಚೆಯೂ ನಡೆಸಿದೆ. ಈ ನಿಯಮಕ್ಕೆ ಸಂಸ್ಥೆಗಳು ಕೂಡ ಒಪ್ಪಿಗೆ ನೀಡಿವೆ. ಜೊತೆಗೆ ಸಿಗರೇಟ್ ಪ್ಯಾಕೆಟ್ ಮೇಲೆಯೇ ವಿಲೇವಾರಿ ನಿಯಮಗಳನ್ನು ಮುದ್ರಿಸಲು ರಾಜ್ಯ ಸರ್ಕಾರದ ಅಧೀನ ಸಂಸ್ಥೆ ತಂಬಾಕು ನಿಯಂತ್ರಣ ಕೋಶ ಕೂಡ ಮುಂದಾಗಿದೆ.
ಒಂದು ವೇಳೆ ಈ ಸಿಗರೇಟ್ ತುಂಡುಗಳ ಸಂಗ್ರಹ ಹಾಗೂ ಮರುಬಳಕೆ ಪ್ರಕ್ರಿಯೆ ವಿಫಲವಾದರೆ, ಸಿಗರೇಟ್ ತಯಾರಕ ಸಂಸ್ಥೆಗಳ ಮೇಲೆಯೇ ಕ್ರಮ ಜರುಗಿಸಲು ಸಹ ಬಿಬಿಎಂಪಿ ನಿರ್ಧರಿಸಿದೆ ಎನ್ನಲಾಗಿದೆ. ಸಿಗರೇಟ್ ತುಂಡುಗಳ ವೈಜ್ಞಾನಿಕ ಸಂಗ್ರಹಣೆ ವಿಳಂಬವಾಗಿದೆ ಎಂದು ನಾಗರಿಕ ಸಂಸ್ಥೆ ಒಪ್ಪಿಕೊಂಡಿದೆ. ವಿಳಂಬಕ್ಕೆ ಸಿಗರೇಟ್ ತಯಾರಕರನ್ನು ದೂಷಿಸಿದೆ. ಬೆಂಗಳೂರಿನ ಎರಡು ವಾರ್ಡ್ಗಳಲ್ಲಿ ಪ್ರಾಯೋಗಿಕವಾಗಿ ಸಿಗರೇಟ್ ತುಂಡು ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಐಟಿಸಿಗೆ ಪತ್ರ ಕಳುಹಿಸಿದೆ.
ಸಿಗರೇಟ್ ಸೇದುವವರು ಕೂಡ ಈ ನಿಯಮಗಳನ್ನು ಪಾಲಿಸಬೇಕು. ಸ್ಟೈಲಾಗಿ ಸಿಗರೇಟ್ ಸೇದಿದ ನಂತರ ತುಂಡನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಪರಿಸರ ಮಾಲಿನ್ಯ ದೃಷ್ಟಿಯಿಂದ ಸೇದಿದ ನಂತರ ತುಂಡನ್ನು ನೇರವಾಗಿ ಡಸ್ಟ್ಬಿನ್ಗಳಲ್ಲಿ ವಿಲೇವಾರಿ ಮಾಡಿದರೆ, ಅರ್ಧ ಕೆಲಸ ಯಶಸ್ವಿಯಾಗಿ ಮುಗಿಯುತ್ತದೆ ಎಂದು ಹೇಳಲಾಗಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications